Homeಮುಖಪುಟರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಖೇರಿ ಚುನಾವಣಾ ಫಲಿತಾಂಶ ಹೀಗಿದೆ..? ನೋಡಿ

ರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಖೇರಿ ಚುನಾವಣಾ ಫಲಿತಾಂಶ ಹೀಗಿದೆ..? ನೋಡಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ರೈತರ ಹತ್ಯಾಕಾಂಡಕ್ಕೆ ಸಾಕ್ಷಿಯಾಗಿದ್ದ ಲಖಿಂಪುರ್‌ ಖೇರಿಯ ವಿಧಾನಸಭಾ ಚುನಾವಣೆ 2022 ರ ಮತ ಎಣಿಕೆ ನಡೆಯುತ್ತಿದೆ. ಲಖಿಂಪುರ್ ಖೇರಿಯು ಉತ್ತರ ಪ್ರದೇಶದ ಅವಧ್ ಪ್ರದೇಶ ಮತ್ತು ಖೇರಿ ಜಿಲ್ಲೆಯ ವಿಧಾನಸಭಾ ಸ್ಥಾನವಾಗಿದೆ.

ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಸಂಸದರಾಗಿರುವ ಜಿಲ್ಲೆಯಲ್ಲಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಈಗ ರದ್ದಾಗಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಚುನಾವಣೆ ಮೇಲೆ ಇದು ಸಾಕಷ್ಟು ಪ್ರಭಾವ ಬೀರಲಿದೆ ಎನ್ನಲಾಗಿತ್ತು.

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲಖೀಂಪುರ್‌ ಖೇರಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಕಾಂಗ್ರೆಸ್‌ನ ರವಿಶಂಕರ್ ತ್ರಿವೇದಿ, ಬಿಜೆಪಿಯ ಯೋಗೇಶ್ ವರ್ಮಾ, ಎಸ್‌ಪಿಯ ಉತ್ಕರ್ಷ್ ವರ್ಮಾ, ಬಿಎಸ್‌ಪಿಯ ಮೋಹನ್ ಬಾಜ್‌ಪೈ, ಎಐಎಂಐಎಂನ ಮೊ. ಉಸ್ಮಾನ್ ಸಿದ್ದಿಕಿ ಸೇರಿದ್ದಾರೆ.

ಇದನ್ನೂ ಓದಿ: Uttarakhand Election Results | ಉತ್ತರಾಖಂಡ್‌ ಬಿಜೆಪಿ ಮುನ್ನಡೆ: ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್‌ | Live

ಈ ಚುನಾವಣೆಯಲ್ಲಿ ರೈತರ ಮೇಲೆ ನಡೆದ ಹತ್ಯಾಕಾಂಡ ಯಾವುದೇ ಪ್ರಭಾವ ಬೀರಿಲ್ಲ ಎಂಬುದು ಆರಂಭಿಕ ಹಂತಗಳಲ್ಲಿ ಕಾಣಿಸುತ್ತಿದೆ. ಎಂಟು ವಿಧಾನಸಭಾ ಕ್ಷೇತ್ರದ ಲಖಿಂಪುರ್‌ ಖೇರಿಯ ಎರಡು ಕ್ಷೇತ್ರಗಳಲ್ಲಿ ಸಮಾಜವಾದಿ ಪಾರ್ಟಿ ಮುನ್ನಡೆ ಸಾಧಿಸುತ್ತಿದ್ದರೂ ಉಳಿದ ಆರು ಕ್ಷೇತ್ರಗಳಲ್ಲಿ  ಬಿಜೆಪಿ ಪ್ರಬಲ ಮುನ್ನಡೆ ಸಾಧಿಸುತ್ತಿದೆ.

ಲಖಿಂಪುರ್‌ ಖೇರಿಯಲ್ಲಿ 4,832, ಗೋಲಾದಲ್ಲಿ 9,468, ನಿಘಸನ್‌ನಲ್ಲಿ 12,854, ಧೌರ್ಹರಾದಲ್ಲಿ 4,777, ಕಾಸ್ತಾದಲ್ಲಿ 3,966, ಶ್ರೀನಗರದಲ್ಲಿ 4,711 ಮತಗಳಿಂದ ಬಿಜೆಪಿ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ, ಮೊಹಮ್ಮದಿ ಮತ್ತು ಪಿಲಾಯದಲ್ಲಿ ಸಮಾಜವಾದಿ ಪಾರ್ಟಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಈ ಹಿಂದೆ ಲಖಿಂಪುರ ಖೇರಿಯಲ್ಲಿ ಎಲ್ಲಾ ಎಂಟು ಅಸೆಂಬ್ಲಿ ಸ್ಥಾನಗಳು ಬಿಜೆಪಿಯವು. ಲಖೀಂಪುರ್‌ ನಗರದಲ್ಲಿ ಹಾಲಿ ಶಾಸಕ ಯೋಗೇಶ್ ವರ್ಮಾ ಅವರು ಎಸ್‌ಪಿಯ ಉತ್ಕರ್ಷ್ ವರ್ಮಾ ಮಧುರ್ ವಿರುದ್ಧ ಕಣಕ್ಕಿಳಿದಿದ್ದರು. ಕಾಂಗ್ರೆಸ್ ತನ್ನ ಅಭ್ಯರ್ಥಿ ರವಿಶಂಕರ್ ತ್ರಿವೇದಿ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡು ಕಣಕಿಳಿಸಿತ್ತು. ಸದ್ಯ ಬಿಜೆಪಿಯ ಯೋಗೇಶ್ ವರ್ಮಾ ಅವರು ಎಸ್‌ಪಿಯ ಉತ್ಕರ್ಷ್ ವರ್ಮಾ ಮಧುರ್ ಅವರಿಗಿಂತ 2,787 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.


ಇದನ್ನೂ ಓದಿ: Uttar Pradesh Elections Result | ಎಲ್ಲಾ ಕ್ಷೇತ್ರಗಳ ಎಣಿಕೆ ಪ್ರಾರಂಭ; ಬಿಜೆಪಿ ಮುನ್ನಡೆ | Live

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...