Homeಮುಖಪುಟಉತ್ತರ ಪ್ರದೇಶ ಚುನಾವಣೆ: ಟಿಕೆಟ್ ಆಕಾಂಕ್ಷಿಗಳಿಗೆ 11,000 ರೂ. ಜಮಾ ಮಾಡುವಂತೆ ತಿಳಿಸಿದ ಕಾಂಗ್ರೆಸ್

ಉತ್ತರ ಪ್ರದೇಶ ಚುನಾವಣೆ: ಟಿಕೆಟ್ ಆಕಾಂಕ್ಷಿಗಳಿಗೆ 11,000 ರೂ. ಜಮಾ ಮಾಡುವಂತೆ ತಿಳಿಸಿದ ಕಾಂಗ್ರೆಸ್

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಕೋರುವವರು ತಮ್ಮ ಅರ್ಜಿಗಳೊಂದಿಗೆ 11,000 ರೂ.ಗಳನ್ನು ಜಮಾ ಮಾಡುವಂತೆ ಉತ್ತರ ಪ್ರದೇಶ ಕಾಂಗ್ರೆಸ್ ತಿಳಿಸಿದೆ.

ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸದ ಅಭ್ಯರ್ಥಿಗಳನ್ನು ದೂರವಿಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.

“ಎಲ್ಲಾ ಅರ್ಜಿದಾರರು ತಮ್ಮ ಅರ್ಜಿಗಳನ್ನು ಜಿಲ್ಲಾ/ರಾಜ್ಯ ಮಟ್ಟದಲ್ಲಿ ಅಧಿಕೃತ ವ್ಯಕ್ತಿಗಳಿಗೆ, ಕೊಡುಗೆ ಮೊತ್ತ(contribution amount) 11,000 ರೂಗಳ ಜೊತೆಗೆ ಸೆಪ್ಟೆಂಬರ್ 25, 2021 ರೊಳಗೆ ಸಲ್ಲಿಸಬೇಕು” ಎಂದು ಮಂಗಳವಾರ ಆದೇಶ ಹೊರಡಿಸಲಾಗಿದೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು (ಯುಪಿಸಿಸಿ) ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ: BJP ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ದ ಪ್ರಕರಣ

ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆದ ಅಧಿವೇಶನದ ನಂತರ ಕಳೆದ ವಾರ ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಟಿಕೆಟ್ ಆಕಾಂಕ್ಷಿತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು.

“ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿರುವ ಕಾರ್ಯಕರ್ತರು ರಾಜ್ಯ ಅಥವಾ ಜಿಲ್ಲಾ ಕೇಂದ್ರದಲ್ಲಿ ತಮ್ಮ ಅರ್ಜಿಗಳನ್ನು ನೀಡಬಹುದು” ಎಂದು ಕಾಂಗ್ರೆಸ್ ವಕ್ತಾರರಾದ ಡಾ.ಉಮಾ ಶಂಕರ್ ಪಾಂಡೆ ಶನಿವಾರ ಹೇಳಿದ್ದರು.

ಕೊಡುಗೆ ಮೊತ್ತವನ್ನು ಕೇಳುವ ನಿರ್ಧಾರವನ್ನು ವಿವರಿಸಿರುವ ಪಕ್ಷದ ವಕ್ತಾರ ಅಶೋಕ್ ಸಿಂಗ್, ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸದ ಅಭ್ಯರ್ಥಿಗಳನ್ನು ದೂರವಿಡುವ ಉದ್ದೇಶದಿಂದ ತೆಗೆದುಕೊಳ್ಳಲಾಗಿದೆ ಎಂದರು.

ಆರ್‌ಟಿಜಿಎಸ್, ಡಿಮ್ಯಾಂಡ್ ಡ್ರಾಫ್ಟ್ ಅಥವಾ ಪೇ ಆರ್ಡರ್ ಮೂಲಕ ಠೇವಣಿ ಇಡಬಹುದು. ಇದಕ್ಕ ರಸೀದಿಯನ್ನು ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯುಪಿಸಿಸಿ ಮಾಧ್ಯಮ ಸಂಚಾಲಕ ಲಾಲನ್ ಕುಮಾರ್, ಚುನಾವಣಾ ಪ್ರಕ್ರಿಯೆಯನ್ನು ಸುಧಾರಿಸಲು ಮತ್ತು ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳ ಜೊತೆಗೆ ಪ್ರಾದೇಶಿಕ ಪಕ್ಷಗಳು ತಯಾರಾಗುತ್ತಿವೆ. ಇದರ ನಡುವೆ ಬಿಜೆಪಿಯನ್ನು ರಾಜಕೀಯವಾಗಿ ಮಣಿಸಲು ನಿರ್ಧರಿಸಿರುವ ರೈತರು ಮಿಷನ್ ಉತ್ತರ ಪ್ರದೇಶ, ಮಿಷನ್ ಉತ್ತರಾಖಂಡ ಮೂಲಕ ಬಿಜೆಪಿ ವಿರುದ್ಧ ಅಭಿಯಾನ ನಡೆಸಲು ತಯಾರಾಗಿದ್ದಾರೆ.


ಇದನ್ನೂ ಓದಿ: ಅಸಾದುದ್ದೀನ್ ಒವೈಸಿ ಬಿಜೆಪಿಯ ‘ಚಾಚಾ ಜಾನ್’, ಅವರಿಬ್ಬರೂ ಒಂದೇ ತಂಡ: ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...