Homeಮುಖಪುಟಮದ್ರಸಾ ಕಾಯ್ದೆ ತಿದ್ದುಪಡಿಗೆ ಮುಂದಾದ ಉತ್ತರ ಪ್ರದೇಶ ಸರ್ಕಾರ

ಮದ್ರಸಾ ಕಾಯ್ದೆ ತಿದ್ದುಪಡಿಗೆ ಮುಂದಾದ ಉತ್ತರ ಪ್ರದೇಶ ಸರ್ಕಾರ

- Advertisement -
- Advertisement -

ಮದ್ರಸಾ ಕಾಯ್ದೆಯ ತಿದ್ದುಪಡಿಗೆ ಉತ್ತರ ಪ್ರದೇಶ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಕರಡು ಮಸೂದೆಯನ್ನು ಸಿದ್ದಪಡಿಸಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶ ಮದ್ರಸಾ ಕಾಯ್ದೆ-2004ರ ಅಡಿ ಸ್ಥಾಪಿತವಾಗಿರುವ ಮದ್ರಸಾ ಮಂಡಳಿ ಪ್ರಸ್ತುತ 1ನೇ ತರಗತಿಯಿಂದ ಪದವಿವರೆಗಿನ ತರಗತಿಗಳ ಪಠ್ಯ, ಪರೀಕ್ಷೆ ಸೇರಿದಂತೆ ಎಲ್ಲಾ ವಿಷಯಗಳನ್ನು ನಿಯಂತ್ರಣ, ನಿರ್ವಹಣೆ ಮಾಡುತ್ತಿದೆ. ಕಾಯ್ದೆಗೆ ತಿದ್ದುಪಡಿ ತಂದರೆ, ಮದ್ರಸಾ ಮಂಡಳಿ 1ರಿಂದ 12ರವರೆಗಿನ ತರಗತಿಗಳನ್ನು ಮಾತ್ರ ನಿಯಂತ್ರಣ ಮಾಡಲಿದೆ.

ಕೆಲ ಇಸ್ಲಾಮಿಕ್ ಸಂಸ್ಥೆಗಳಲ್ಲಿ ‘ಮೌಲವಿ, ಫಾಝಿಲ್’ ಎಂಬ ಇಸ್ಲಾಮಿಕ್ ಬಿರುದುಗಳನ್ನು ನೀಡಲಾಗುತ್ತದೆ. ಈ ಪದವಿಗಳನ್ನೂ ಮದ್ರಸಾ ಮಂಡಳಿಯೇ ನಿಯಂತ್ರಣ ಮಾಡುತ್ತಿದೆ. ಅಂದರೆ, ಮದ್ರಸಾ ಮಂಡಳಿಗೆ ಪದವಿ ನೀಡಲು ಅಧಿಕಾರವಿದೆ. ಆದರೆ, 1956ರ ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ದ ಕಾಯ್ದೆ ಪದವಿ ನೀಡುವ ಅಧಿಕಾರ ವಿಶ್ವ ವಿದ್ಯಾನಿಲಯಗಳಿಗೆ ಮಾತ್ರ ಇದೆ ಎಂದು ಹೇಳುತ್ತದೆ. ಈ ವಿಚಾರ ಸಂಘರ್ಷಕ್ಕೆ ಕಾರಣವಾಗಬಹುದು. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಿ ಎಂದು ಕಳೆದ ತಿಂಗಳು ಸುಪ್ರೀಂ ಕೋರ್ಟ್ ಹೇಳಿತ್ತು. ಹಾಗಾಗಿ, ಉತ್ತರ ಪ್ರದೇಶ ಸರ್ಕಾರ ಮದ್ರಸಾ ಕಾಯ್ದೆಗೆ ತಿದ್ದುಪಡಿ ತಂದು ಪದವಿ ವಿಷಯವನ್ನು ಹೊರಗಿಡಲು ಮುಂದಾಗಿದೆ.

ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ 2004ರ ಉತ್ತರ ಪ್ರದೇಶ ಮದ್ರಸಾ ಶಿಕ್ಷಣ ಮಂಡಳಿ ಕಾಯ್ದೆ (Uttar Pradesh Board of Madrasa Education Act)ಯ ಸಾಂವಿಧಾನಿಕ ಸಿಂಧುತ್ವವನ್ನು 2024ರ ನವೆಂಬರ್ 5ರಂದು ಎತ್ತಿ ಹಿಡಿದಿದೆ. ಈ ಮೂಲಕ ಕಾಯ್ದೆಯನ್ನು ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಬದಿಗೊತ್ತಿದೆ.

