Homeಮುಖಪುಟಉತ್ತರಪ್ರದೇಶ: ಮಹಿಳೆಯರ ಭದ್ರತೆಗಾಗಿ "ಮಿಷನ್ ಶಕ್ತಿ" ಅಭಿಯಾನ ಆರಂಭಿಸಿದ ಸರ್ಕಾರ

ಉತ್ತರಪ್ರದೇಶ: ಮಹಿಳೆಯರ ಭದ್ರತೆಗಾಗಿ “ಮಿಷನ್ ಶಕ್ತಿ” ಅಭಿಯಾನ ಆರಂಭಿಸಿದ ಸರ್ಕಾರ

ರಾಜ್ಯಾದ್ಯಂತ 1535 ಪೊಲೀಸ್ ಠಾಣೆಗಳಲ್ಲಿ ಮಹಿಳಾ ದೂರುದಾರರಿಗಾಗಿ ಪ್ರತ್ಯೇಕ ಕೊಠಡಿ ಇರಲಿದ್ದು, ಅಲ್ಲಿ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಹಾಜರಿರುತ್ತಾರೆ. ಅವರ ದೂರಿನ ಮೇಲೆ ತುರ್ತು ಕ್ರಮ ಕೈಗೊಳ್ಳಲಾಗುವುದು.

- Advertisement -
- Advertisement -

ಉತ್ತರಪ್ರದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಗಳ ನಡುವೆ, ಮಹಿಳೆಯರ ಸುರಕ್ಷತೆಗಾಗಿ “ಮಿಷನ್ ಶಕ್ತಿ” ಎಂಬ ಅಭಿಯಾನವನ್ನು ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ರಾಜ್ಯಸರ್ಕಾರ ಆರಂಭಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಉತ್ತರಪ್ರದೇಶದಲ್ಲಿ ಮಹಿಳಾ ಭದ್ರತೆಗಾಗಿ ‘ಮಿಷನ್ ಶಕ್ತಿ’ ಎಂಬ ಕಾರ್ಯಕ್ರಮವನ್ನು ಪ್ರಾಂಭಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಲರಾಂಪುರದಲ್ಲಿದ್ದಾರೆ” ಎಂದು ಹೇಳಿದೆ.

ಈ ಕಾರ್ಯಕ್ರಮದಲ್ಲಿ ಆದಿತ್ಯನಾಥ್ ಮಾತನಾಡಿ, “ಅತ್ಯಂತ ದುರದೃಷ್ಟಕರ ಘಟನೆಯ ಹತ್ರಾಸ್ ಸಂತ್ರಸ್ತೆಗೆ ಗೌರವ ಸಲ್ಲಿಸುವ ಈ ಕಾರ್ಯಕ್ರಮದಲ್ಲಿ ಯುವತಿಯರು ಆತ್ಮರಕ್ಷಣೆಯ ತಂತ್ರಗಳ ಪ್ರದರ್ಶನ ನೀಡಿದರು. ಇಲ್ಲಿ ಮಿಷನ್ ಶಕ್ತಿ ಅಭಿಯಾನವನ್ನು ಪ್ರಾರಂಭಿಸಲು ನನಗೆ ಸಂತೋಷವಾಗುತ್ತಿದೆ. ಇದು ರಾಜ್ಯ ಪ್ರತಿಯೊಬ್ಬ ಮಹಿಳೆಗೆ ಭದ್ರತೆ ಮತ್ತು ಗೌರವವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ” ಎಂದರು.

ಇದನ್ನೂ ಓದಿ :ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ

ರಾಜ್ಯಾದ್ಯಂತ 1535 ಪೊಲೀಸ್ ಠಾಣೆಗಳಲ್ಲಿ ಮಹಿಳಾ ದೂರುದಾರರಿಗಾಗಿ ಈಗ ಪ್ರತ್ಯೇಕ ಕೊಠಡಿ ಇರಲಿದ್ದು, ಅಲ್ಲಿ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಹಾಜರಿರುತ್ತಾರೆ. ಅವರ ದೂರಿನ ಮೇಲೆ ತುರ್ತು ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಭಾಗಿಯಾದ ಅಪರಾಧಿಗಳಿಗೆ ಶೀಘ್ರ ಶಿಕ್ಷೆ ವಿಧಿಸಲಾಗುತ್ತದೆ” ಎಂದು ಹೇಳಿದರು.

ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವೆ ಈ ಕಾರ್ಯಕ್ರಮದ ಆರಂಭ ಆಶಾದಾಯಕವಾಗಿ ಕಂಡರೂ, ಇದು ಎಷ್ಟರಮಟ್ಟಿಗೆ ಕಾರ್ಯನಿರ್ವಹಿಸಲಿದೆ ಮತ್ತು ಎಷ್ಟು ಉಪಕಾರಿಯಾಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಅದಾಗ್ಯೂ, ರಾಜ್ಯ ಸರ್ಕಾರ ಮತ್ತು ಆದಿತ್ಯನಾಥ್ ಮೇಲೆ ಪ್ರತಿಪಕ್ಷಗಳೂ ಸೇರಿದಂತೆ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಇತ್ತೀಚೆಗೆ ರಾಜ್ಯದಲ್ಲಿ ಮಹಿಳೆಯರು ಮತ್ತು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿವೆ ಎಂದು ಅಪರಾಧ ದಾಖಲೆಗಳ ವಿಭಾಗದ ವರದಿ ಹೇಳಿತ್ತು. ಇದರ ನಡುವೆ ಈ ಕಾರ್ಯಕ್ರಮದ ಉದ್ಘಾಟನೆ ಜನತೆ ಮತ್ತು ವಿರೋಧ ಪಕ್ಷಗಳ ಕಣ್ಣೊರೆಸುವ ತಂತ್ರವಾಗಿರಬಹುದೇ ಎಂದು ಹಲವರು ಟೀಕಿಸಿದ್ದಾರೆ.


ಇದನ್ನೂ ಓದಿ :ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...