Homeಮುಖಪುಟಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ರಾಜಕಾರಣಿಗಳು, ಅಧಿಕಾರಿಗಳಿಂದ ಭೂಮಿ ಖರೀದಿ: ತನಿಖೆಗೆ ಆದೇಶ

ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ರಾಜಕಾರಣಿಗಳು, ಅಧಿಕಾರಿಗಳಿಂದ ಭೂಮಿ ಖರೀದಿ: ತನಿಖೆಗೆ ಆದೇಶ

- Advertisement -
- Advertisement -

ರಾಮಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್ ನವೆಂಬರ್ 9, 2019 ರಂದು ತೀರ್ಪು ನೀಡಿದ ನಂತರ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳ ಸಂಬಂಧಿಕರು ಅಯೋಧ್ಯೆಯಲ್ಲಿ ಭೂಮಿಯನ್ನು ಸ್ವಾಧಿನಪಡಿಸಿಕೊಂಡಿದ್ದಾರೆ ಅಥವಾ ಖರೀದಿಸಿದ್ದಾರೆ ಎಂಬ ವರದಿ ಹಿನ್ನೆಲೆ ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ಈ ಕುರಿತು ತನಿಖಾ ವರದಿಯನ್ನು ಪ್ರಕಟಿಸಿತ್ತು. ವರದಿಯನ್ನು ಪರಿಗಣಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ವಹಿವಾಟಿನ ಕುರಿತು ತನಿಖೆ ನಡೆಸಿ ವಾರದೊಳಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದೆ ಎಂದು ವರದಿಯಾಗಿದೆ.

ತನಿಖೆ ಬಗ್ಗೆ ದೃಢಪಡಿಸಿರುವ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ಮನೋಜ್ ಕುಮಾರ್ ಸಿಂಗ್, “ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪತ್ರಿಕೆಯ ವರದಿಯನ್ನು ಗಮನಕ್ಕೆ ತೆಗೆದುಕೊಂಡಿದ್ದಾರೆ. ಅವರ ನಿರ್ದೇಶನದ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ. ವಿಶೇಷ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಯೊಬ್ಬರಿಗೆ ತನಿಖೆ ನಡೆಸಲು ತಿಳಿಸಲಾಗಿದೆ. ಮುಂದಿನ 5 ರಿಂದ7 ದಿನಗಳಲ್ಲಿ ಸೂಕ್ತ ದಾಖಲೆಗಳೊಂದಿಗೆ ವರದಿ ನೀಡುವಂತೆ ಸಿಎಂ ಕೇಳಿದ್ದಾರೆ” ಎಂದಿದ್ದಾರೆ.

ರಾಮ ಮಂದಿರ ನಿರ್ಮಾಣವಾಗುತ್ತಿರುವ ಅಯೋಧ್ಯೆಯಲ್ಲಿ ಭೂಮಿಯನ್ನು ಖರೀದಿಸಿದವರಲ್ಲಿ ಕನಿಷ್ಠ 15 ಮಂದಿ ಸ್ಥಳೀಯ ಶಾಸಕರು, ಅಯೋಧ್ಯೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಥವಾ ಸೇವೆ ಸಲ್ಲಿಸುತ್ತಿರುವ ಅಧಿಕಾರಶಾಹಿ ವರ್ಗದ ನಿಕಟ ಸಂಬಂಧಿಗಳು ಮತ್ತು ಭೂ ವ್ಯವಹಾರಗಳನ್ನು ನಡೆಸುವ ಸ್ಥಳೀಯ ಕಂದಾಯ ಅಧಿಕಾರಿಗಳು ಸೇರಿದ್ದಾರೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ಇದನ್ನೂ ಓದಿ: ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಮದುವೆಯಾದ ಮೂರೇ ವಾರಕ್ಕೆ ಯುವತಿ ಬಲಿ

