Homeಮುಖಪುಟಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆ ಕ್ಷೇತ್ರದಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೆ ಇರುವುದು ಒಳ್ಳೆಯದೆ. ಏಕೆಂದರೆ, ಯೋಗಿ ಆದಿತ್ಯನಾಥ್ ಅವರು ಇಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಬೇಕಾಗುತ್ತಿತ್ತು ಎಂದು ಇಲ್ಲಿನ ರಾಮ ಮಂದಿರದ ಪ್ರಧಾನ ಅರ್ಚಕರು ಸೋಮವಾರ ಹೇಳಿದ್ದಾರೆ.

“ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳಿಂದಾಗಿ ಇಲ್ಲಿನ ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸಲಾಗಿದೆ. ಇದರಿಂದ ಆದಿತ್ಯನಾಥ್ ಅವರು ಜನರ ವಿರೋಧವನ್ನು ಎದುರಿಸಬೇಕಾಗುತ್ತದೆ ಹೀಗಾಗಿ ಗೋರಖ್‌ಪುರದಿಂದ ಸ್ಪರ್ಧಿಸಬೇಕು ಎಂದು ನಾನು ಈ ಹಿಂದೆ ಸಲಹೆ ನೀಡಿದ್ದೆ” ಎಂದು ತಾತ್ಕಾಲಿಕ ರಾಮಲಲ್ಲಾ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಆದಿತ್ಯನಾಥ್ ಅವರು ಅಯೋಧ್ಯೆಯಿಂದ ಸ್ಪರ್ಧಿಸಬಾರದು ಎಂದು ಹೇಗೆ ಸೂಚಿಸಿದ್ದಿರಿ ಎಂಬ ಪ್ರಶ್ನೆಗೆ, ರಾಮ ಲಲ್ಲಾ ಅವರನ್ನು ಕೇಳಿದ ನಂತರ ಸಲಹೆ ನೀಡಿದ್ದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ಆದಿತ್ಯನಾಥ್‌‌ ಅಯೋಧ್ಯೆಯಲ್ಲಿ ಸ್ಪರ್ಧಿಸುವ ಕನಸು ಭಗ್ನವಾಗಿದ್ದೇಕೆ?

’ಇಲ್ಲಿನ ದಾರ್ಶನಿಕರು ಭಿನ್ನಾಭಿಪ್ರಾಯ ಹೊಂದಿದ್ದಾರೆ. ಮನೆಗಳು ಮತ್ತು ಅಂಗಡಿಗಳನ್ನು ನೆಲಸಮ ಮಾಡಿರುವುದರಿಂದ ಮನೆ, ಅಂಗಡಿ ಕಳೆದುಕೊಂಡವರು ಆದಿತ್ಯನಾಥ್ ವಿರುದ್ಧವಾಗಿದ್ದಾರೆ. ಹೀಗಾಗಿ ಅವರು ಗೋರಖ್‌ಪುರ್‌ ಹೋಗುವುದು ಉತ್ತಮ ಎಂದು ನಾನು ಹೇಳಿದೆ. ಇಲ್ಲಿಂದ ಅವರು ಗೆಲ್ಲುತ್ತಿದ್ದು. ಆದರೆ, ಸಾಕಷ್ಟು ಸಮಸ್ಯೆ ಎದುರಿಸಬೇಕಾಗಿತ್ತು’ ಎಂದು 84 ವರ್ಷದ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ಚುನಾವಣೆ ಹಿನ್ನೆಲೆ ಆಶೀರ್ವಾದ ಪಡೆಯಲು ಸ್ಥಳೀಯ ರಾಜಕಾರಣಿಗಳು ತಮ್ಮ ಬಳಿಗೆ ಬರಲು ಪ್ರಾರಂಭಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸರುವ ಅರ್ಚಕರು, “ಇದುವರೆಗೂ ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಅವರ ಪತ್ನಿ ನನ್ನ ಬಳಿಗೆ ಬಂದಿದ್ದಾರೆ, ಪವನ್ ಪಾಂಡೆ ಎಸ್‌ಪಿಯ ಪ್ರಬಲ ಅಭ್ಯರ್ಥಿ” ಎಂದು ಹೇಳಿದ್ದಾರೆ.

ಪವನ್ ಪಾಂಡೆ ಅವರು 2012 ರ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆಯಿಂದ ಗೆದ್ದ, ಹಿಂದಿನ ಅಖಿಲೇಶ್ ಯಾದವ್ ಸರ್ಕಾರದಲ್ಲಿ ಸಚಿವರಾಗಿದ್ದರು. 2017 ರಲ್ಲಿ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ಅಯೋಧ್ಯೆ ಕ್ಷೇತ್ರವನ್ನು ಗೆದ್ದಿದ್ದರು.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಕಣಕ್ಕೆ ಇಳಿಯುತ್ತಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಡಿತ್ತು. ಆದರೆ ಬಿಜೆಪಿ ನಾಯಕತ್ವವು ಅವರನ್ನು ಗೋರಖ್‌ಪುರ (ನಗರ) ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಿದೆ.

ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳು – ಅಯೋಧ್ಯೆ, ಬಿಕಾಪುರ್, ರುದೌಲಿ, ಗೋಸೈಗಂಜ್ ಮತ್ತು ಮಿಲ್ಕಿಪುರ್ ಈಗ ಬಿಜೆಪಿ ವಶದಲ್ಲಿದೆ. ಅಯೋಧ್ಯೆಯಲ್ಲಿ ಫೆಬ್ರವರಿ 27 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ-2022: ಗೋರಖ್‌ಪುರದಿಂದ ಆದಿತ್ಯನಾಥ್‌‌ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಮ್ಯೂನಿಸ್ಟ್,ಮಾವೋವಾದಿಗಳ ಕಪೋಲ ಕಲ್ಪಿತಾ ಮಾಹಿತಿಗೆ ದಿಕ್ಕಾರವಿರಲಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...