Homeಮುಖಪುಟಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ

ಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ

- Advertisement -
- Advertisement -

ಆಸ್ಪತ್ರೆಯ ಕಟ್ಟಡದೊಳಗೆ ಯುವ ದಂಪತಿಗಳಿಬ್ಬರು ತಮ್ಮ ಒಂದು ವರ್ಷದ ಗಂಡು ಮಗುವನ್ನು ಅಪ್ಪಿ ಹಿಡಿದುಕೊಂಡು ಅಳುತ್ತಿರುವ ಹೃದಯ ವಿದ್ರಾವಕಾರಿ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅದು ಉತ್ತರ ಪ್ರದೇಶದ ಕನೌಜ್ ಪಟ್ಟಣದ್ದೆಂದು ವರದಿಯಾಗಿದೆ.

ತಮ್ಮ ಒಂದು ವರ್ಷದ ಮಗುವಿಗೆ ಜ್ವರ ಹಾಗೂ ಕತ್ತಿನ ಭಾಗ ಊದಿ ಕೊಂಡಿದ್ದರಿಂದ ಆಸ್ಪತ್ರೆಗೆ ಧಾವಿಸಿದ್ದರು. ಆದರೆ ಆಸ್ಪತ್ರೆಯ ವೈದ್ಯರು ಮಗುವನ್ನು ಮುಟ್ಟಲು ನಿರಾಕರಿಸಿ, ಮಗುವನ್ನು ಆಸ್ಪತ್ರೆಯಿಂದ 90 ಕಿ.ಮಿ. ದೂರದ ಕಾನ್ಪುರಕ್ಕೆ ಕರೆದೊಯ್ಯಲು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆಸ್ಪತ್ರೆಯ ವೈದ್ಯರು ಮತ್ತು ಕನೌಜ್‌ ಜಿಲ್ಲಾಡಳಿತ ಇದನ್ನು ನಿರಾಕರಿಸಿದೆ.

ನಿನ್ನೆ ಸಂಜೆ 4.45 ರ ಸುಮಾರಿಗೆ ಚಿತ್ರೀಕರಿಸಿದ ವೀಡಿಯೊವೊಂದರಲ್ಲಿ ದಂಪತಿಗಳಾದ ಪ್ರೇಮ್‌‌ ಚಂದ್ ಮತ್ತು ಆಶಾ ದೇವಿ ತಮ್ಮ ಮಗು ಅನುಜ್ ಮೃತ ದೇಹವನ್ನು ಹಿಡಿದು ರೋಧಿಸುತ್ತಿರುವುದು ಕಾಣಬಹುದಾಗಿದೆ.

ಮತ್ತೊಂದು ವೀಡಿಯೋ ಕ್ಲಿಪ್ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಯ ಮೇಲೆ ಮಗುವನ್ನು ವೈದ್ಯರು ಪರೀಕ್ಷಿಸುತ್ತಿರುವುದನ್ನು ತೋರಿಸುತ್ತದೆ.

“ಜನರು ತಮ್ಮ ಫೋನ್‌ಗಳಲ್ಲಿ ನಮ್ಮನ್ನು ಚಿತ್ರೀಕರಿಸಲು ಪ್ರಾರಂಭಿಸಿದ ನಂತರವೇ ಆ ಪರೀಕ್ಷೆ ಮಾಡಿದ್ದಾರೆ. ಅದಕ್ಕೂ ಮೊದಲು ಯಾವುದೇ ವೈದ್ಯರು ನನ್ನ ಮಗುವನ್ನು ಮುಟ್ಟಲು ಸಿದ್ಧರಿರಲಿಲ್ಲ. ನಾವು 30 ನಿಮಿಷಗಳ ಕಾಲ ಅಲ್ಲಿದ್ದೆವು. ಅವರು ‘ಕಾನ್ಪುರಕ್ಕೆ ಕರೆದೊಯ್ಯಿರಿ’ ಎಂದು ಹೇಳುತ್ತಲೇ ಇದ್ದರು. ನಾನು ಒಬ್ಬ ಬಡ ವ್ಯಕ್ತಿ ನನ್ನ ಬಳಿ ಹಣವಿಲ್ಲ. ನಾನು ಏನು ಮಾಡಬಹುದಿತ್ತು” ಎಂದು ಪ್ರೇಮ್ ಚಂದ್ ಹೇಳಿದ್ದಾರೆ.

“ಅವನ ಕುತ್ತಿಗೆ ಊದಿಕೊಂಡಿತ್ತು, ಅವರು ನಮ್ಮನ್ನು 30-40 ನಿಮಿಷಗಳ ಕಾಲ ಕಾಯಿಸಿದ್ದರು. ನಂತರ ದಾಖಲಿಸಲಾಯಿತಾದರೂ ಆ ಹೊತ್ತಲ್ಲಿ ಮಗು ಸತ್ತು ಹೋಗಿತ್ತು” ಎಂದು ಮಗುವಿನ ತಾಯಿ ಆಶಾ ದೇವಿ ಹೇಳಿದ್ದಾರೆ.

ಜಿಲ್ಲೆಯ ವೈದ್ಯರು ಮತ್ತು ಅಧಿಕಾರಿಗಳು ಆರೋಪವನ್ನು ನಿರಾಕರಿಸಿ ಯಾವುದೇ ನಿರ್ಲಕ್ಷ್ಯ ನಡೆದಿಲ್ಲ ಎಂದಿದ್ದಾರೆ.

“ನಿನ್ನೆ ಸಂಜೆ 4.15 ಕ್ಕೆ ಬಾಲಕನನ್ನು ಆಸ್ಪತ್ರೆಗೆ ಕರೆತರಲಾಯಿತು. ಮಗುವನ್ನು ತುರ್ತು ವಾರ್ಡ್‌ಗೆ ದಾಖಲಿಸಲಾಗಿದೆ. ಪ್ರಕರಣವು ತುಂಬಾ ಗಂಭೀರವಾಗಿತ್ತು, ಅದಕ್ಕೆ ಮಕ್ಕಳ ತಜ್ಞರನ್ನು ತುರ್ತು ವಾರ್ಡ್‌ಗೆ ಕರೆಸಲಾಯಿತು ಆದರೆ 30 ನಿಮಿಷಗಳ ಅಂತರದಲ್ಲಿ ಮಗು ಸಾವನ್ನಪ್ಪಿತು. ವೈದ್ಯರು ಅವರು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದರು ಆದರೆ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ. ಮೇಲ್ನೋಟಕ್ಕೆ ಯಾವುದೇ ನಿರ್ಲಕ್ಷ್ಯ ಕಂಡುಬಂದಿಲ್ಲ ಎಂದು ತೋರುತ್ತದೆ ” ಎಂದು ಕನೌಜ್‌ನ ಸರ್ಕಾರಿ ಉನ್ನತ ಅಧಿಕಾರಿ ರಾಜೇಶ್ ಕುಮಾರ್ ಮಿಶ್ರಾ ಮಾಧ್ಯಮಕ್ಕೆ ತಿಳಿಸಿದ್ದಾರೆ.


ಓದಿ: ಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...