Homeಮುಖಪುಟಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

ಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

- Advertisement -
- Advertisement -

ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಮುಸ್ಲಿಂ ವೈದ್ಯೆಗೆ ಮನೆ ಮಾರಾಟ ಮಾಡಿದ್ದಕ್ಕೆ, ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮೊರಾದಾಬಾದ್‌ನ ಟಿಡಿಐ ಹೌಸಿಂಗ್ ಸೊಸೈಟಿಯಲ್ಲಿ ಸುಮಾರು 450 ಹಿಂದೂ ಕುಟುಂಬಗಳು ವಾಸಿಸುತ್ತಿವೆ. ಅಲ್ಲಿ ಯಾವುದೇ ಮುಸ್ಲಿಂ ಮನೆಗಳಿಲ್ಲ. ಇಲ್ಲಿನ ನಿವಾಸಿಯಾಗಿರುವ ಡಾ. ಅಶೋಕ್ ಬಜಾಜ್ ಎಂಬವರು ತನ್ನ ಸಹೋದ್ಯೋಗಿ ಡಾ. ಇಕ್ರಾ ಚೌಧರಿ ಎಂಬವರಿಗೆ ಮನೆ ಮಾರಾಟ ಮಾಡಿದ್ದಾರೆ. ಇದಕ್ಕೆ ಹಿಂದೂ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿ ಮಂಗಳವಾರ (ಡಿ.3) ತಡರಾತ್ರಿ ಪ್ರತಿಭಟಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಮುಸ್ಲಿಂ ವೈದ್ಯೆಗೆ ಮನೆ ಮಾರಾಟ ಮಾಡಿರುವುದು ಹೌಸಿಂಗ್ ಸೊಸೈಟಿಯ ಜನಸಂಖ್ಯಾ ಬದಲಾವಣೆಗಳಿಗೆ ಕಾರಣವಾಗಬಹುದು ಮತ್ತು ಹಿಂದೂ ಕುಟುಂಬಗಳು ಈ ಪ್ರವೃತ್ತಿಯನ್ನು ಮುಂದುವರಿಸಬಹುದು ಎಂಬ ಭಯವಿದೆ. ಸಾಮಾಜಿಕ ಸಾಮರಸ್ಯ ಹಾಳಾಗಬಹುದು” ಎಂದು ಪ್ರತಿಭಟನಾಕಾರರು ಹೇಳಿದ್ದಾಗಿ ವರದಿ ತಿಳಿಸಿದೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ ಪಾಯಲ್ ರಸ್ತೋಗಿ ಮಾತನಾಡಿ, “ಡಾ.ಅಶೋಕ್ ಬಜಾಜ್ ನಮಗೆ ಯಾವುದೇ ಮಾಹಿತಿ ನೀಡದೆ ತನ್ನ ಮನೆಯನ್ನು ಹಿಂದೂಯೇತರರಿಗೆ ಮಾರಿದ್ದಾರೆ. ನಾವು ಇಲ್ಲಿ ಶಾಂತಿಯುತವಾಗಿ ವಾಸಿಸುತ್ತಿದ್ದೇವೆ. ಇಲ್ಲಿ ಹಿಂದೆಂದೂ ಯಾವುದೇ ಸಮಸ್ಯೆ ಇರಲಿಲ್ಲ. ಬಜಾಜ್ ಅವರು ಇಕ್ರಾ ಚೌಧರಿಗೆ ಮನೆ ನೋಂದಣಿ ಮಾಡಿ ಕೊಟ್ಟಿರುವುದನ್ನು ವಾಪಸ್ ಪಡೆಯಬೇಕು. ಈ ಬಗ್ಗೆ ನಾವು ಈಗಾಗಲೇ ಜಿಲ್ಲಾಡಳಿತ ಮತ್ತು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವಿವರಿಸಿದೆ.

ಸೊಸೈಟಿಯ ನಿವಾಸಿ ಪಲ್ಲವಿ ಮಾತನಾಡಿ “ನಮಗೆ ಯಾವುದೇ ಸಮುದಾಯದೊಂದಿಗೆ ದ್ವೇಷವಿಲ್ಲ, ವ್ಯವಸ್ಥೆಯು ಬದಲಾಗುವುದನ್ನು ನಾವು ಬಯಸುವುದಿಲ್ಲ. ಸುಮಾರು 15 ವರ್ಷಗಳಿಂದ ಇದು ಹಿಂದೂಗಳ ಪ್ರದೇಶವಾಗಿದೆ. ಇಕ್ರಾ ಚೌಧರಿಗೆ ಮಾರಿರುವ ಮನೆಯನ್ನು ಮತ್ತೆ ಹಿಂದೂ ಹೆಸರಿಗೆ ನೋಂದಣಿ ಮಾಡುವುದು ಮುಖ್ಯ ಎಂದು ನಾವು ಭಯಸುತ್ತೇವೆ. ಇಲ್ಲವಾದರೆ, ಇಲ್ಲಿಂದ ಹಿಂದೂಗಳು ಹೊರ ಹೋಗಬಹುದು. ಎಲ್ಲವೂ ಬದಲಾಗಬಹುದು” ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯರು, ಇತರ ಹಿಂದೂ ಪ್ರದೇಶಗಳಲ್ಲೂ ಮನೆಗಳು ಮುಸ್ಲಿಮರಿಗೆ ಮಾರಾಟವಾಗುವ ಆತಂಕ ವ್ಯಕ್ತಪಡಿಸಿದ್ದಾರೆ. ಒಬ್ಬರು ಮುಸ್ಲಿಮರಿಗೆ ಮನೆ ಮಾರಿದರೆ ಉಳಿದವರು ಕೂಡ ಇದನ್ನೇ ಅನುಸರಿಸಬಹುದು. ಹಾಗಾದರೆ, ಶೀಘ್ರದಲ್ಲೇ ಹಿಂದೂ ಪ್ರದೇಶಗಳ ಸ್ವರೂಪ ಬದಲಾಗಬಹುದು ಎಂದು ಹೇಳಿದ್ದಾರೆ.

ಸೊಸೈಟಿ ನಿವಾಸಿಗಳಿಂದ ದೂರು ಬಂದಿದೆ. ನಾವು ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಲು ಕೆಲಸ ಮಾಡುತ್ತಿದ್ದೇವೆ. ಸೌಹಾರ್ದತೆ ಕಾಪಾಡಿಕೊಳ್ಳಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮಾತುಕತೆ ನಡೆಸುತ್ತಿದೆ ಎಂದು ಮೊರಾದಾಬಾದ್ ಜಿಲ್ಲಾಧಿಕಾರಿ ಅನುಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಹೇಳಿದೆ.

ಇದನ್ನೂ ಓದಿ : ‘ಯುಪಿ ದರೋಡೆಕೋರರ ಕಾಯಿದೆ’ ಕ್ರೂರವಾಗಿರುವಂತೆ ತೋರುತ್ತಿದೆ – ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...