Homeಮುಖಪುಟಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ರಾಜಕಾರಣಿಗಳು, ಅಧಿಕಾರಿಗಳಿಂದ ಭೂಮಿ ಖರೀದಿ: ತನಿಖೆಗೆ ಆದೇಶ

ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ರಾಜಕಾರಣಿಗಳು, ಅಧಿಕಾರಿಗಳಿಂದ ಭೂಮಿ ಖರೀದಿ: ತನಿಖೆಗೆ ಆದೇಶ

- Advertisement -
- Advertisement -

ರಾಮಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್ ನವೆಂಬರ್ 9, 2019 ರಂದು ತೀರ್ಪು ನೀಡಿದ ನಂತರ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳ ಸಂಬಂಧಿಕರು ಅಯೋಧ್ಯೆಯಲ್ಲಿ ಭೂಮಿಯನ್ನು ಸ್ವಾಧಿನಪಡಿಸಿಕೊಂಡಿದ್ದಾರೆ ಅಥವಾ ಖರೀದಿಸಿದ್ದಾರೆ ಎಂಬ ವರದಿ ಹಿನ್ನೆಲೆ ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ಈ ಕುರಿತು ತನಿಖಾ ವರದಿಯನ್ನು ಪ್ರಕಟಿಸಿತ್ತು. ವರದಿಯನ್ನು ಪರಿಗಣಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ವಹಿವಾಟಿನ ಕುರಿತು ತನಿಖೆ ನಡೆಸಿ ವಾರದೊಳಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದೆ ಎಂದು ವರದಿಯಾಗಿದೆ.

ತನಿಖೆ ಬಗ್ಗೆ ದೃಢಪಡಿಸಿರುವ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ಮನೋಜ್ ಕುಮಾರ್ ಸಿಂಗ್, “ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪತ್ರಿಕೆಯ ವರದಿಯನ್ನು ಗಮನಕ್ಕೆ ತೆಗೆದುಕೊಂಡಿದ್ದಾರೆ. ಅವರ ನಿರ್ದೇಶನದ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ. ವಿಶೇಷ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಯೊಬ್ಬರಿಗೆ ತನಿಖೆ ನಡೆಸಲು ತಿಳಿಸಲಾಗಿದೆ. ಮುಂದಿನ 5 ರಿಂದ7 ದಿನಗಳಲ್ಲಿ ಸೂಕ್ತ ದಾಖಲೆಗಳೊಂದಿಗೆ ವರದಿ ನೀಡುವಂತೆ ಸಿಎಂ ಕೇಳಿದ್ದಾರೆ” ಎಂದಿದ್ದಾರೆ.

ರಾಮ ಮಂದಿರ ನಿರ್ಮಾಣವಾಗುತ್ತಿರುವ ಅಯೋಧ್ಯೆಯಲ್ಲಿ ಭೂಮಿಯನ್ನು ಖರೀದಿಸಿದವರಲ್ಲಿ ಕನಿಷ್ಠ 15 ಮಂದಿ ಸ್ಥಳೀಯ ಶಾಸಕರು, ಅಯೋಧ್ಯೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಥವಾ ಸೇವೆ ಸಲ್ಲಿಸುತ್ತಿರುವ ಅಧಿಕಾರಶಾಹಿ ವರ್ಗದ ನಿಕಟ ಸಂಬಂಧಿಗಳು ಮತ್ತು ಭೂ ವ್ಯವಹಾರಗಳನ್ನು ನಡೆಸುವ ಸ್ಥಳೀಯ ಕಂದಾಯ ಅಧಿಕಾರಿಗಳು ಸೇರಿದ್ದಾರೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ಇದನ್ನೂ ಓದಿ: ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಮದುವೆಯಾದ ಮೂರೇ ವಾರಕ್ಕೆ ಯುವತಿ ಬಲಿ

