Homeಮುಖಪುಟಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

- Advertisement -
- Advertisement -

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ (ಜು.15) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಎಲ್ಲಾ ಕಟ್ಟಡಗಳನ್ನು ಯಾವುದೇ ಅನುಮೋದಿತ ಕಟ್ಟಡ ಯೋಜನೆಗಳಿಲ್ಲದೆ (ನಕ್ಷೆ ಮಂಜೂರಾತಿ ಇಲ್ಲದೆ) ಕಾನೂನುಬಾಹಿರವಾಗಿ ನಿರ್ಮಿಸಲಾಗಿದೆ ಎಂದು ಪ್ರಾಧಿಕಾರ ಹೇಳಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಉತ್ತರ ಪ್ರದೇಶ ನಗರಾಭಿವೃದ್ಧಿ ಮತ್ತು ಯೋಜನಾ ಕಾಯ್ದೆ 1973ರ ಸೆಕ್ಷನ್ 27(1) ರ ಅಡಿಯಲ್ಲಿ ಕಟ್ಟಡಗಳನ್ನು ಕೆಡವಲು ಆದೇಶ ಹೊರಡಿಸಲಾಗಿದೆ. ಪ್ರಕರಣದ ವಿಚಾರಣೆ ಹಾಗೂ ದಾಖಲೆಗಳ ಕೂಲಂಕಷ ಪರಿಶೀಲನೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ರಾಂಪುರ ಜಿಲ್ಲಾಧಿಕಾರಿ ಅಜಯ್ ಕುಮಾರ್ ದ್ವಿವೇದಿ ಅವರ ಪ್ರಕಾರ, ವಿಶ್ವವಿದ್ಯಾಲಯದ ಆವರಣದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಗಳು ನಡೆದಿರುವ ಬಗ್ಗೆ ಪ್ರಾದೇಶಿಕ ಕಿರಿಯ ಇಂಜಿನಿಯರ್ (ಜೂನಿಯರ್ ಇಂಜಿನಿಯರ್) ವರದಿ ನೀಡಿದ ನಂತರ ಈ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿತ್ತು. ಈ ಸಂಬಂಧ ನೋಟಿಸ್ ಜಾರಿಯಾದ ಬಳಿಕ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಜುಲೈ 8ರಂದು ತನ್ನ ಲಿಖಿತ ಉತ್ತರವನ್ನು ಸಲ್ಲಿಸಿತ್ತು. ತದನಂತರ ಜುಲೈ 15ರಂದು ಅದಕ್ಕೆ ವೈಯಕ್ತಿಕ ವಿಚಾರಣೆಯ ಅವಕಾಶವನ್ನು ಸಹ ನೀಡಲಾಗಿತ್ತು.

ವಿಚಾರಣೆಯ ಸಮಯದಲ್ಲಿ, ಸಿಂಗನ್‌ಖೇಡಾ ಗ್ರಾಮದಲ್ಲಿರುವ ವಿಶ್ವವಿದ್ಯಾಲಯದ ಜಾಗವು ಸೆಪ್ಟೆಂಬರ್ 27,2024 ರವರೆಗೆ ಆರ್‌ಡಿಎ ವ್ಯಾಪ್ತಿಯಿಂದ ಹೊರಗಿತ್ತು, ಆದ್ದರಿಂದ ಕಟ್ಟಡ ನಿರ್ಮಾಣಕ್ಕೆ ಅದರ ಅನುಮೋದನೆಯ ಅಗತ್ಯವಿರಲಿಲ್ಲ ಎಂದು ವಿಶ್ವವಿದ್ಯಾಲಯವು ವಾದಿಸಿದೆ. ಅಲ್ಲದೆ, ಈ ಕಟ್ಟಡಗಳನ್ನು ಬಹಳ ಹಿಂದೆಯೇ ನಿರ್ಮಿಸಲಾಗಿದ್ದು, ಪ್ರಸ್ತುತ ನಿಯಮಗಳ ಅಡಿಯಲ್ಲಿ ಅವುಗಳನ್ನು ಕಾನೂನುಬಾಹಿರ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಆಡಳಿತ ಮಂಡಳಿ ಪ್ರತಿಪಾದಿಸಿದೆ.

ಆದರೆ ಈ ವಾದಗಳನ್ನು ತಿರಸ್ಕರಿಸಿದ ಆರ್‌ಡಿಎ, ಕಟ್ಟಡ ನಿರ್ಮಾಣದ ಸಮಯದಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯುವುದು ಕಡ್ಡಾಯವಾಗಿತ್ತು ಎಂದು ಪ್ರತಿಪಾದಿಸಿದೆ. ಆ ಪ್ರದೇಶವು ನಂತರದ ದಿನಗಳಲ್ಲಿ ತನ್ನ ವ್ಯಾಪ್ತಿಗೆ ಒಳಪಟ್ಟಿದೆಯೇ ಅಥವಾ ಇಲ್ಲವೇ ಎಂಬುದು ಇಲ್ಲಿ ಮುಖ್ಯವಾಗುವುದಿಲ್ಲ ಎಂದು ಹೇಳಿದೆ.

