Homeರಾಷ್ಟ್ರೀಯಉತ್ತರ ಪ್ರದೇಶ: ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ವಿಡಿಯೊ ಮಾಡಿದ ಪತಿ; ಮಹಿಳೆ ಸಾವು

ಉತ್ತರ ಪ್ರದೇಶ: ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ವಿಡಿಯೊ ಮಾಡಿದ ಪತಿ; ಮಹಿಳೆ ಸಾವು

- Advertisement -
- Advertisement -

ವ್ಯಕ್ತಿಯೊಬ್ಬ ತನ್ನ ಹೆಂಡತಿ ನೇಣು ಬಿಗಿದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಚಿತ್ರೀಕರಿಸಿ, ಆಕೆ ಆತ್ಮಹತ್ಯೆಯಿಂದ ಸಾವನ್ನಪ್ಪಿದ ನಂತರ ಆ ವೀಡಿಯೊವನ್ನು ಆಕೆಯ ಕುಟುಂಬಕ್ಕೆ ತೋರಿಸಿದ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಐದು ವರ್ಷಗಳ ಹಿಂದೆ ವಿವಾಹವಾಗಿದ್ದ ಶೋಬಿತಾ ಗುಪ್ತಾ ಅವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮೊದಲು ಅವರು ತಮ್ಮ ಪತಿಯೊಂದಿಗೆ ಜಗಳವಾಡಿದ್ದಾಗಿ ತಿಳಿದು ಬಂದಿದ್ದು, ಆತನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಜಯ್ ಗುಪ್ತಾ ಅವರು ರೆಕಾರ್ಡ್‌ ಮಾಡಿರುವ ಮೊಬೈಲ್ ಫೋನ್ ವೀಡಿಯೊದಲ್ಲಿ ಶೋಬಿತಾ ತನ್ನ ಕುತ್ತಿಗೆಗೆ ಸ್ಕಾರ್ಫ್ ಹಾಕಿಕೊಂಡು ಹಾಸಿಗೆಯ ಮೇಲಿರುವ ಫ್ಯಾನ್‌ಗೆ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದು ದಾಖಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ರಕ್ತಸಿಕ್ತ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಪತ್ತೆ- ಅತ್ಯಾಚಾರದ ಶಂಕೆ

ತನ್ನ ಪತ್ನಿ ನೇಣು ಹಾಕಿಕೊಳ್ಳುತ್ತಿದ್ದರೂ ಸಂಜಯ್ ಗುಪ್ತಾ ಯಾವುದೇ ಹಂತದಲ್ಲೂ ಅವರನ್ನು ತಡೆಯಲು ಪ್ರಯತ್ನಿಸುವುದಿಲ್ಲ. ಜೊತೆಗೆ ಆತ,“ಇದು ನಿನ್ನ ಮನಸ್ಥಿತಿ. ನೀನು ತುಂಬಾ ಕಳಪೆ ಮನಸ್ಥಿತಿಯನ್ನು ಹೊಂದಿದ್ದಿ” ಎಂದು ಹೇಳುವುದು ಕೇಳುತ್ತದೆ.

ಶೋಬಿತಾ ಕುಣಿಕೆಯನ್ನು ಹಿಡಿದು ಹಾಸಿಗೆಯ ಮೇಲೆ ನಿಂತು ಅವನತ್ತ ಕಣ್ಣು ಹಾಯಿಸಿದ ವೇಳೆ, ವೀಡಿಯೊ ಕೊನೆಗೊಳ್ಳುತ್ತದೆ.

ಶೋಬಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಂಗಳವಾರ ಮಧ್ಯಾಹ್ನ ತನ್ನ ಅಳಿಯನಿಂದ ಕರೆ ಬಂದಿತ್ತು ಎಂದು ಶೋಬಿತಾ ಅವರ ತಂದೆ ರಾಜ್ ಕಿಶೋರ್ ಗುಪ್ತಾ ಹೇಳುತ್ತಾರೆ. ಅವರು ಮಗಳ ಮನೆಗೆ ದಾವಿಸಿದ ವೇಳೆ ಹಾಸಿಗೆಯ ಮೇಲೆ ಮೃತ ದೇಹವಿತ್ತು ಎಂದು ಕುಟುಂಬ ಹೇಳಿದ್ದು, ಸಂಜಯ್ ಗುಪ್ತಾ ತನ್ನ ಪತ್ನಿಗೆ ಕೃತಕ ಉಸಿರಾಟ ನೀಡುತ್ತಿದ್ದನು ಎಂದು ವರದಿಯಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಡ್ರಿಪ್‌ನಲ್ಲಿ ರಕ್ತ ಕಣಗಳ ಬದಲಿಗೆ ಹಣ್ಣಿನ ಜ್ಯೂಸ್ ನೀಡಿದ ಆಸ್ಪತ್ರೆ; ರೋಗಿ ಸಾವು

