Homeಮುಖಪುಟಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ

ಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ

- Advertisement -
- Advertisement -

ಆಸ್ಪತ್ರೆಯ ಕಟ್ಟಡದೊಳಗೆ ಯುವ ದಂಪತಿಗಳಿಬ್ಬರು ತಮ್ಮ ಒಂದು ವರ್ಷದ ಗಂಡು ಮಗುವನ್ನು ಅಪ್ಪಿ ಹಿಡಿದುಕೊಂಡು ಅಳುತ್ತಿರುವ ಹೃದಯ ವಿದ್ರಾವಕಾರಿ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅದು ಉತ್ತರ ಪ್ರದೇಶದ ಕನೌಜ್ ಪಟ್ಟಣದ್ದೆಂದು ವರದಿಯಾಗಿದೆ.

ತಮ್ಮ ಒಂದು ವರ್ಷದ ಮಗುವಿಗೆ ಜ್ವರ ಹಾಗೂ ಕತ್ತಿನ ಭಾಗ ಊದಿ ಕೊಂಡಿದ್ದರಿಂದ ಆಸ್ಪತ್ರೆಗೆ ಧಾವಿಸಿದ್ದರು. ಆದರೆ ಆಸ್ಪತ್ರೆಯ ವೈದ್ಯರು ಮಗುವನ್ನು ಮುಟ್ಟಲು ನಿರಾಕರಿಸಿ, ಮಗುವನ್ನು ಆಸ್ಪತ್ರೆಯಿಂದ 90 ಕಿ.ಮಿ. ದೂರದ ಕಾನ್ಪುರಕ್ಕೆ ಕರೆದೊಯ್ಯಲು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆಸ್ಪತ್ರೆಯ ವೈದ್ಯರು ಮತ್ತು ಕನೌಜ್‌ ಜಿಲ್ಲಾಡಳಿತ ಇದನ್ನು ನಿರಾಕರಿಸಿದೆ.

ನಿನ್ನೆ ಸಂಜೆ 4.45 ರ ಸುಮಾರಿಗೆ ಚಿತ್ರೀಕರಿಸಿದ ವೀಡಿಯೊವೊಂದರಲ್ಲಿ ದಂಪತಿಗಳಾದ ಪ್ರೇಮ್‌‌ ಚಂದ್ ಮತ್ತು ಆಶಾ ದೇವಿ ತಮ್ಮ ಮಗು ಅನುಜ್ ಮೃತ ದೇಹವನ್ನು ಹಿಡಿದು ರೋಧಿಸುತ್ತಿರುವುದು ಕಾಣಬಹುದಾಗಿದೆ.

ಮತ್ತೊಂದು ವೀಡಿಯೋ ಕ್ಲಿಪ್ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಯ ಮೇಲೆ ಮಗುವನ್ನು ವೈದ್ಯರು ಪರೀಕ್ಷಿಸುತ್ತಿರುವುದನ್ನು ತೋರಿಸುತ್ತದೆ.

“ಜನರು ತಮ್ಮ ಫೋನ್‌ಗಳಲ್ಲಿ ನಮ್ಮನ್ನು ಚಿತ್ರೀಕರಿಸಲು ಪ್ರಾರಂಭಿಸಿದ ನಂತರವೇ ಆ ಪರೀಕ್ಷೆ ಮಾಡಿದ್ದಾರೆ. ಅದಕ್ಕೂ ಮೊದಲು ಯಾವುದೇ ವೈದ್ಯರು ನನ್ನ ಮಗುವನ್ನು ಮುಟ್ಟಲು ಸಿದ್ಧರಿರಲಿಲ್ಲ. ನಾವು 30 ನಿಮಿಷಗಳ ಕಾಲ ಅಲ್ಲಿದ್ದೆವು. ಅವರು ‘ಕಾನ್ಪುರಕ್ಕೆ ಕರೆದೊಯ್ಯಿರಿ’ ಎಂದು ಹೇಳುತ್ತಲೇ ಇದ್ದರು. ನಾನು ಒಬ್ಬ ಬಡ ವ್ಯಕ್ತಿ ನನ್ನ ಬಳಿ ಹಣವಿಲ್ಲ. ನಾನು ಏನು ಮಾಡಬಹುದಿತ್ತು” ಎಂದು ಪ್ರೇಮ್ ಚಂದ್ ಹೇಳಿದ್ದಾರೆ.

“ಅವನ ಕುತ್ತಿಗೆ ಊದಿಕೊಂಡಿತ್ತು, ಅವರು ನಮ್ಮನ್ನು 30-40 ನಿಮಿಷಗಳ ಕಾಲ ಕಾಯಿಸಿದ್ದರು. ನಂತರ ದಾಖಲಿಸಲಾಯಿತಾದರೂ ಆ ಹೊತ್ತಲ್ಲಿ ಮಗು ಸತ್ತು ಹೋಗಿತ್ತು” ಎಂದು ಮಗುವಿನ ತಾಯಿ ಆಶಾ ದೇವಿ ಹೇಳಿದ್ದಾರೆ.

ಜಿಲ್ಲೆಯ ವೈದ್ಯರು ಮತ್ತು ಅಧಿಕಾರಿಗಳು ಆರೋಪವನ್ನು ನಿರಾಕರಿಸಿ ಯಾವುದೇ ನಿರ್ಲಕ್ಷ್ಯ ನಡೆದಿಲ್ಲ ಎಂದಿದ್ದಾರೆ.

“ನಿನ್ನೆ ಸಂಜೆ 4.15 ಕ್ಕೆ ಬಾಲಕನನ್ನು ಆಸ್ಪತ್ರೆಗೆ ಕರೆತರಲಾಯಿತು. ಮಗುವನ್ನು ತುರ್ತು ವಾರ್ಡ್‌ಗೆ ದಾಖಲಿಸಲಾಗಿದೆ. ಪ್ರಕರಣವು ತುಂಬಾ ಗಂಭೀರವಾಗಿತ್ತು, ಅದಕ್ಕೆ ಮಕ್ಕಳ ತಜ್ಞರನ್ನು ತುರ್ತು ವಾರ್ಡ್‌ಗೆ ಕರೆಸಲಾಯಿತು ಆದರೆ 30 ನಿಮಿಷಗಳ ಅಂತರದಲ್ಲಿ ಮಗು ಸಾವನ್ನಪ್ಪಿತು. ವೈದ್ಯರು ಅವರು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದರು ಆದರೆ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ. ಮೇಲ್ನೋಟಕ್ಕೆ ಯಾವುದೇ ನಿರ್ಲಕ್ಷ್ಯ ಕಂಡುಬಂದಿಲ್ಲ ಎಂದು ತೋರುತ್ತದೆ ” ಎಂದು ಕನೌಜ್‌ನ ಸರ್ಕಾರಿ ಉನ್ನತ ಅಧಿಕಾರಿ ರಾಜೇಶ್ ಕುಮಾರ್ ಮಿಶ್ರಾ ಮಾಧ್ಯಮಕ್ಕೆ ತಿಳಿಸಿದ್ದಾರೆ.


ಓದಿ: ಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...