Homeಮುಖಪುಟಉತ್ತರಪ್ರದೇಶ: ಮಹಿಳೆಯರ ಭದ್ರತೆಗಾಗಿ "ಮಿಷನ್ ಶಕ್ತಿ" ಅಭಿಯಾನ ಆರಂಭಿಸಿದ ಸರ್ಕಾರ

ಉತ್ತರಪ್ರದೇಶ: ಮಹಿಳೆಯರ ಭದ್ರತೆಗಾಗಿ “ಮಿಷನ್ ಶಕ್ತಿ” ಅಭಿಯಾನ ಆರಂಭಿಸಿದ ಸರ್ಕಾರ

ರಾಜ್ಯಾದ್ಯಂತ 1535 ಪೊಲೀಸ್ ಠಾಣೆಗಳಲ್ಲಿ ಮಹಿಳಾ ದೂರುದಾರರಿಗಾಗಿ ಪ್ರತ್ಯೇಕ ಕೊಠಡಿ ಇರಲಿದ್ದು, ಅಲ್ಲಿ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಹಾಜರಿರುತ್ತಾರೆ. ಅವರ ದೂರಿನ ಮೇಲೆ ತುರ್ತು ಕ್ರಮ ಕೈಗೊಳ್ಳಲಾಗುವುದು.

- Advertisement -
- Advertisement -

ಉತ್ತರಪ್ರದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಗಳ ನಡುವೆ, ಮಹಿಳೆಯರ ಸುರಕ್ಷತೆಗಾಗಿ “ಮಿಷನ್ ಶಕ್ತಿ” ಎಂಬ ಅಭಿಯಾನವನ್ನು ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ರಾಜ್ಯಸರ್ಕಾರ ಆರಂಭಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಉತ್ತರಪ್ರದೇಶದಲ್ಲಿ ಮಹಿಳಾ ಭದ್ರತೆಗಾಗಿ ‘ಮಿಷನ್ ಶಕ್ತಿ’ ಎಂಬ ಕಾರ್ಯಕ್ರಮವನ್ನು ಪ್ರಾಂಭಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಲರಾಂಪುರದಲ್ಲಿದ್ದಾರೆ” ಎಂದು ಹೇಳಿದೆ.

ಈ ಕಾರ್ಯಕ್ರಮದಲ್ಲಿ ಆದಿತ್ಯನಾಥ್ ಮಾತನಾಡಿ, “ಅತ್ಯಂತ ದುರದೃಷ್ಟಕರ ಘಟನೆಯ ಹತ್ರಾಸ್ ಸಂತ್ರಸ್ತೆಗೆ ಗೌರವ ಸಲ್ಲಿಸುವ ಈ ಕಾರ್ಯಕ್ರಮದಲ್ಲಿ ಯುವತಿಯರು ಆತ್ಮರಕ್ಷಣೆಯ ತಂತ್ರಗಳ ಪ್ರದರ್ಶನ ನೀಡಿದರು. ಇಲ್ಲಿ ಮಿಷನ್ ಶಕ್ತಿ ಅಭಿಯಾನವನ್ನು ಪ್ರಾರಂಭಿಸಲು ನನಗೆ ಸಂತೋಷವಾಗುತ್ತಿದೆ. ಇದು ರಾಜ್ಯ ಪ್ರತಿಯೊಬ್ಬ ಮಹಿಳೆಗೆ ಭದ್ರತೆ ಮತ್ತು ಗೌರವವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ” ಎಂದರು.

ಇದನ್ನೂ ಓದಿ :ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ

ರಾಜ್ಯಾದ್ಯಂತ 1535 ಪೊಲೀಸ್ ಠಾಣೆಗಳಲ್ಲಿ ಮಹಿಳಾ ದೂರುದಾರರಿಗಾಗಿ ಈಗ ಪ್ರತ್ಯೇಕ ಕೊಠಡಿ ಇರಲಿದ್ದು, ಅಲ್ಲಿ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಹಾಜರಿರುತ್ತಾರೆ. ಅವರ ದೂರಿನ ಮೇಲೆ ತುರ್ತು ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಭಾಗಿಯಾದ ಅಪರಾಧಿಗಳಿಗೆ ಶೀಘ್ರ ಶಿಕ್ಷೆ ವಿಧಿಸಲಾಗುತ್ತದೆ” ಎಂದು ಹೇಳಿದರು.

ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವೆ ಈ ಕಾರ್ಯಕ್ರಮದ ಆರಂಭ ಆಶಾದಾಯಕವಾಗಿ ಕಂಡರೂ, ಇದು ಎಷ್ಟರಮಟ್ಟಿಗೆ ಕಾರ್ಯನಿರ್ವಹಿಸಲಿದೆ ಮತ್ತು ಎಷ್ಟು ಉಪಕಾರಿಯಾಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಅದಾಗ್ಯೂ, ರಾಜ್ಯ ಸರ್ಕಾರ ಮತ್ತು ಆದಿತ್ಯನಾಥ್ ಮೇಲೆ ಪ್ರತಿಪಕ್ಷಗಳೂ ಸೇರಿದಂತೆ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಇತ್ತೀಚೆಗೆ ರಾಜ್ಯದಲ್ಲಿ ಮಹಿಳೆಯರು ಮತ್ತು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿವೆ ಎಂದು ಅಪರಾಧ ದಾಖಲೆಗಳ ವಿಭಾಗದ ವರದಿ ಹೇಳಿತ್ತು. ಇದರ ನಡುವೆ ಈ ಕಾರ್ಯಕ್ರಮದ ಉದ್ಘಾಟನೆ ಜನತೆ ಮತ್ತು ವಿರೋಧ ಪಕ್ಷಗಳ ಕಣ್ಣೊರೆಸುವ ತಂತ್ರವಾಗಿರಬಹುದೇ ಎಂದು ಹಲವರು ಟೀಕಿಸಿದ್ದಾರೆ.


ಇದನ್ನೂ ಓದಿ :ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...