ಈ ಅಕ್ರಮ ವ್ಯವಹಾರಗಳ ಪ್ರಕರಣಗಳಲ್ಲಿ ಮಹರ್ಷಿ ರಾಮಾಯಣ ವಿದ್ಯಾಪೀಠ ಟ್ರಸ್ಟ್ (MRVT), ದಲಿತ ಗ್ರಾಮಸ್ಥರಿಂದ ಭೂಮಿಯನ್ನು ಖರೀದಿಸಿದ ಆರೋಪದಲಲ್ಲಿ ತನಿಖೆ ಎದುರಿಸುತ್ತಿದೆ. MRVT ಒಂದು ಡಜನ್ ದಲಿತ ಕುಟುಂಬಗಳಿಂದ ಸುಮಾರು 52,000 ಚದರ ಮೀ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ದಲಿತ ವ್ಯಕ್ತಿ ರೊಂಘಾಯ್ ಎಂಬುವವರನ್ನು ಬಳಸಿಕೊಂಡು ಕೇವಲ 6.38 ಲಕ್ಷ ರೂಪಾಯಿಗೆ ಜಮೀನು ಖರೀದಿಸಿದ. ಪ್ರಸ್ತುತ ಜಮೀನಿನ ದರದ ಮೌಲ್ಯವು ಸುಮಾರು 4.25 ಕೋಟಿಯಿಂದ 9.58 ಕೋಟಿಗಳಷ್ಟಿದೆ.

ಇನ್ನು ಇತರ 12 ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ವತಃ ಭೂಮಿಯನ್ನು ಖರೀದಿಸಿದ್ದಾರೆ. ಇಲ್ಲವೇ ತಮ್ಮ ಸಂಬಂಧಿಕರ ಮೂಲಕ ಭೂಮಿಯನ್ನು ಖರೀದಿಸಿದ್ದಾರೆ. ಅಯೋಧ್ಯೆ ಮೇಯರ್ ರಿಷಿಕೇಶ್ ಉಪಾಧ್ಯಾಯ, ಅಯೋಧ್ಯೆ ನಗರ ಶಾಸಕ ವೇದ್ ಪ್ರಕಾಶ್ ಗುಪ್ತಾ, ಗೋಸೈಗಂಜ್ ಶಾಸಕ ಇಂದ್ರ ಪ್ರತಾಪ್ ತಿವಾರಿ (ಈಗ ಅನರ್ಹಗೊಂಡಿದ್ದಾರೆ), ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಜ್ ಝಾ, ರಾಜ್ಯ ಮಾಹಿತಿ ಆಯುಕ್ತ ಹರ್ಷವರ್ಧನ್ ಶಾಹಿ, ಒಬಿಸಿ ಆಯೋಗದ ಸದಸ್ಯ ಬಲರಾಮ್ ಮೌರ್ಯ, ಈಗ ಕಾನ್ಪುರದಲ್ಲಿರುವ ಮಾಜಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಆಯುಷ್ ಚೌಧರಿ, ಸರ್ಕಲ್ ಅಧಿಕಾರಿ, ಪ್ರಾಂತೀಯ ಪೊಲೀಸ್ ಸೇವಾ ಅಧಿಕಾರಿ, ಈಗ ಮೀರತ್‌ನಲ್ಲಿರುವ ಅರವಿಂದ್ ಚೌರಾಸಿಯಾ, ಯುಪಿ ಕೇಡರ್‌ನ ನಿವೃತ್ತ ಐಎಎಸ್ ಅಧಿಕಾರಿ ಉಮಾಧರ್ ದ್ವಿವೇದಿ, ಗಂಜಾ ಸುಧಾಂಶು ರಂಜನ್ ಸೇರಿದಂತೆ ಹಲವಾರು ಗ್ರಾಮಗಳ ಕಾನೂಂಗೊ, ಗಂಜಾ ಗ್ರಾಮದ ಬದ್ರಿ ಉಪಾಧ್ಯಾಯದ ಲೇಖ್‌ಪಾಲ್ ಮತ್ತು ಎಂಆರ್‌ವಿಟಿ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಸಹಾಯಕ ದಾಖಲೆ ಅಧಿಕಾರಿ ಭಾನ್ ಸಿಂಗ್‌ನ ಪೇಷ್ಕರ್ ದಿನೇಶ್ ಓಜಾ ಈ ಇಷಟು ಅಧಿಕಾರಿಗಳು ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ ಅಥವಾ ಸ್ವಾಧಿನಪಡಿಸಿಕೊಂಡಿದ್ದಾರೆ.

ಇಂತಹ ಹಲವು ಪ್ರಕರಣಗಳು ಅಯೋಧಯೆಯಲ್ಲಿ ನಡೆದಿದ್ದು, ಅಧಿಕಾರಿ ವರ್ಗ ಇದರಲ್ಲಿ ಭಾಗಿಯಾಗಿದೆ ಎಂದು ತನಿಖಾ ವರದಿ ಬಹಿರಂಗ ಪಡೆಸಿತ್ತು. ಈ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆದೇಶಿಸಿದ್ದಾರೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...