ಆದೇಶದ ಪ್ರಕಾರ, ರಾಂಪುರ ಜಿಲ್ಲಾ ಪಂಚಾಯತ್‌ನ ದಾಖಲೆಗಳು ಕೇವಲ ವೈದ್ಯಕೀಯ ಕಾಲೇಜು ಮತ್ತು ಶೈಕ್ಷಣಿಕ ಬ್ಲಾಕ್‌ಗೆ ಮಾತ್ರ ಅನುಮೋದಿತ ಕಟ್ಟಡ ಯೋಜನೆಗಳಿರುವುದನ್ನು ತೋರಿಸಿವೆ. ಆದರೆ, ಉಳಿದ 38 ಕಟ್ಟಡಗಳಿಗೆ ಯಾವುದೇ ಮಾನ್ಯತೆ ಇರುವ ಅನುಮೋದನೆ ಇಲ್ಲದಿರುವುದು ಕಂಡುಬಂದಿದೆ. ವಿಶ್ವವಿದ್ಯಾಲಯಕ್ಕೆ ಈ ಕಟ್ಟಡ ನಕ್ಷೆಯ ಅನುಮೋದನೆಯ ಅಗತ್ಯತೆಯ ಬಗ್ಗೆ ಮೊದಲೇ ತಿಳಿದಿತ್ತು ಎಂಬುದನ್ನು ಸಹ ಆದೇಶದಲ್ಲಿ ಉಲ್ಲೇಖಿಸಲಾಗಿದೆ; ಏಕೆಂದರೆ ಅದು ಈಗಾಗಲೇ ಅನುಮತಿ ಪಡೆದ ಎರಡು ಕಟ್ಟಡಗಳಿಗೆ ಮಂಜೂರಾತಿ ಪಡೆದುಕೊಂಡಿತ್ತು, ಆದರೆ ಉಳಿದ ಕಟ್ಟಡಗಳನ್ನು ಯಾವುದೇ ಅಧಿಕೃತ ಅನುಮತಿಯಿಲ್ಲದೆ ಕಾನೂನುಬಾಹಿರವಾಗಿ ನಿರ್ಮಿಸಿದೆ.

ಈ ಎಲ್ಲಾ ನಿರ್ಮಾಣಗಳು ಉತ್ತರ ಪ್ರದೇಶ ನಗರಾಭಿವೃದ್ಧಿ ಮತ್ತು ಯೋಜನಾ ಕಾಯ್ದೆಯನ್ನು ಉಲ್ಲಂಘಿಸಿವೆ, ಆದ್ದರಿಂದ ಇವುಗಳನ್ನು ಧ್ವಂಸಗೊಳಿಸುವುದು ಅನಿವಾರ್ಯ ಎಂದು ಪ್ರಾಧಿಕಾರವು ತೀರ್ಮಾನಿಸಿದೆ.

ಉತ್ತರ ಪ್ರದೇಶ ಶಾಸಕಾಂಗದ ಕಾಯ್ದೆಯ ಮೂಲಕ 2006ರಲ್ಲಿ ಸ್ಥಾಪನೆಯಾದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯವು ಆಝಂ ಖಾನ್ ಅವರ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ, ಇದು ಭೂ ಒತ್ತುವರಿ ಮತ್ತು ಗುತ್ತಿಗೆ ನಿಯಮಗಳ ಉಲ್ಲಂಘನೆಯ ಆರೋಪಗಳ ಮೇಲೆ ಕಾನೂನು ವಿವಾದಗಳಲ್ಲಿ ಸಿಲುಕಿಕೊಂಡಿದೆ. ಈ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶ ಸರ್ಕಾರವು ವಿಶ್ವವಿದ್ಯಾಲಯದ ಜಮೀನಿನ ಬಹುದೊಡ್ಡ ಭಾಗವನ್ನು ತನ್ನ ಸುಪರ್ದಿಗೆ ಪಡೆದುಕೊಂಡಿದೆ.

ಈ ವರ್ಷದ ಆರಂಭದಲ್ಲಿ, ಆಝಂ ಖಾನ್ ಮತ್ತು ಅವರ ಕುಟುಂಬ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯಿಂದ (ಟ್ರಸ್ಟ್) ಅಧಿಕೃತವಾಗಿ ಕೆಳಗಿಳಿದಿದೆ. ಈ ವಿಶ್ವವಿದ್ಯಾಲಯವನ್ನು ಮುನ್ನಡೆಸುವ ಮೌಲಾನಾ ಮೊಹಮ್ಮದ್ ಅಲಿ ಜೌಹರ್ ಟ್ರಸ್ಟ್‌ನ ಚಾನ್ಸಲರ್ ಮತ್ತು ಆಜೀವ ಅಧ್ಯಕ್ಷರಾಗಿ ಖಾನ್ ಅವರು ಸೇವೆ ಸಲ್ಲಿಸುತ್ತಿದ್ದರು.

Courtesy : timesofindia.indiatimes.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...