ಸಂಜಯ್ ಗುಪ್ತಾ ತಾನು ತೆಗೆದ ವೀಡಿಯೊವನ್ನು ತನ್ನ ಅತ್ತೆಯವರಿಗೆ ತೋರಿಸಿ, ಆಕೆಯ ಮೊದಲ ಆತ್ಮಹತ್ಯೆ ಪ್ರಯತ್ನದ ಸಮಯಲ್ಲಿ ನಾನು ಅವಳನ್ನು ಉಳಿಸಿದೆ ಎಂದು ಹೇಳಿಕೊಂಡಿದ್ದಾನೆ. ಆತನ ವರ್ತನೆ ಅತ್ಯಂತ ಪ್ರಶ್ನಾರ್ಹವಾಗಿತ್ತು ಎಂದು ಶೋಬಿತಾ ತಂದೆ ಹೇಳಿದ್ದಾರೆ.

“ಆಸ್ಪತ್ರೆಗೆ ಕರೆದೊಯ್ಯುವ ಬದಲು ಆಕೆಯ ಎದೆಯನ್ನು ಪಂಪ್ ಮಾಡುವುದನ್ನು ನಾವು ನೋಡಿದ್ದೇವೆ. ಮಗಳು ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ಹೇಳುವ ವೀಡಿಯೊವನ್ನು ಸಂಜಯ್ ನಮಗೆ ತೋರಿಸಿದ್ದಾನೆ. ಅದರಲ್ಲಿ ಅವನು ಅವಳನ್ನು ತಡೆಯುವ ಬದಲಿಗೆ ವೀಡಿಯೊ ಮಾಡುತ್ತಿದ್ದಾನೆ. ಘಟನೆಯು 12.30 ಕ್ಕೆ ಸಂಭವಿಸಿದೆ, ಅದರ ನಂತರ ಆಕೆ ಸಾವನ್ನಪ್ಪಿದ್ದು, ಅನುಮಾನಾಸ್ಪದವಾಗಿದೆ” ಎಂದು ರಾಜ್ ಕಿಶೋರ್ ಗುಪ್ತಾ ಹೇಳಿದ್ದಾರೆ.

ಶೋಬಿತಾ ಅವರನ್ನು ಮನೆಯವರು ಆಸ್ಪತ್ರೆಗೆ ಕರೆದೊಯ್ದಿದಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಘೋಷಿಸಿದೆ. ಆ ಬಳಿಕ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದರು. ಆರೋಪಿ ತನ್ನ ಪತ್ನಿಯನ್ನು ಉಳಿಸಬಹುದಿತ್ತು, ಆದರೆ ಅವನು ಅವಳನ್ನು ತಡೆಯಲಿಲ್ಲ ಎಂಬುವುದು ಅರಗಿಸಿಕೊಳ್ಳಲು ಸಾಧ್ಯವಾಗದೆ ಆಕೆಯ ಕುಟುಂಬ ಆಘಾತದಲ್ಲಿದೆ ಎಂದು ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

“ನಮಗೆ ನ್ಯಾಯ ಬೇಕು” ಎಂದು ಅವರು ಹೇಳಿದ್ದು, “ಅವಳನ್ನು ತಡೆಯುವ ಬದಲು, ಅವನು ವೀಡಿಯೊ ತೆಗೆದುಕೊಂಡು ಅವಳೊಂದಿಗೆ ಶಾಂತವಾಗಿ ಮಾತನಾಡುತ್ತಿದ್ದನು” ಎಂದು ಸಂಬಂಧಿಕರೊಬ್ಬರು ಹೇಳಿದ್ದಾರೆ.

ಪತ್ನಿಯ ಸಾವಿನಲ್ಲಿ ಸಂಜಯ್ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. “ನಾವು ಅವನನ್ನು ವಿಚಾರಣೆಗಾಗಿ ಕರೆದೊಯ್ದಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...