Homeಮುಖಪುಟಉತ್ತರ ಪ್ರದೇಶ: ಬುಂದೇಲ್‌ಖಂಡ್ ಪಟಾಕಿ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ ಮಕ್ಕಳು

ಉತ್ತರ ಪ್ರದೇಶ: ಬುಂದೇಲ್‌ಖಂಡ್ ಪಟಾಕಿ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ ಮಕ್ಕಳು

- Advertisement -
- Advertisement -

ಉತ್ತರ ಪ್ರದೇಶದ ಚಿತ್ರಕೂಟದ ಬುಂದೇಲ್‌ಖಂಡ ಗೌರವ ಮಹೋತ್ಸವದಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಉತ್ಸವದಲ್ಲಿ ಪಟಾಕಿ ಸಿಡಿಸುವ ವೇಳೆ ಸ್ಫೋಟ ಸಂಭವಿಸಿದೆ.

‘ಇದರಲ್ಲಿ ನಮ್ಮ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಚಿತ್ರಕೂಟದ ಡಿಐಜಿ, ಜಿಲ್ಲಾ ಅಧಿಕಾರಿ ಮತ್ತು ಎಸ್ಪಿ, ಹೆಚ್ಚುವರಿ ಎಸ್ಪಿ, ಇತರ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ನಮ್ಮ ವಿಧಿವಿಜ್ಞಾನ ತಂಡ, ಬಾಂಬ್ ನಿಷ್ಕ್ರಿಯ ದಳದ (ಬಿಡಿಎಸ್) ತಂಡವೂ ಆಗಮಿಸುತ್ತಿದೆ’ ಎಂದು ಪ್ರಯಾಗ್ರಾಜ್ ವಲಯ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಭಾನು ಭಾಸ್ಕರ್ ಅವರು ಚಿತ್ರಕೂಟದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಎಫ್‌ಐಆರ್‌ನಲ್ಲಿ ಇನ್ನೂ ಹೆಚ್ಚಿನವರ ಹೆಸರು ಸೇರುವ ಸಾಧ್ಯತೆ ಇದ್ದು, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

‘ಪ್ರಸ್ತುತ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಅದರಲ್ಲಿ ಹೆಚ್ಚಿನ ಜನರನ್ನು ಸೇರಿಸಲಾಗುವುದು. ತನಿಖೆ ನಡೆಯುತ್ತಿದೆ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ಹೇಳಿದ್ದಾರೆ.

‘ನಾವು ಪ್ರಕರಣದ ಸಂಪೂರ್ಣ ತನಿಖೆಯನ್ನು ಹೊಸ ತನಿಖಾಧಿಕಾರಿ ಹರ್ಷ್ ಪಾಂಡೆ ಅವರಿಗೆ ನೀಡಿದ್ದೇವೆ. ಆದ್ದರಿಂದ, ನಾವು ತನಿಖೆ ಮಾಡುತ್ತಿರುವಾಗಲೆ ನವ ದೆಹಲಿ ಮತ್ತು ಲಕ್ನೋದಿಂದ ಬರುವ ತಂಡಗಳೊಂದಿಗೆ ಸಮನ್ವಯಗೊಳಿಸುವುದರ ಮೂಲಕ ತನಿಖೆ ತೀಬ್ರಗೊಳಿಸಲಾಗುತ್ತದೆ. ಹಾಗೆಯೇ ಪ್ರಯಾಗ್‌ರಾಜ್‌ನಿಂದ ಮತ್ತು ಆಗ್ರಾದಿಂದ ಬರುವ ತಂಡಗಳೊಂದಿಗೆ ನಾವು ಶೀಘ್ರದಲ್ಲೇ ತನಿಖೆ ಮುಂದುವರಿಸುತ್ತೇವೆ’ ಎಂದು ಅವರು ಹೇಳಿದರು.

