ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ದೌರಾಲಾ ನಿಲ್ದಾಣದಲ್ಲಿ ಶನಿವಾರ ಸಹರಾನ್ಪುರ-ದೆಹಲಿ ಪ್ಯಾಸೆಂಜರ್ ರೈಲಿನ ಎಂಜಿನ್ ಮತ್ತು ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
04460 ಸಂಖ್ಯೆಯ ರೈಲು ಸಹರಾನ್ಪುರದಿಂದ ದೆಹಲಿ ಕಡೆಗೆ ಪ್ರಯಾಣಿಸುತ್ತಿತ್ತು. ನಿಲ್ದಾಣದಲ್ಲಿ ರೈತಲು ನಿಂತಿದ್ದ ಕಾರಣ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ.
“ಆಕಸ್ಮಿಕವಾಗಿ ಬೆಂಕಿ ಹತ್ತಿಕೊಳ್ಳಲು ಕಾರಣವೇನು ಎಂವಬುದು ಇನ್ನೂ ತಿಳಿದು ಬಂದಿಲ್ಲ. ಘಟನೆಯಲ್ಲಿ ಯಾವುದೇ ಗಾಯಾಳುಗಳು ಅಥವಾ ಸಾವು ನೋವುಗಳು ವರದಿಯಾಗಿಲ್ಲ” ಎಂದಿದ್ದಾರೆ ಎಂದು ಭಾರತೀಯ ರೈಲ್ವೇಯ ಟ್ರಾಫಿಕ್ ಇನ್ಸ್ಪೆಕ್ಟರ್ ವೈ.ಕೆ ಝಾ ಅವರನ್ನು ಎಎನ್ಐ ಉಲ್ಲೇಖಿಸಿದೆ.
ಬೆಂಕಿ ಹೊತ್ತಿಕೊಂಡ ಎಂಜಿನ್ ಮತ್ತು ಎರಡು ಕಂಪಾರ್ಟ್ಮೆಂಟ್ಗಳಿಂದ ಉಳಿದ ಬೋಗಿಗಳನ್ನು ಬೇರ್ಪಡಿಸುವ ಪ್ರಯತ್ನದಲ್ಲಿ ಪ್ರಯಾಣಿಕರು ರೈಲನ್ನು ತಳ್ಳುತ್ತಿರುವುದು ಕಂಡುಬಂದಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ಪ್ರಯಾಣಿಕರು ರೈಲನ್ನು ಬೆಂಕಿ ಹತ್ತಿಕೊಂಡಿದ್ದ ಎಂಜಿನ್ನಿಂದ ಮತ್ತು ಎರಡು ಕಂಪಾರ್ಟ್ಮೆಂಟ್ಗಳಿಂದ ಬೇರ್ಪಡಿಸುವ ಪ್ರಯತ್ನದಲ್ಲಿ ಒಟ್ಟಾಗಿ ರೈಲನ್ನು ತಳ್ಳುತ್ತಿದ್ದಾರೆ.
#WATCH | Uttar Pradesh: Fire broke out in engine & two compartments of a Saharanpur-Delhi train, at Daurala railway station near Meerut.
Passengers push the train in a bid to separate the rest of the compartments from the engine and two compartments on which the fire broke out. pic.twitter.com/Vp2sCcLFsd
— ANI UP/Uttarakhand (@ANINewsUP) March 5, 2022
ಘಟನೆ ಕುರಿತು ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.
ಇದನ್ನೂ ಓದಿ: ನವೀನ್ ಮೃತದೇಹ ತರುವ ಜಾಗದಲ್ಲಿ 8 ಜನರನ್ನು ಕರೆತರಬಹುದು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ವಿವಾದಾತ್ಮಕ ಹೇಳಿಕೆ