HomeಮುಖಪುಟUttar Pradesh Elections Result | ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಕಮಲ; ಹೀನಾಯವಾಗಿ ಸೋತ ಕಾಂಗ್ರೆಸ್...

Uttar Pradesh Elections Result | ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಕಮಲ; ಹೀನಾಯವಾಗಿ ಸೋತ ಕಾಂಗ್ರೆಸ್ & ಬಿಎಸ್ಪಿ

- Advertisement -
- Advertisement -

Uttar Pradesh Elections Result | ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬಿದ್ದಿದೆ. ಆಡಳಿತರೂಢ ಬಿಜೆಪಿ ಸತತ ಎರಡನೆ ಬಾರಿಗೆ ಅಧಿಕಾರಕ್ಕೆ ಏರುತ್ತಿದೆ. ದೇಶದ ಅತ್ಯಂತ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ 256 ಕ್ಷೇತ್ರವನ್ನು ಬಿಜೆಪಿ ಏಕಾಂಗಿಯಾಗಿ ಗೆದ್ದುಕೊಂಡಿದೆ.

ಪ್ರಮುಖ ವಿರೋಧ ಪಕ್ಷವಾಗಿರುವ ಸಮಾಜವಾದಿ ಪಕ್ಷ(ಎಸ್‌ಪಿ) ಚುನಾವಣಾ ಕಣದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, 110 ಕ್ಷೇತ್ರವನ್ನು ಗೆದ್ದುಕೊಂಡಿದೆ. ಆದರೆ ಈ ಹಿಂದೆ ರಾಜ್ಯ ಆಳಿದ್ದ ಬಿಎಸ್‌ಪಿ ಮತ್ತು ಕಾಂಗ್ರೆಸ್‌ ಹೀನಾಯ ಸೋಲನ್ನು ಅನುಭವಿಸಿದೆ.

ಸಿರತು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ರಾಜ್ಯದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಸೋಲನುಭವಿಸಿದ್ದಾರೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರು ಗೋರಖ್‌ಪುರ ನಗರ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ಗೆದ್ದುಕೊಂಡಿದ್ದಾರೆ.

ರೈತ ಹೋರಾಟದ ಕೇಂದ್ರವಾಗಿದ್ದ ಲಖೀಂಪುರ್‌ ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ ಎಂಟು ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿದೆ.

ಬಿಜೆಪಿಯ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಸ್ವಾಮಿ ಪ್ರಸಾದ್ ಮೌರ್ಯ ಅವರು ಫೈಝಾನಗರ ಕ್ಷೇತ್ರದಲ್ಲಿ ಎಸ್‌ಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದರು. ಆದರೆ ಅವರು ಸೋಲುಂಡಿದ್ದಾರೆ. ಎಸ್‌ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರು ಕರ್ಹಾಲ್ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ್ದಾರೆ.

ಪ್ರಮುಖ ವಿಪಕ್ಷವಾದ ಸಮಾಜವಾದಿ ಪಕ್ಷ 2017ರ ಚುನಾವಣೆಗಿಂತ ಉತ್ತಮ ಪ್ರದರ್ಶನ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್‌‌ ತೀರಾ ಕಳಪೆ ಪ್ರದರ್ಶನ ನೀಡಿದೆ. ಬಿಎಸ್‌ಪಿ ಕೂಡಾ ತೀರಾ ಹಿನ್ನಡೆ ಅನುಭವಿಸಿದೆ.

2017ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಕೇವಲ 47 ಕ್ಷೇತ್ರಗಳನ್ನು ಗಳಿಸಿಕೊಂಡಿತ್ತು. ಬಿಜೆಪಿಯು 312 ಸ್ಥಾನಗಳನ್ನು ಪಡೆಯುವುದರೊಂದಿಗೆ ಭರ್ಜರಿಯಾಗಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ಬಿಜೆಪಿ ತುಸು ಮುಗ್ಗರಿಸಿರುವುದು ಕಾಣುತ್ತಿದೆ.


ಉತ್ತರ ಪ್ರದೇಶ ಚುನಾವಣೆಯ ಅಂತಿಮ ಫಲಿತಾಂಶ ಹೀಗಿದೆ.

403 ಕ್ಷೇತ್ರಗಳಿರುವ ರಾಜ್ಯದಲ್ಲಿ ಬಹುಮತಕ್ಕೆ 202 ಕ್ಷೇತ್ರಗಳು ಸಾಕಾಗುತ್ತದೆ.

  • ಬಿಜೆಪಿ ಮೈತ್ರಿ – 274 Wins 
    ಎಸ್‌ಪಿ ಮೈತ್ರಿ – 124 Wins 
    ಕಾಂಗ್ರೆಸ್‌ – 2 Wins 

    ಬಿಎಸ್‌ಪಿ – 1 Wins 
    ಜೆಡಿಎ‌ಲ್‌ – 2 Wins 

  • ಪಕ್ಷವಾರು ಅಂತಿಮ ಫಲಿತಾಂಶ ಹೀಗಿದೆ
  • ಬಿಜೆಪಿ ಮೈತ್ರಿ – 274 Wins
    ಬಿಜೆಪಿ – 256 Wins
    ಎಡಿಎಸ್‌ – 12 Wins
    ನಿಶಾದ್‌ – 6 Wins
  • ಎಸ್‌ಪಿ ಮೈತ್ರಿ – 124 Wins
    ಎಸ್‌ಪಿ – 110 Wins
    ಆರ್‌ಎಲ್‌ಡಿ – 8 Wins
    ಎಸ್‌ಬಿಎಸ್‌ಪಿಎ – 6 Wins
  • ಕಾಂಗ್ರೆಸ್‌ – 2 Wins 
  • ಬಿಎಸ್‌ಪಿ – 1 Wins
  • ಜೆಡಿಎ‌ಲ್‌ – 2 Wins 

ಇದನ್ನೂ ಓದಿ: ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...