Homeಮುಖಪುಟಉತ್ತರ ಪ್ರದೇಶ: ಒಂದೇ ಕುಟುಂಬದ ಐವರ ಕೊಲೆ

ಉತ್ತರ ಪ್ರದೇಶ: ಒಂದೇ ಕುಟುಂಬದ ಐವರ ಕೊಲೆ

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮನೆಯೊಂದರಲ್ಲಿ ಎರಡು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಖವಾಜ್‌ಪುರ ಪ್ರದೇಶದಲ್ಲಿ ಘಟನೆ ನಡೆದಿದೆ. ರಾಮ್ ಕುಮಾರ್ ಯಾದವ್ (55), ಅವರ ಪತ್ನಿ ಕುಸುಮ್ ದೇವಿ (52), ಮಗಳು ಮನೀಶಾ (25), ಸೊಸೆ ಸವಿತಾ (27) ಮತ್ತು ಮೊಮ್ಮಗಳು ಮೀನಾಕ್ಷಿ (2) ಕೊಲೆಯಾದವರು.

ಇನ್ನೋರ್ವ ಮೊಮ್ಮಗಳು ಸಾಕ್ಷಿ (5) ಬದುಕುಳಿದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಯಾದವ್ ಅವರ ಮಗ ಸುನೀಲ್ (30) ಘಟನೆಯ ಸಮಯದಲ್ಲಿ ಮನೆಯಲ್ಲಿರಲಿಲ್ಲ, ಆದರೆ ತನಿಖೆಗೆ ಸಹಕರಿಸುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲಾ ಐವರ ತಲೆಗೂ ಹೊಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಭೀಕರ ಪ್ರಕರಣದ ತನಿಖೆಗಾಗಿ ಏಳು ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಂತಕರ ಸುಳಿವುಗಳನ್ನು ಸಂಗ್ರಹಿಸಲು ಶ್ವಾನದಳ ಮತ್ತು ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಖತ್ರಿ ವಿವರಣೆಗಳನ್ನು ಪಡೆದುಕೊಂಡಿದ್ದಾರೆ.

“ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರಿಗೆ ಪ್ರಾಥಮಿಕವಾಗಿ ಮಾಹಿತಿ ನೀಡಲಾಯಿತು. ಪೊಲೀಸರು ಮತ್ತು ಅಗ್ನಿಶಾಮಕ ತಂಡಗಳು ತಕ್ಷಣ ಧಾವಿಸಿವು. ಯಾದವ್ ಮತ್ತು ಇತರರ ಶವಗಳು ಮನೆಯಲ್ಲಿ ಪತ್ತೆಯಾಗಿವೆ. ಚಿಕ್ಕ ಹುಡುಗಿ ಮತ್ತು ಆಕೆಯ ತಾಯಿಯ ಶವಗಳು ಬೆಂಕಿ ಹೊತ್ತಿಕೊಂಡ ಕೋಣೆಯ ಸಮೀಪದಲ್ಲಿವೆ. ಯಾದವ್ ಮತ್ತು ಅವರ ಪತ್ನಿ ಇನ್ನೂ ಉಸಿರಾಡುತ್ತಿದ್ದರು, ನಂತರ ಅವರ ಮಗಳ ಮೃತದೇಹ ಪತ್ತೆಯಾಗಿದೆ. ಯಾವುದೇ ದ್ವೇಷಕ್ಕಾಗಿ ಕೊಲೆ ಮಾಡಲಾಗಿದೆಯೇ ಎಂಬ ಮಾಹಿತಿ ದೊರೆತ್ತಿಲ್ಲ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಸ್ಥಳೀಯ ನಿವಾಸಿಗಳ ಆಕ್ರೋಶವನ್ನು ಎದುರಿಸಬೇಕಾಯಿತು. ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಯಿತು. ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ.

ಜಿಲ್ಲೆಯಲ್ಲಿ ಭೀಕರ ಅಪರಾಧ ಕೃತ್ಯ ನಡೆದ ಒಂದು ವಾರದ ನಂತರ ಈ ಘಟನೆ ನಡೆದಿದೆ. ಏಪ್ರಿಲ್ 16 ರಂದು, ಖಗಲ್ಪುರ ಗ್ರಾಮದಲ್ಲಿ, 38 ವರ್ಷದ ಮಹಿಳೆ ಪ್ರೀತಿ ತಿವಾರಿ ಮತ್ತು ಅವರ ಮೂವರು ಪುತ್ರಿಯರಾದ ಮಹಿ (12), ಪಿಹು (8) ಮತ್ತು ಕುಹು (3) ಅವರ ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಪ್ರೀತಿ ತಿವಾರಿಯ ಪತಿ ರಾಹುಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಥಳದಲ್ಲಿ ಡೆತ್‌ನೋಟ್‌ ಕೂಡ ಇತ್ತು. ರಾಹುಲ್ ಬರೆದಿದ್ದ ಈ ಪತ್ರದಲ್ಲಿ, ಅತ್ತೆಯ ಮಾನಸಿಕ ಕಿರುಕುಳದ ಕುರಿತು ಪ್ರಸ್ತಾಪಿಸಲಾಗಿತತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...