‘ತನಿಖೆಗೆ ಸಂಬಂಧಿಸಿದಂತೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದು ಈಗ ಸೂಕ್ತವಲ್ಲ. ಏಕೆಂದರೆ, ಎಲ್ಲಾ ಸಣ್ಣಸಣ್ಣ ಸಂಗತಿಗಳನ್ನು ಪರಿಶೀಲಿಸಲಾಗುತ್ತಿದೆ. ಮಕ್ಕಳ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿಲ್ಲ. ಹೆಚ್ಚಿನ ಜನರನ್ನು ವಿಚಾರಣೆ ನಡೆಸಲಾಗುತ್ತಿದೆ ಮತ್ತು ಅವರು ನೀಡಿದ ಸುಳಿವುಗಳೊಂದಿಗೆ ನಾವು ತನಿಖೆ ನಡೆಸುತ್ತಿದ್ದೇವೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆಯ ತನಿಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿಗೆ ಆದೇಶ ನೀಡಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ₹50 ಸಾವಿರ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದರು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ಮಾತನಾಡಿ, ಸಂತ್ರಸ್ತರ ಕುಟುಂಬ ಸದಸ್ಯರನ್ನು ಅಧಿಕಾರಿಗಳು ಭೇಟಿಯಾಗುತ್ತಿದ್ದಾರೆ. ಮಕ್ಕಳ ಗುರುತು ಇನ್ನೂ ಬಹಿರಂಗವಾಗಿಲ್ಲ, ಸಂತ್ರಸ್ತರ ಕುಟುಂಬಕ್ಕೆ ಸರ್ಕಾರ ಪರಿಹಾರವನ್ನು ಘೋಷಿಸಿದೆ ಎಂದು ಹೇಳಿದರು.

‘ಈಗ ನಾವು ಎಲ್ಲರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ, ಕುಟುಂಬ ಸದಸ್ಯರನ್ನು ಭೇಟಿ ಮಾಡುವುದು ನಮ್ಮ ಮೊದಲ ಕೆಲಸವಾಗಿತ್ತು. ಆದ್ದರಿಂದ ನಾವು ಇಲ್ಲಿಯವರೆಗೆ ಇಬ್ಬರನ್ನು ಮಾತ್ರ ಭೇಟಿ ಮಾಡಿದ್ದೇವೆ, ನಾವು ಅಲಹಾಬಾದ್ ಮತ್ತು ಪ್ರಯಾಗ್ರಾಜ್ನಲ್ಲಿ ಕುಟುಂಬವನ್ನು ಭೇಟಿ ಮಾಡಿದ್ದೇವೆ. ಅದರ ನಂತರ ನಾವು ಉಳಿದವರನ್ನು ಭೇಟಿ ಮಾಡಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ’ ಎಂದು ಅವರು ಹೇಳಿದರು.

‘ಸರ್ಕಾರದ ಕಡೆಯಿಂದ ಪರಿಹಾರದ ಬಗ್ಗೆ ಕೆಲ ಮಾತುಗಳು ಕೇಳಿ ಬರುತ್ತಿದ್ದು, ಅದರಲ್ಲಿ ಪ್ರತಿ ಕುಟುಂಬಕ್ಕೆ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ₹5 ಲಕ್ಷ ನೀಡಬೇಕು. ಇದನ್ನು ಹೊರತುಪಡಿಸಿ ಉಳಿದ ಪ್ರಕ್ರಿಯೆ ನಡೆಯುತ್ತಿದೆ, ಆದ್ದರಿಂದ ನಾವು ಎಲ್ಲ ಅಂಶಗಳನ್ನು ನೋಡುತ್ತೇವೆ; ಶೀಘ್ರದಲ್ಲೇ ಇದನ್ನು ತೀರ್ಮಾನಿಸುತ್ತೇವೆ’ ಎಂದು ಎಡಿಜಿ ಭಾಸ್ಕರ್ ಹೇಳಿದರು.

ಇದನ್ನೂ ಓದಿ; ಫೆ.21ರಂದು ಮಮತಾ ಬ್ಯಾನರ್ಜಿ ಪಂಜಾಬ್‌ಗೆ ಭೇಟಿ; ಕೇಜ್ರಿವಾಲ್, ಭಗವಂತ್ ಮಾನ್ ಜತೆ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...