2024ರ ಮಾರ್ಚ್‌ನಲ್ಲಿ, ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಮದ್ರಸಾ ಶಿಕ್ಷಣ ಮಂಡಳಿ ಕಾಯ್ದೆ-2004 ಅನ್ನು ರದ್ದುಗೊಳಿಸಿತ್ತು. ಈ ಕಾಯ್ದೆ ಜಾತ್ಯತೀತತೆಯ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು. ಆದರೆ, ಏಪ್ರಿಲ್‌ನಲ್ಲಿ ಮಧ್ಯಂತರ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್, ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ನಿರ್ಧರಿಸುವವರೆಗೆ ಹೈಕೋರ್ಟ್ ತೀರ್ಪಿಗೆ ತಡೆ ನೀಡಿತ್ತು. ಬಳಿಕ ನವೆಂಬರ್ 5ರಂದು ಅಂತಿಮ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಎತ್ತಿ ಹಿಡಿದಿದೆ.

ಕಾಯ್ದೆಯ ಕುರಿತ ಮೇಲ್ಮವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಉತ್ತರಿಸಿದ್ದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ, ಕಾಯ್ದೆ ಸಾಂವಿಧಾನಿಕವಾಗಿದೆ. ಅದನ್ನು ಸಂಪೂರ್ಣವಾಗಿ ರದ್ದುಪಡಿಸಬೇಕಿಲ್ಲ. ಕೆಲವೊಂದು ಆಕ್ಷೇಪಾರ್ಹ ನಿಬಂಧನೆಗಳನ್ನು ಮಾತ್ರ ಮರು ಪರಿಶೀಲಿಸಬೇಕಿದೆ ಎಂದಿತ್ತು.

ಮದ್ರಸಾ ಕಾಯ್ದೆಯು ಮದ್ರಸಾ ಶಿಕ್ಷಣಕ್ಕೆ ಕಾನೂನು ಚೌಕಟ್ಟನ್ನು ಒದಗಿಸುತ್ತದೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಆರ್‌ಟಿ) ಪಠ್ಯಕ್ರಮದ ಹೊರತಾಗಿ, ಧಾರ್ಮಿಕ ಶಿಕ್ಷಣ ನೀಡಲು ಅನುವು ಮಾಡಿಕೊಡುತ್ತದೆ.

ಮದ್ರಸಾ ಕಾಯ್ದೆಯಡಿ ಮುಸ್ಲಿಂ ಸಮುದಾಯದ ಸದಸ್ಯರನ್ನು ಒಳಗೊಂಡ ಮದ್ರಸಾ ಶಿಕ್ಷಣ ಮಂಡಳಿಯನ್ನು ರಚಿಸಲಾಗುತ್ತದೆ. ಈ ಮಂಡಳಿ ಮದ್ರಸಾ ಶಿಕ್ಷಣದ ಪಠ್ಯ ಪುಸ್ತಕ ಸೇರಿದಂತೆ ಕೋರ್ಸ್ ಮೆಟೀರಿಯಲ್‌ಗಳನ್ನು ಸಿದ್ದಪಡಿಸುವುದು, ‘ಮೌಲವಿ’ (10ನೇ ತರಗತಿಗೆ ಸಮಾನ) ಮತ್ತು ‘ಪಾಝಿಲ್’ (ಸ್ನಾತಕೋತ್ತರಕ್ಕೆ ಸಮಾನ) ಕೋರ್ಸ್‌ಗಳಿಗೆ ಪರೀಕ್ಷೆಗಳನ್ನು ನಡೆಸುವುದು ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ನಡೆಸುತ್ತದೆ. ಈ ಮದ್ರಸಾ ಮಂಡಳಿಯ ಕಾರ್ಯವೈಖರಿಯ ಬಗ್ಗೆ ಕಾಯ್ದೆಯ ಸೆಕ್ಷನ್ 9ರಡಿ ವಿವರಿಸಲಾಗಿದೆ.

ಇದನ್ನೂ ಓದಿ : ಹೋಟೆಲ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆ ಮೇಲೆ ಸಂಪೂರ್ಣ ನಿಷೇಧ: ಅಸ್ಸಾಂ ಸಿಎಂ ಘೋಷಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...