Homeಮುಖಪುಟಉತ್ತರ ಪ್ರದೇಶ: ಪೊಲೀಸ್ ಭದ್ರತೆಯಲ್ಲೇ ದುಷ್ಕರ್ಮಿಗಳ ಗುಂಡೇಟಿಗೆ ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಬಲಿ

ಉತ್ತರ ಪ್ರದೇಶ: ಪೊಲೀಸ್ ಭದ್ರತೆಯಲ್ಲೇ ದುಷ್ಕರ್ಮಿಗಳ ಗುಂಡೇಟಿಗೆ ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಬಲಿ

- Advertisement -
- Advertisement -

ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳು ಗುಂಡಿ ದಾಳಿ ನಡೆಸಿದ್ದಾರೆ.

ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಮೇಲೆ ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕೃತ್ಯ ಎಸಗಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೂವರು ಆರೋಪಿಗಳನ್ನು ಅರುಣ್ ಮೌರ್ಯ, ಲವಲೇಶ್ ತಿವಾರಿ ಮತ್ತು ಸನ್ನಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಪತ್ರಿಕಾ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಅತಿಕ್ ಅಹಮದ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಶೂಟರ್ ಲವಲೇಶ್ ತಿವಾರಿ ತಂದೆ ಯಜ್ಞ ತಿವಾರಿ ಮಾತನಾಡಿ, ”ನಮಗೂ ಅವನಿಗೂ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಪೊಲೀಸರು ಮತ್ತು ಮಾಧ್ಯಮದವರ ಎದುರೇ ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅತೀಕ್‌ ಮತ್ತು ಅಶ್ರಫ್‌ ಮೇಲೆ ಏಕಾಏಕಿ ದಾಳಿ ನಡೆಸಿದರು. ತೀರಾ ಹತ್ತಿರದಲ್ಲಿಯೇ ದಾಳಿ ನಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಡರಾತ್ರಿ ನಡೆದ ಸಭೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ಹೆಚ್ಚಿನ ಜಾಗರೂಕರಾಗಿರಲು ಮತ್ತು ರಾಜ್ಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಸೂಚನೆ ನೀಡಿದ್ದಾರೆ. ಘಟನೆಯ ನಂತರ, ಎಲ್ಲಾ 75 ಯುಪಿ ಜಿಲ್ಲೆಗಳಲ್ಲಿ ಸಿಆರ್‌ಪಿಸಿ ಸೆಕ್ಷನ್ 144ಅನ್ನು ವಿಧಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

ಘಟನೆಯ ಬಗ್ಗೆ ವದಂತಿಗಳಿಗೆ ಗಮನ ಕೊಡಬೇಡಿ ಎಂದು ಯೋಗಿ ಆದಿತ್ಯನಾಥ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಯವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಯುಪಿ ಗೃಹ ಕಾರ್ಯದರ್ಶಿ ಸಂಜಯ್ ಪ್ರಸಾದ್, ಯುಪಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್ ಕೆ ವಿಶ್ವಕರ್ಮ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಯಾಗ್‌ರಾಜ್ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕಲಾಗುತ್ತಿದ್ದು ಈ ಬಗ್ಗೆ ಮೇಲ್ವಿಚಾರಣೆ ಮಾಡಲು ಮತ್ತು ಈ ನಿಟ್ಟಿನಲ್ಲಿ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುವ ಜನರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ರಾಜ್ಯ ಪೊಲೀಸ್ ಸಾಮಾಜಿಕ ಮಾಧ್ಯಮ ತಂಡಕ್ಕೆ ಆದೇಶಿಸಿದ್ದಾರೆ.

ಈ ಘಟನೆ ಕುರಿತು ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದು, ”ಬಿಜೆಪಿ ಭಾರತವನ್ನು ಮಾಫಿಯಾ ಗಣರಾಜ್ಯವನ್ನಾಗಿ ಮಾಡಿದೆ ಎಂದು ಇಲ್ಲಿಯೂ ಹೇಳುತ್ತೇನೆ, ವಿದೇಶದಲ್ಲೂ ಹೇಳುತ್ತೇನೆ, ಎಲ್ಲೆಲ್ಲೂ ಹೇಳುತ್ತೇನೆ ಏಕೆಂದರೆ ಇದು ಸತ್ಯ. ಬಂಧನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಮತ್ತು ಕ್ಯಾಮೆರಾಗಳ ಮುಂದೆಯೇ ಗುಂಡಿಕ್ಕಿ ಕೊಂದರು- ಇದು ಕಾನೂನು ನಿಯಮಗಳ ಸಾವು” ಎಂದಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, “ಉತ್ತರ ಪ್ರದೇಶದಲ್ಲಿ ಅಪರಾಧ ಉತ್ತುಂಗಕ್ಕೇರಿದೆ ಮತ್ತು ಅಪರಾಧಿಗಳು ಬೆಚ್ಚಿಬೀಳುತ್ತಿಲ್ಲ. ಪೊಲೀಸ್ ಸರ್ಪಗಾವಲಿನ ನಡುವೆ ಯಾರನ್ನಾದರೂ ಗುಂಡಿಕ್ಕಿ ಕೊಲ್ಲಬಹುದು, ಆಗ ಸಾಮಾನ್ಯರ ಪಾಡೇನು? ಇದರಿಂದ ಸಾರ್ವಜನಿಕರ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದ್ದು, ಕೆಲವರು ಉದ್ದೇಶಪೂರ್ವಕವಾಗಿ ಇಂತಹ ವಾತಾವರಣ ಸೃಷ್ಟಿಸುತ್ತಿರುವಂತೆ ಕಾಣುತ್ತಿದೆ”

ಅತೀಕ್-ಅಶ್ರಫ್ ಹತ್ಯೆ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಾತನಾಡಿದ್ದು, ”ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ತಂಡವನ್ನು ರಚಿಸಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ಗೆ ನಾನು ಒತ್ತಾಯಿಸುತ್ತೇನೆ. ಅಲ್ಲಿರುವ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ತೆಗೆದುಹಾಕಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.

ಬಿಎಸ್‌ಪಿಯ ಮಾಜಿ ಶಾಸಕ ರಾಜು ಪಾಲ್‌ ಅವರ ಹತ್ಯೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಕೊಲೆ ಪ್ರಕರಣದಲ್ಲಿ ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಆರೋಪಿಗಳಾಗಿದ್ದರು.

ಗುರುವಾರ ಉತ್ತರ ಪ್ರದೇಶದ ಪೊಲೀಸರು ಝಾನ್ಸಿಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಉಮೇಶ್‌ ಪಾಲ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಅತೀಕ್‌ ಅಹ್ಮದ್‌ನ ಪುತ್ರ ಅಸಾದ್‌ ಹಾಗೂ ಆತನ ಸಹಚರ ಗುಲಾಮ್‌  ಹತ್ಯೆಯಾಗಿದ್ದರು. ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಮೇಲೆ ಉಮೇಶ್‌ ಪಾಲ್‌ ಕೊಲೆ ಸೇರಿದಂತೆ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...