Homeಮುಖಪುಟಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ

ಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ

- Advertisement -
- Advertisement -

ಆಸ್ಪತ್ರೆಯ ಕಟ್ಟಡದೊಳಗೆ ಯುವ ದಂಪತಿಗಳಿಬ್ಬರು ತಮ್ಮ ಒಂದು ವರ್ಷದ ಗಂಡು ಮಗುವನ್ನು ಅಪ್ಪಿ ಹಿಡಿದುಕೊಂಡು ಅಳುತ್ತಿರುವ ಹೃದಯ ವಿದ್ರಾವಕಾರಿ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅದು ಉತ್ತರ ಪ್ರದೇಶದ ಕನೌಜ್ ಪಟ್ಟಣದ್ದೆಂದು ವರದಿಯಾಗಿದೆ.

ತಮ್ಮ ಒಂದು ವರ್ಷದ ಮಗುವಿಗೆ ಜ್ವರ ಹಾಗೂ ಕತ್ತಿನ ಭಾಗ ಊದಿ ಕೊಂಡಿದ್ದರಿಂದ ಆಸ್ಪತ್ರೆಗೆ ಧಾವಿಸಿದ್ದರು. ಆದರೆ ಆಸ್ಪತ್ರೆಯ ವೈದ್ಯರು ಮಗುವನ್ನು ಮುಟ್ಟಲು ನಿರಾಕರಿಸಿ, ಮಗುವನ್ನು ಆಸ್ಪತ್ರೆಯಿಂದ 90 ಕಿ.ಮಿ. ದೂರದ ಕಾನ್ಪುರಕ್ಕೆ ಕರೆದೊಯ್ಯಲು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆಸ್ಪತ್ರೆಯ ವೈದ್ಯರು ಮತ್ತು ಕನೌಜ್‌ ಜಿಲ್ಲಾಡಳಿತ ಇದನ್ನು ನಿರಾಕರಿಸಿದೆ.

ನಿನ್ನೆ ಸಂಜೆ 4.45 ರ ಸುಮಾರಿಗೆ ಚಿತ್ರೀಕರಿಸಿದ ವೀಡಿಯೊವೊಂದರಲ್ಲಿ ದಂಪತಿಗಳಾದ ಪ್ರೇಮ್‌‌ ಚಂದ್ ಮತ್ತು ಆಶಾ ದೇವಿ ತಮ್ಮ ಮಗು ಅನುಜ್ ಮೃತ ದೇಹವನ್ನು ಹಿಡಿದು ರೋಧಿಸುತ್ತಿರುವುದು ಕಾಣಬಹುದಾಗಿದೆ.

ಮತ್ತೊಂದು ವೀಡಿಯೋ ಕ್ಲಿಪ್ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಯ ಮೇಲೆ ಮಗುವನ್ನು ವೈದ್ಯರು ಪರೀಕ್ಷಿಸುತ್ತಿರುವುದನ್ನು ತೋರಿಸುತ್ತದೆ.

“ಜನರು ತಮ್ಮ ಫೋನ್‌ಗಳಲ್ಲಿ ನಮ್ಮನ್ನು ಚಿತ್ರೀಕರಿಸಲು ಪ್ರಾರಂಭಿಸಿದ ನಂತರವೇ ಆ ಪರೀಕ್ಷೆ ಮಾಡಿದ್ದಾರೆ. ಅದಕ್ಕೂ ಮೊದಲು ಯಾವುದೇ ವೈದ್ಯರು ನನ್ನ ಮಗುವನ್ನು ಮುಟ್ಟಲು ಸಿದ್ಧರಿರಲಿಲ್ಲ. ನಾವು 30 ನಿಮಿಷಗಳ ಕಾಲ ಅಲ್ಲಿದ್ದೆವು. ಅವರು ‘ಕಾನ್ಪುರಕ್ಕೆ ಕರೆದೊಯ್ಯಿರಿ’ ಎಂದು ಹೇಳುತ್ತಲೇ ಇದ್ದರು. ನಾನು ಒಬ್ಬ ಬಡ ವ್ಯಕ್ತಿ ನನ್ನ ಬಳಿ ಹಣವಿಲ್ಲ. ನಾನು ಏನು ಮಾಡಬಹುದಿತ್ತು” ಎಂದು ಪ್ರೇಮ್ ಚಂದ್ ಹೇಳಿದ್ದಾರೆ.

“ಅವನ ಕುತ್ತಿಗೆ ಊದಿಕೊಂಡಿತ್ತು, ಅವರು ನಮ್ಮನ್ನು 30-40 ನಿಮಿಷಗಳ ಕಾಲ ಕಾಯಿಸಿದ್ದರು. ನಂತರ ದಾಖಲಿಸಲಾಯಿತಾದರೂ ಆ ಹೊತ್ತಲ್ಲಿ ಮಗು ಸತ್ತು ಹೋಗಿತ್ತು” ಎಂದು ಮಗುವಿನ ತಾಯಿ ಆಶಾ ದೇವಿ ಹೇಳಿದ್ದಾರೆ.

ಜಿಲ್ಲೆಯ ವೈದ್ಯರು ಮತ್ತು ಅಧಿಕಾರಿಗಳು ಆರೋಪವನ್ನು ನಿರಾಕರಿಸಿ ಯಾವುದೇ ನಿರ್ಲಕ್ಷ್ಯ ನಡೆದಿಲ್ಲ ಎಂದಿದ್ದಾರೆ.

“ನಿನ್ನೆ ಸಂಜೆ 4.15 ಕ್ಕೆ ಬಾಲಕನನ್ನು ಆಸ್ಪತ್ರೆಗೆ ಕರೆತರಲಾಯಿತು. ಮಗುವನ್ನು ತುರ್ತು ವಾರ್ಡ್‌ಗೆ ದಾಖಲಿಸಲಾಗಿದೆ. ಪ್ರಕರಣವು ತುಂಬಾ ಗಂಭೀರವಾಗಿತ್ತು, ಅದಕ್ಕೆ ಮಕ್ಕಳ ತಜ್ಞರನ್ನು ತುರ್ತು ವಾರ್ಡ್‌ಗೆ ಕರೆಸಲಾಯಿತು ಆದರೆ 30 ನಿಮಿಷಗಳ ಅಂತರದಲ್ಲಿ ಮಗು ಸಾವನ್ನಪ್ಪಿತು. ವೈದ್ಯರು ಅವರು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದರು ಆದರೆ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ. ಮೇಲ್ನೋಟಕ್ಕೆ ಯಾವುದೇ ನಿರ್ಲಕ್ಷ್ಯ ಕಂಡುಬಂದಿಲ್ಲ ಎಂದು ತೋರುತ್ತದೆ ” ಎಂದು ಕನೌಜ್‌ನ ಸರ್ಕಾರಿ ಉನ್ನತ ಅಧಿಕಾರಿ ರಾಜೇಶ್ ಕುಮಾರ್ ಮಿಶ್ರಾ ಮಾಧ್ಯಮಕ್ಕೆ ತಿಳಿಸಿದ್ದಾರೆ.


ಓದಿ: ಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....