Homeಮುಖಪುಟಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

ಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

- Advertisement -
- Advertisement -

ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಮುಸ್ಲಿಂ ವೈದ್ಯೆಗೆ ಮನೆ ಮಾರಾಟ ಮಾಡಿದ್ದಕ್ಕೆ, ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮೊರಾದಾಬಾದ್‌ನ ಟಿಡಿಐ ಹೌಸಿಂಗ್ ಸೊಸೈಟಿಯಲ್ಲಿ ಸುಮಾರು 450 ಹಿಂದೂ ಕುಟುಂಬಗಳು ವಾಸಿಸುತ್ತಿವೆ. ಅಲ್ಲಿ ಯಾವುದೇ ಮುಸ್ಲಿಂ ಮನೆಗಳಿಲ್ಲ. ಇಲ್ಲಿನ ನಿವಾಸಿಯಾಗಿರುವ ಡಾ. ಅಶೋಕ್ ಬಜಾಜ್ ಎಂಬವರು ತನ್ನ ಸಹೋದ್ಯೋಗಿ ಡಾ. ಇಕ್ರಾ ಚೌಧರಿ ಎಂಬವರಿಗೆ ಮನೆ ಮಾರಾಟ ಮಾಡಿದ್ದಾರೆ. ಇದಕ್ಕೆ ಹಿಂದೂ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿ ಮಂಗಳವಾರ (ಡಿ.3) ತಡರಾತ್ರಿ ಪ್ರತಿಭಟಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಮುಸ್ಲಿಂ ವೈದ್ಯೆಗೆ ಮನೆ ಮಾರಾಟ ಮಾಡಿರುವುದು ಹೌಸಿಂಗ್ ಸೊಸೈಟಿಯ ಜನಸಂಖ್ಯಾ ಬದಲಾವಣೆಗಳಿಗೆ ಕಾರಣವಾಗಬಹುದು ಮತ್ತು ಹಿಂದೂ ಕುಟುಂಬಗಳು ಈ ಪ್ರವೃತ್ತಿಯನ್ನು ಮುಂದುವರಿಸಬಹುದು ಎಂಬ ಭಯವಿದೆ. ಸಾಮಾಜಿಕ ಸಾಮರಸ್ಯ ಹಾಳಾಗಬಹುದು” ಎಂದು ಪ್ರತಿಭಟನಾಕಾರರು ಹೇಳಿದ್ದಾಗಿ ವರದಿ ತಿಳಿಸಿದೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ ಪಾಯಲ್ ರಸ್ತೋಗಿ ಮಾತನಾಡಿ, “ಡಾ.ಅಶೋಕ್ ಬಜಾಜ್ ನಮಗೆ ಯಾವುದೇ ಮಾಹಿತಿ ನೀಡದೆ ತನ್ನ ಮನೆಯನ್ನು ಹಿಂದೂಯೇತರರಿಗೆ ಮಾರಿದ್ದಾರೆ. ನಾವು ಇಲ್ಲಿ ಶಾಂತಿಯುತವಾಗಿ ವಾಸಿಸುತ್ತಿದ್ದೇವೆ. ಇಲ್ಲಿ ಹಿಂದೆಂದೂ ಯಾವುದೇ ಸಮಸ್ಯೆ ಇರಲಿಲ್ಲ. ಬಜಾಜ್ ಅವರು ಇಕ್ರಾ ಚೌಧರಿಗೆ ಮನೆ ನೋಂದಣಿ ಮಾಡಿ ಕೊಟ್ಟಿರುವುದನ್ನು ವಾಪಸ್ ಪಡೆಯಬೇಕು. ಈ ಬಗ್ಗೆ ನಾವು ಈಗಾಗಲೇ ಜಿಲ್ಲಾಡಳಿತ ಮತ್ತು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವಿವರಿಸಿದೆ.

ಸೊಸೈಟಿಯ ನಿವಾಸಿ ಪಲ್ಲವಿ ಮಾತನಾಡಿ “ನಮಗೆ ಯಾವುದೇ ಸಮುದಾಯದೊಂದಿಗೆ ದ್ವೇಷವಿಲ್ಲ, ವ್ಯವಸ್ಥೆಯು ಬದಲಾಗುವುದನ್ನು ನಾವು ಬಯಸುವುದಿಲ್ಲ. ಸುಮಾರು 15 ವರ್ಷಗಳಿಂದ ಇದು ಹಿಂದೂಗಳ ಪ್ರದೇಶವಾಗಿದೆ. ಇಕ್ರಾ ಚೌಧರಿಗೆ ಮಾರಿರುವ ಮನೆಯನ್ನು ಮತ್ತೆ ಹಿಂದೂ ಹೆಸರಿಗೆ ನೋಂದಣಿ ಮಾಡುವುದು ಮುಖ್ಯ ಎಂದು ನಾವು ಭಯಸುತ್ತೇವೆ. ಇಲ್ಲವಾದರೆ, ಇಲ್ಲಿಂದ ಹಿಂದೂಗಳು ಹೊರ ಹೋಗಬಹುದು. ಎಲ್ಲವೂ ಬದಲಾಗಬಹುದು” ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯರು, ಇತರ ಹಿಂದೂ ಪ್ರದೇಶಗಳಲ್ಲೂ ಮನೆಗಳು ಮುಸ್ಲಿಮರಿಗೆ ಮಾರಾಟವಾಗುವ ಆತಂಕ ವ್ಯಕ್ತಪಡಿಸಿದ್ದಾರೆ. ಒಬ್ಬರು ಮುಸ್ಲಿಮರಿಗೆ ಮನೆ ಮಾರಿದರೆ ಉಳಿದವರು ಕೂಡ ಇದನ್ನೇ ಅನುಸರಿಸಬಹುದು. ಹಾಗಾದರೆ, ಶೀಘ್ರದಲ್ಲೇ ಹಿಂದೂ ಪ್ರದೇಶಗಳ ಸ್ವರೂಪ ಬದಲಾಗಬಹುದು ಎಂದು ಹೇಳಿದ್ದಾರೆ.

ಸೊಸೈಟಿ ನಿವಾಸಿಗಳಿಂದ ದೂರು ಬಂದಿದೆ. ನಾವು ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಲು ಕೆಲಸ ಮಾಡುತ್ತಿದ್ದೇವೆ. ಸೌಹಾರ್ದತೆ ಕಾಪಾಡಿಕೊಳ್ಳಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮಾತುಕತೆ ನಡೆಸುತ್ತಿದೆ ಎಂದು ಮೊರಾದಾಬಾದ್ ಜಿಲ್ಲಾಧಿಕಾರಿ ಅನುಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಹೇಳಿದೆ.

ಇದನ್ನೂ ಓದಿ : ‘ಯುಪಿ ದರೋಡೆಕೋರರ ಕಾಯಿದೆ’ ಕ್ರೂರವಾಗಿರುವಂತೆ ತೋರುತ್ತಿದೆ – ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...