HomeಮುಖಪುಟUttar Pradesh Elections Result | ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಕಮಲ; ಹೀನಾಯವಾಗಿ ಸೋತ ಕಾಂಗ್ರೆಸ್...

Uttar Pradesh Elections Result | ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಕಮಲ; ಹೀನಾಯವಾಗಿ ಸೋತ ಕಾಂಗ್ರೆಸ್ & ಬಿಎಸ್ಪಿ

- Advertisement -
- Advertisement -

Uttar Pradesh Elections Result | ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬಿದ್ದಿದೆ. ಆಡಳಿತರೂಢ ಬಿಜೆಪಿ ಸತತ ಎರಡನೆ ಬಾರಿಗೆ ಅಧಿಕಾರಕ್ಕೆ ಏರುತ್ತಿದೆ. ದೇಶದ ಅತ್ಯಂತ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ 256 ಕ್ಷೇತ್ರವನ್ನು ಬಿಜೆಪಿ ಏಕಾಂಗಿಯಾಗಿ ಗೆದ್ದುಕೊಂಡಿದೆ.

ಪ್ರಮುಖ ವಿರೋಧ ಪಕ್ಷವಾಗಿರುವ ಸಮಾಜವಾದಿ ಪಕ್ಷ(ಎಸ್‌ಪಿ) ಚುನಾವಣಾ ಕಣದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, 110 ಕ್ಷೇತ್ರವನ್ನು ಗೆದ್ದುಕೊಂಡಿದೆ. ಆದರೆ ಈ ಹಿಂದೆ ರಾಜ್ಯ ಆಳಿದ್ದ ಬಿಎಸ್‌ಪಿ ಮತ್ತು ಕಾಂಗ್ರೆಸ್‌ ಹೀನಾಯ ಸೋಲನ್ನು ಅನುಭವಿಸಿದೆ.

ಸಿರತು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ರಾಜ್ಯದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಸೋಲನುಭವಿಸಿದ್ದಾರೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರು ಗೋರಖ್‌ಪುರ ನಗರ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ಗೆದ್ದುಕೊಂಡಿದ್ದಾರೆ.

ರೈತ ಹೋರಾಟದ ಕೇಂದ್ರವಾಗಿದ್ದ ಲಖೀಂಪುರ್‌ ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ ಎಂಟು ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿದೆ.

ಬಿಜೆಪಿಯ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಸ್ವಾಮಿ ಪ್ರಸಾದ್ ಮೌರ್ಯ ಅವರು ಫೈಝಾನಗರ ಕ್ಷೇತ್ರದಲ್ಲಿ ಎಸ್‌ಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದರು. ಆದರೆ ಅವರು ಸೋಲುಂಡಿದ್ದಾರೆ. ಎಸ್‌ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರು ಕರ್ಹಾಲ್ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ್ದಾರೆ.

ಪ್ರಮುಖ ವಿಪಕ್ಷವಾದ ಸಮಾಜವಾದಿ ಪಕ್ಷ 2017ರ ಚುನಾವಣೆಗಿಂತ ಉತ್ತಮ ಪ್ರದರ್ಶನ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್‌‌ ತೀರಾ ಕಳಪೆ ಪ್ರದರ್ಶನ ನೀಡಿದೆ. ಬಿಎಸ್‌ಪಿ ಕೂಡಾ ತೀರಾ ಹಿನ್ನಡೆ ಅನುಭವಿಸಿದೆ.

2017ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಕೇವಲ 47 ಕ್ಷೇತ್ರಗಳನ್ನು ಗಳಿಸಿಕೊಂಡಿತ್ತು. ಬಿಜೆಪಿಯು 312 ಸ್ಥಾನಗಳನ್ನು ಪಡೆಯುವುದರೊಂದಿಗೆ ಭರ್ಜರಿಯಾಗಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ಬಿಜೆಪಿ ತುಸು ಮುಗ್ಗರಿಸಿರುವುದು ಕಾಣುತ್ತಿದೆ.


ಉತ್ತರ ಪ್ರದೇಶ ಚುನಾವಣೆಯ ಅಂತಿಮ ಫಲಿತಾಂಶ ಹೀಗಿದೆ.

403 ಕ್ಷೇತ್ರಗಳಿರುವ ರಾಜ್ಯದಲ್ಲಿ ಬಹುಮತಕ್ಕೆ 202 ಕ್ಷೇತ್ರಗಳು ಸಾಕಾಗುತ್ತದೆ.

  • ಬಿಜೆಪಿ ಮೈತ್ರಿ – 274 Wins 
    ಎಸ್‌ಪಿ ಮೈತ್ರಿ – 124 Wins 
    ಕಾಂಗ್ರೆಸ್‌ – 2 Wins 

    ಬಿಎಸ್‌ಪಿ – 1 Wins 
    ಜೆಡಿಎ‌ಲ್‌ – 2 Wins 

  • ಪಕ್ಷವಾರು ಅಂತಿಮ ಫಲಿತಾಂಶ ಹೀಗಿದೆ
  • ಬಿಜೆಪಿ ಮೈತ್ರಿ – 274 Wins
    ಬಿಜೆಪಿ – 256 Wins
    ಎಡಿಎಸ್‌ – 12 Wins
    ನಿಶಾದ್‌ – 6 Wins
  • ಎಸ್‌ಪಿ ಮೈತ್ರಿ – 124 Wins
    ಎಸ್‌ಪಿ – 110 Wins
    ಆರ್‌ಎಲ್‌ಡಿ – 8 Wins
    ಎಸ್‌ಬಿಎಸ್‌ಪಿಎ – 6 Wins
  • ಕಾಂಗ್ರೆಸ್‌ – 2 Wins 
  • ಬಿಎಸ್‌ಪಿ – 1 Wins
  • ಜೆಡಿಎ‌ಲ್‌ – 2 Wins 

ಇದನ್ನೂ ಓದಿ: ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....