Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ 35 ಪೊಲೀಸರ ವಿರುದ್ಧ ಸಿಬಿಐ...

ಉತ್ತರ ಪ್ರದೇಶ: ದಲಿತ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ 35 ಪೊಲೀಸರ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

- Advertisement -
- Advertisement -

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ದಲಿತ ಕುಟುಂಬದ ಸದಸ್ಯರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ ಆರೋಪದ ಮೇಲೆ 35 ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ. ಬೇರೆ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರಲು ಬೇಕಾಗಿ ಪೊಲೀಸರು ಈ ಕೃತ್ಯ ನಡೆಸಿದ್ದರು ಎಂದು ದಲಿತ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಸುಮಿತ್ ಕುಮಾರ್ ಮತ್ತು ಅವರ ಸಹೋದರ ಪುನೀತ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. “ಮಥುರಾದ ಕೆಲವು ಪೊಲೀಸ್ ಅಧಿಕಾರಿಗಳು ಇತರ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರಲು ಬೇಕಾಗಿ, ನಮ್ಮ ವಿರುದ್ಧ ದೊಡ್ಡ ಸಂಖ್ಯೆಯ ಮೋಸದ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ” ಎಂದು ಸಹೋದರರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೆಪ್ಟೆಂಬರ್ 6 ರ ಆದೇಶದಲ್ಲಿ ಅಲಹಾಬಾದ್ ಹೈಕೋರ್ಟ್‌‌ ನ್ಯಾಯಮೂರ್ತಿ ಸುನೀತ್ ಕುಮಾರ್ ಮತ್ತು ನ್ಯಾಯಮೂರ್ತಿ ಸೈಯದ್ ವೈಜ್ ಮಿಯಾನ್ ಅವರು, “…ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಎಸ್‌ಸಿ ಆಯೋಗದ ನೋಟಿಸ್‌ನಲ್ಲಿ ಅರ್ಜಿದಾರರ ಕುಟುಂಬದ ವಿರುದ್ಧ ಮಥುರಾ ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳು ಸುಳ್ಳು ಪ್ರಕರಣಗಳನ್ನು ದಾಖಲಿಸುವ ಹಂತವನ್ನು ನಿರ್ವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಈ ವರ್ಷ ಮಾರ್ಚ್ 24 ರಂದು ಅಪಹರಣಕ್ಕೆ ಸಂಬಂಧಿಸಿದಂತೆ ದಾಖಲಿಸಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ  ಮತ್ತು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ದಲಿತ ಕುಟುಂಬವು ಅಲಹಬಾದ್ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಕೋರಿದ್ದರು.

“ಪ್ರೇಮ್ ಸಿಂಗ್ ಎಂಬಾತ ಪುನೀತ್ ಕುಮಾರ್ ಅವರನ್ನು ಅಕ್ಟೋಬರ್ 4, 2013 ರಂದು ಕೊಲ್ಲಲು ಪ್ರಯತ್ನಿಸಿದ್ದನು. ಹೀಗಾಗಿ ಪುನೀತ್ ಅವರ ತಾಯಿ ಮಾಯಾ ದೇವಿ ಅವರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಬೇಕಿತ್ತು. ಆದರೆ ಪೊಲೀಸರು ಅದರ ಬದಲು ಪುನೀತ್ ಸಹೋದರ ಸುಮಿತ್ ವಿರುದ್ಧ ಸಿಆರ್‌ಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ” ಎಂದು ದಲಿತ ಕುಟುಂಬವೂ ಅರ್ಜಿಯಲ್ಲಿ ಆರೋಪಿಸಿದೆ.

ಪೊಲೀಸರು ತಮ್ಮ ಮಗನ ಮೇಲೆಯೆ ಪ್ರಕರಣ ದಾಖಲಿಸಿದ ನಂತರ ಮಾಯಾ ದೇವಿ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದರ ನಂತರ ನ್ಯಾಯಾಲಯವು ಅವರ ದೂರಿನ ಆಧಾರದ ಮೇಲೆ ಅಕ್ಟೋಬರ್ 4, 2013 ರ ಘಟನೆಯಲ್ಲಿ ಕೊಲೆಯ ಪ್ರಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿಗಾಗಿ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ನ್ಯಾಯಾಲಯದ ಆದೇಶದ ಮೇರೆಗೆ ಮಥುರಾದ ಹೈವೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ಸಹಕಾರದಿಂದ ಪೊಲೀಸ್ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಮಾಯಾದೇವಿಯ ಘನತೆಗೆ ದಕ್ಕೆ ತಂದು, ಅವರ ಮೇಲೆ ಹಲ್ಲೆ ನಡೆಸಿ ಮಾಯಾದೇವಿ ಮತ್ತು ತಮ್ಮ ವಿರುದ್ಧ ಅದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅರ್ಜಿದಾರರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...