ಈ ಅಕ್ರಮ ವ್ಯವಹಾರಗಳ ಪ್ರಕರಣಗಳಲ್ಲಿ ಮಹರ್ಷಿ ರಾಮಾಯಣ ವಿದ್ಯಾಪೀಠ ಟ್ರಸ್ಟ್ (MRVT), ದಲಿತ ಗ್ರಾಮಸ್ಥರಿಂದ ಭೂಮಿಯನ್ನು ಖರೀದಿಸಿದ ಆರೋಪದಲಲ್ಲಿ ತನಿಖೆ ಎದುರಿಸುತ್ತಿದೆ. MRVT ಒಂದು ಡಜನ್ ದಲಿತ ಕುಟುಂಬಗಳಿಂದ ಸುಮಾರು 52,000 ಚದರ ಮೀ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ದಲಿತ ವ್ಯಕ್ತಿ ರೊಂಘಾಯ್ ಎಂಬುವವರನ್ನು ಬಳಸಿಕೊಂಡು ಕೇವಲ 6.38 ಲಕ್ಷ ರೂಪಾಯಿಗೆ ಜಮೀನು ಖರೀದಿಸಿದ. ಪ್ರಸ್ತುತ ಜಮೀನಿನ ದರದ ಮೌಲ್ಯವು ಸುಮಾರು 4.25 ಕೋಟಿಯಿಂದ 9.58 ಕೋಟಿಗಳಷ್ಟಿದೆ.

ಇನ್ನು ಇತರ 12 ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ವತಃ ಭೂಮಿಯನ್ನು ಖರೀದಿಸಿದ್ದಾರೆ. ಇಲ್ಲವೇ ತಮ್ಮ ಸಂಬಂಧಿಕರ ಮೂಲಕ ಭೂಮಿಯನ್ನು ಖರೀದಿಸಿದ್ದಾರೆ. ಅಯೋಧ್ಯೆ ಮೇಯರ್ ರಿಷಿಕೇಶ್ ಉಪಾಧ್ಯಾಯ, ಅಯೋಧ್ಯೆ ನಗರ ಶಾಸಕ ವೇದ್ ಪ್ರಕಾಶ್ ಗುಪ್ತಾ, ಗೋಸೈಗಂಜ್ ಶಾಸಕ ಇಂದ್ರ ಪ್ರತಾಪ್ ತಿವಾರಿ (ಈಗ ಅನರ್ಹಗೊಂಡಿದ್ದಾರೆ), ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಜ್ ಝಾ, ರಾಜ್ಯ ಮಾಹಿತಿ ಆಯುಕ್ತ ಹರ್ಷವರ್ಧನ್ ಶಾಹಿ, ಒಬಿಸಿ ಆಯೋಗದ ಸದಸ್ಯ ಬಲರಾಮ್ ಮೌರ್ಯ, ಈಗ ಕಾನ್ಪುರದಲ್ಲಿರುವ ಮಾಜಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಆಯುಷ್ ಚೌಧರಿ, ಸರ್ಕಲ್ ಅಧಿಕಾರಿ, ಪ್ರಾಂತೀಯ ಪೊಲೀಸ್ ಸೇವಾ ಅಧಿಕಾರಿ, ಈಗ ಮೀರತ್‌ನಲ್ಲಿರುವ ಅರವಿಂದ್ ಚೌರಾಸಿಯಾ, ಯುಪಿ ಕೇಡರ್‌ನ ನಿವೃತ್ತ ಐಎಎಸ್ ಅಧಿಕಾರಿ ಉಮಾಧರ್ ದ್ವಿವೇದಿ, ಗಂಜಾ ಸುಧಾಂಶು ರಂಜನ್ ಸೇರಿದಂತೆ ಹಲವಾರು ಗ್ರಾಮಗಳ ಕಾನೂಂಗೊ, ಗಂಜಾ ಗ್ರಾಮದ ಬದ್ರಿ ಉಪಾಧ್ಯಾಯದ ಲೇಖ್‌ಪಾಲ್ ಮತ್ತು ಎಂಆರ್‌ವಿಟಿ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಸಹಾಯಕ ದಾಖಲೆ ಅಧಿಕಾರಿ ಭಾನ್ ಸಿಂಗ್‌ನ ಪೇಷ್ಕರ್ ದಿನೇಶ್ ಓಜಾ ಈ ಇಷಟು ಅಧಿಕಾರಿಗಳು ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ ಅಥವಾ ಸ್ವಾಧಿನಪಡಿಸಿಕೊಂಡಿದ್ದಾರೆ.

ಇಂತಹ ಹಲವು ಪ್ರಕರಣಗಳು ಅಯೋಧಯೆಯಲ್ಲಿ ನಡೆದಿದ್ದು, ಅಧಿಕಾರಿ ವರ್ಗ ಇದರಲ್ಲಿ ಭಾಗಿಯಾಗಿದೆ ಎಂದು ತನಿಖಾ ವರದಿ ಬಹಿರಂಗ ಪಡೆಸಿತ್ತು. ಈ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆದೇಶಿಸಿದ್ದಾರೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...