Homeಮುಖಪುಟಉತ್ತರ ಪ್ರದೇಶ ಚುನಾವಣಾ ಮೈತ್ರಿ: ಸಮಾಜವಾದಿ ಪಾರ್ಟಿ ಜೊತೆ ಎಎಪಿ ಮಾತುಕತೆ

ಉತ್ತರ ಪ್ರದೇಶ ಚುನಾವಣಾ ಮೈತ್ರಿ: ಸಮಾಜವಾದಿ ಪಾರ್ಟಿ ಜೊತೆ ಎಎಪಿ ಮಾತುಕತೆ

- Advertisement -
- Advertisement -

2022ರಲ್ಲಿ ಬರಲಿರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ ಜೊತೆಗೆ ಸ್ಥಾನಗಳನ್ನು ಹಂಚಿಕೊಳ್ಳುವ ಕುರಿತು ಚರ್ಚೆ ಆರಂಭಿಸಲಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ಹೇಳಿದೆ.

ಲಕ್ನೋದಲ್ಲಿ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾದ ನಂತರ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಈ ಘೋಷಣೆ ಮಾಡಿದ್ದಾರೆ. ಈ ಹಿಂದೆಯೂ ಇಬ್ಬರ ನಡುವೆ ಸಭೆ ನಡೆದಿದ್ದರೂ ಮೈತ್ರಿ ಸಾಧ್ಯತೆಯ ಮಾತು ಸಾಧ್ಯವಾಗಿರಲಿಲ್ಲ.

“ನಮ್ಮ ಮಾತುಕತೆಗಳು ಆರಂಭವಾಗಿವೆ. ಬಿಜೆಪಿಯನ್ನು ಉತ್ತರ ಪ್ರದೇಶದಲ್ಲಿ ಸೋಲಿಸುವುದು ನಮ್ಮ ಪ್ರಥಮ ಆದ್ಯತೆಯಾಗಿದೆ. ಯೋಗಿ ಆದಿತ್ಯನಾಥ ಅವರ ದುರಾಡಳಿತಕ್ಕೆ ಒಳಗಾಗಿರುವ ಉತ್ತರ ಪ್ರದೇಶವನ್ನು ಕಾಪಾಡಬೇಕಾಗಿದೆ. ಅಖಿಲೇಶ್ ಯಾದವ್ ಅವರು ಹಲವು ಪಕ್ಷಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಸಭೆ ನಡೆದಿದೆ” ಎಂದು ಸಂಜಯ್‌ ಸಿಂಗ್‌ ಹೇಳಿದ್ದಾರೆ.

ಆಮ್‌ಆದ್ಮಿ ಪಾರ್ಟಿಯ ಉತ್ತರ ಪ್ರದೇಶದ ಉಸ್ತುವಾರಿಯಾಗಿರುವ ಸಿಂಗ್‌, “ಬಿಜೆಪಿಯನ್ನು ಸೋಲಿಸುವುದೇ ವಿರೋಧ ಪಕ್ಷಗಳ ಮೊದಲ ಗುರಿಯಾಗಿರಬೇಕು” ಎಂದು ಹೇಳಿದ್ದಾರೆ.

ಆರ್‌ಎಲ್‌ಡಿ ಮತ್ತು ಸಮಾಜವಾದಿ ಪಕ್ಷ ತಮ್ಮ ಸ್ಥಾನಗಳನ್ನು ಹಂಚಿಕೊಳ್ಳುವ ಕೊನೆಯ ಹಂತದ ಮಾತುಕತೆ ನಡೆಸುತ್ತಿರುವ ಹೊತ್ತಿನಲ್ಲಿ ಎಎಪಿಯಿಂದ ಈ ಬೆಳವಣಿಗೆ ಕಂಡುಬಂದಿದೆ.


ಇದನ್ನೂ ಓದಿದೆ: ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ


ಸೋಮವಾರ ಸಿಂಗ್ ಅವರು ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಅವರ 82ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ಭೇಟಿ ಮಾಡಿದ್ದರು. ಎಎಪಿ ನಾಯಕ ಮತ್ತು ಅಖಿಲೇಶ್ ನಡುವಿನ ಕೊನೆಯ ಸಾರ್ವಜನಿಕ ಸಭೆ ಜುಲೈನಲ್ಲಿ ನಡೆದಿತ್ತು.

2017ರ ಚುನಾವಣೆಯಲ್ಲಿ ಬಿಜೆಪಿ ಮಿತ್ರಪಕ್ಷವಾಗಿದ್ದ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಜೊತೆಗೆ ಎಸ್‌ಪಿ ಈಗಾಗಲೇ ಮೈತ್ರಿ ಮಾಡಿಕೊಂಡಿದೆ. ಎಸ್‌ಬಿಎಸ್‌ಪಿ ಜೊತೆಗೆ, ಭಾಗಿದರಿ ಸಂಕಲ್ಪ್ ಮೋರ್ಚಾ, ರಾಜ್‌ಭರ್ ನೇತೃತ್ವದ ಸಣ್ಣ ಪಕ್ಷಗಳ ಗುಂಪು, ಎಸ್‌ಪಿ ನೇತೃತ್ವದ ಮೈತ್ರಿಕೂಟದ ಭಾಗವಾಗುತ್ತಿವೆ.

ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ನವೆಂಬರ್ 28ರಂದು ಲಕ್ನೋದಲ್ಲಿ ರೋಜ್ಗಾರ್ ಗ್ಯಾರಂಟಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿತ್ತು, ಅದೇ ದಿನ ನಡೆಯಲಿರುವ ಯುಪಿ ಶಿಕ್ಷಕರ ಅರ್ಹತಾ ಪರೀಕ್ಷೆಯಿಂದಾಗಿ ಸ್ಥಳೀಯ ಆಡಳಿತವು ರ್‍ಯಾಲಿಯನ್ನು ಮುಂದೂಡಿದೆ. ಕಳೆದ ತಿಂಗಳು ಕೇಜ್ರಿವಾಲ್ ಅವರು ಅಯೋಧ್ಯೆಗೆ ಭೇಟಿ ನೀಡಿ, ರಾಮ್ ಲಲ್ಲಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಎಎಪಿ ಕಳೆದ ಎರಡು ತಿಂಗಳುಗಳಲ್ಲಿ ನೋಯ್ಡಾ, ಆಗ್ರಾ, ಅಯೋಧ್ಯೆ ಮತ್ತು ಲಕ್ನೋ ಸೇರಿದಂತೆ ಯುಪಿಯ ಹಲವು ಪಟ್ಟಣಗಳಲ್ಲಿ ಸರಣಿ ತಿರಂಗ ಯಾತ್ರೆಗಳನ್ನು ಕೈಗೊಂಡಿದೆ. ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದು, 300 ಯೂನಿಟ್‌ವರೆಗೆ ಗೃಹ ಬಳಕೆ ವಿದ್ಯುತ್‌‌ಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಹೇಳಿದೆ.


ಇದನ್ನೂ ಓದಿರಿ: ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಶಾದಾಯಕ ಬೆಳವಣಿಗೆ, ಮನುವಾದಿಗಳನ್ನು ಸೋಲಿಸಲು ಎಲ್ಲಾ ವಿರೋದಪಕ್ಶಗಳೂ ಒಂದಾಗಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...