Homeಮುಖಪುಟಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ

ಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ

- Advertisement -
- Advertisement -

ಆಸ್ಪತ್ರೆಯ ಕಟ್ಟಡದೊಳಗೆ ಯುವ ದಂಪತಿಗಳಿಬ್ಬರು ತಮ್ಮ ಒಂದು ವರ್ಷದ ಗಂಡು ಮಗುವನ್ನು ಅಪ್ಪಿ ಹಿಡಿದುಕೊಂಡು ಅಳುತ್ತಿರುವ ಹೃದಯ ವಿದ್ರಾವಕಾರಿ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅದು ಉತ್ತರ ಪ್ರದೇಶದ ಕನೌಜ್ ಪಟ್ಟಣದ್ದೆಂದು ವರದಿಯಾಗಿದೆ.

ತಮ್ಮ ಒಂದು ವರ್ಷದ ಮಗುವಿಗೆ ಜ್ವರ ಹಾಗೂ ಕತ್ತಿನ ಭಾಗ ಊದಿ ಕೊಂಡಿದ್ದರಿಂದ ಆಸ್ಪತ್ರೆಗೆ ಧಾವಿಸಿದ್ದರು. ಆದರೆ ಆಸ್ಪತ್ರೆಯ ವೈದ್ಯರು ಮಗುವನ್ನು ಮುಟ್ಟಲು ನಿರಾಕರಿಸಿ, ಮಗುವನ್ನು ಆಸ್ಪತ್ರೆಯಿಂದ 90 ಕಿ.ಮಿ. ದೂರದ ಕಾನ್ಪುರಕ್ಕೆ ಕರೆದೊಯ್ಯಲು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆಸ್ಪತ್ರೆಯ ವೈದ್ಯರು ಮತ್ತು ಕನೌಜ್‌ ಜಿಲ್ಲಾಡಳಿತ ಇದನ್ನು ನಿರಾಕರಿಸಿದೆ.

ನಿನ್ನೆ ಸಂಜೆ 4.45 ರ ಸುಮಾರಿಗೆ ಚಿತ್ರೀಕರಿಸಿದ ವೀಡಿಯೊವೊಂದರಲ್ಲಿ ದಂಪತಿಗಳಾದ ಪ್ರೇಮ್‌‌ ಚಂದ್ ಮತ್ತು ಆಶಾ ದೇವಿ ತಮ್ಮ ಮಗು ಅನುಜ್ ಮೃತ ದೇಹವನ್ನು ಹಿಡಿದು ರೋಧಿಸುತ್ತಿರುವುದು ಕಾಣಬಹುದಾಗಿದೆ.

ಮತ್ತೊಂದು ವೀಡಿಯೋ ಕ್ಲಿಪ್ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಯ ಮೇಲೆ ಮಗುವನ್ನು ವೈದ್ಯರು ಪರೀಕ್ಷಿಸುತ್ತಿರುವುದನ್ನು ತೋರಿಸುತ್ತದೆ.

“ಜನರು ತಮ್ಮ ಫೋನ್‌ಗಳಲ್ಲಿ ನಮ್ಮನ್ನು ಚಿತ್ರೀಕರಿಸಲು ಪ್ರಾರಂಭಿಸಿದ ನಂತರವೇ ಆ ಪರೀಕ್ಷೆ ಮಾಡಿದ್ದಾರೆ. ಅದಕ್ಕೂ ಮೊದಲು ಯಾವುದೇ ವೈದ್ಯರು ನನ್ನ ಮಗುವನ್ನು ಮುಟ್ಟಲು ಸಿದ್ಧರಿರಲಿಲ್ಲ. ನಾವು 30 ನಿಮಿಷಗಳ ಕಾಲ ಅಲ್ಲಿದ್ದೆವು. ಅವರು ‘ಕಾನ್ಪುರಕ್ಕೆ ಕರೆದೊಯ್ಯಿರಿ’ ಎಂದು ಹೇಳುತ್ತಲೇ ಇದ್ದರು. ನಾನು ಒಬ್ಬ ಬಡ ವ್ಯಕ್ತಿ ನನ್ನ ಬಳಿ ಹಣವಿಲ್ಲ. ನಾನು ಏನು ಮಾಡಬಹುದಿತ್ತು” ಎಂದು ಪ್ರೇಮ್ ಚಂದ್ ಹೇಳಿದ್ದಾರೆ.

“ಅವನ ಕುತ್ತಿಗೆ ಊದಿಕೊಂಡಿತ್ತು, ಅವರು ನಮ್ಮನ್ನು 30-40 ನಿಮಿಷಗಳ ಕಾಲ ಕಾಯಿಸಿದ್ದರು. ನಂತರ ದಾಖಲಿಸಲಾಯಿತಾದರೂ ಆ ಹೊತ್ತಲ್ಲಿ ಮಗು ಸತ್ತು ಹೋಗಿತ್ತು” ಎಂದು ಮಗುವಿನ ತಾಯಿ ಆಶಾ ದೇವಿ ಹೇಳಿದ್ದಾರೆ.

ಜಿಲ್ಲೆಯ ವೈದ್ಯರು ಮತ್ತು ಅಧಿಕಾರಿಗಳು ಆರೋಪವನ್ನು ನಿರಾಕರಿಸಿ ಯಾವುದೇ ನಿರ್ಲಕ್ಷ್ಯ ನಡೆದಿಲ್ಲ ಎಂದಿದ್ದಾರೆ.

“ನಿನ್ನೆ ಸಂಜೆ 4.15 ಕ್ಕೆ ಬಾಲಕನನ್ನು ಆಸ್ಪತ್ರೆಗೆ ಕರೆತರಲಾಯಿತು. ಮಗುವನ್ನು ತುರ್ತು ವಾರ್ಡ್‌ಗೆ ದಾಖಲಿಸಲಾಗಿದೆ. ಪ್ರಕರಣವು ತುಂಬಾ ಗಂಭೀರವಾಗಿತ್ತು, ಅದಕ್ಕೆ ಮಕ್ಕಳ ತಜ್ಞರನ್ನು ತುರ್ತು ವಾರ್ಡ್‌ಗೆ ಕರೆಸಲಾಯಿತು ಆದರೆ 30 ನಿಮಿಷಗಳ ಅಂತರದಲ್ಲಿ ಮಗು ಸಾವನ್ನಪ್ಪಿತು. ವೈದ್ಯರು ಅವರು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದರು ಆದರೆ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ. ಮೇಲ್ನೋಟಕ್ಕೆ ಯಾವುದೇ ನಿರ್ಲಕ್ಷ್ಯ ಕಂಡುಬಂದಿಲ್ಲ ಎಂದು ತೋರುತ್ತದೆ ” ಎಂದು ಕನೌಜ್‌ನ ಸರ್ಕಾರಿ ಉನ್ನತ ಅಧಿಕಾರಿ ರಾಜೇಶ್ ಕುಮಾರ್ ಮಿಶ್ರಾ ಮಾಧ್ಯಮಕ್ಕೆ ತಿಳಿಸಿದ್ದಾರೆ.


ಓದಿ: ಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...