Homeಮುಖಪುಟರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಖೇರಿ ಚುನಾವಣಾ ಫಲಿತಾಂಶ ಹೀಗಿದೆ..? ನೋಡಿ

ರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಖೇರಿ ಚುನಾವಣಾ ಫಲಿತಾಂಶ ಹೀಗಿದೆ..? ನೋಡಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ರೈತರ ಹತ್ಯಾಕಾಂಡಕ್ಕೆ ಸಾಕ್ಷಿಯಾಗಿದ್ದ ಲಖಿಂಪುರ್‌ ಖೇರಿಯ ವಿಧಾನಸಭಾ ಚುನಾವಣೆ 2022 ರ ಮತ ಎಣಿಕೆ ನಡೆಯುತ್ತಿದೆ. ಲಖಿಂಪುರ್ ಖೇರಿಯು ಉತ್ತರ ಪ್ರದೇಶದ ಅವಧ್ ಪ್ರದೇಶ ಮತ್ತು ಖೇರಿ ಜಿಲ್ಲೆಯ ವಿಧಾನಸಭಾ ಸ್ಥಾನವಾಗಿದೆ.

ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಸಂಸದರಾಗಿರುವ ಜಿಲ್ಲೆಯಲ್ಲಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಈಗ ರದ್ದಾಗಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಚುನಾವಣೆ ಮೇಲೆ ಇದು ಸಾಕಷ್ಟು ಪ್ರಭಾವ ಬೀರಲಿದೆ ಎನ್ನಲಾಗಿತ್ತು.

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲಖೀಂಪುರ್‌ ಖೇರಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಕಾಂಗ್ರೆಸ್‌ನ ರವಿಶಂಕರ್ ತ್ರಿವೇದಿ, ಬಿಜೆಪಿಯ ಯೋಗೇಶ್ ವರ್ಮಾ, ಎಸ್‌ಪಿಯ ಉತ್ಕರ್ಷ್ ವರ್ಮಾ, ಬಿಎಸ್‌ಪಿಯ ಮೋಹನ್ ಬಾಜ್‌ಪೈ, ಎಐಎಂಐಎಂನ ಮೊ. ಉಸ್ಮಾನ್ ಸಿದ್ದಿಕಿ ಸೇರಿದ್ದಾರೆ.

ಇದನ್ನೂ ಓದಿ: Uttarakhand Election Results | ಉತ್ತರಾಖಂಡ್‌ ಬಿಜೆಪಿ ಮುನ್ನಡೆ: ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್‌ | Live

ಈ ಚುನಾವಣೆಯಲ್ಲಿ ರೈತರ ಮೇಲೆ ನಡೆದ ಹತ್ಯಾಕಾಂಡ ಯಾವುದೇ ಪ್ರಭಾವ ಬೀರಿಲ್ಲ ಎಂಬುದು ಆರಂಭಿಕ ಹಂತಗಳಲ್ಲಿ ಕಾಣಿಸುತ್ತಿದೆ. ಎಂಟು ವಿಧಾನಸಭಾ ಕ್ಷೇತ್ರದ ಲಖಿಂಪುರ್‌ ಖೇರಿಯ ಎರಡು ಕ್ಷೇತ್ರಗಳಲ್ಲಿ ಸಮಾಜವಾದಿ ಪಾರ್ಟಿ ಮುನ್ನಡೆ ಸಾಧಿಸುತ್ತಿದ್ದರೂ ಉಳಿದ ಆರು ಕ್ಷೇತ್ರಗಳಲ್ಲಿ  ಬಿಜೆಪಿ ಪ್ರಬಲ ಮುನ್ನಡೆ ಸಾಧಿಸುತ್ತಿದೆ.

ಲಖಿಂಪುರ್‌ ಖೇರಿಯಲ್ಲಿ 4,832, ಗೋಲಾದಲ್ಲಿ 9,468, ನಿಘಸನ್‌ನಲ್ಲಿ 12,854, ಧೌರ್ಹರಾದಲ್ಲಿ 4,777, ಕಾಸ್ತಾದಲ್ಲಿ 3,966, ಶ್ರೀನಗರದಲ್ಲಿ 4,711 ಮತಗಳಿಂದ ಬಿಜೆಪಿ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ, ಮೊಹಮ್ಮದಿ ಮತ್ತು ಪಿಲಾಯದಲ್ಲಿ ಸಮಾಜವಾದಿ ಪಾರ್ಟಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಈ ಹಿಂದೆ ಲಖಿಂಪುರ ಖೇರಿಯಲ್ಲಿ ಎಲ್ಲಾ ಎಂಟು ಅಸೆಂಬ್ಲಿ ಸ್ಥಾನಗಳು ಬಿಜೆಪಿಯವು. ಲಖೀಂಪುರ್‌ ನಗರದಲ್ಲಿ ಹಾಲಿ ಶಾಸಕ ಯೋಗೇಶ್ ವರ್ಮಾ ಅವರು ಎಸ್‌ಪಿಯ ಉತ್ಕರ್ಷ್ ವರ್ಮಾ ಮಧುರ್ ವಿರುದ್ಧ ಕಣಕ್ಕಿಳಿದಿದ್ದರು. ಕಾಂಗ್ರೆಸ್ ತನ್ನ ಅಭ್ಯರ್ಥಿ ರವಿಶಂಕರ್ ತ್ರಿವೇದಿ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡು ಕಣಕಿಳಿಸಿತ್ತು. ಸದ್ಯ ಬಿಜೆಪಿಯ ಯೋಗೇಶ್ ವರ್ಮಾ ಅವರು ಎಸ್‌ಪಿಯ ಉತ್ಕರ್ಷ್ ವರ್ಮಾ ಮಧುರ್ ಅವರಿಗಿಂತ 2,787 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.


ಇದನ್ನೂ ಓದಿ: Uttar Pradesh Elections Result | ಎಲ್ಲಾ ಕ್ಷೇತ್ರಗಳ ಎಣಿಕೆ ಪ್ರಾರಂಭ; ಬಿಜೆಪಿ ಮುನ್ನಡೆ | Live

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...