Homeರಾಷ್ಟ್ರೀಯಉತ್ತರ ಪ್ರದೇಶ: ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ವಿಡಿಯೊ ಮಾಡಿದ ಪತಿ; ಮಹಿಳೆ ಸಾವು

ಉತ್ತರ ಪ್ರದೇಶ: ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ವಿಡಿಯೊ ಮಾಡಿದ ಪತಿ; ಮಹಿಳೆ ಸಾವು

- Advertisement -
- Advertisement -

ವ್ಯಕ್ತಿಯೊಬ್ಬ ತನ್ನ ಹೆಂಡತಿ ನೇಣು ಬಿಗಿದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಚಿತ್ರೀಕರಿಸಿ, ಆಕೆ ಆತ್ಮಹತ್ಯೆಯಿಂದ ಸಾವನ್ನಪ್ಪಿದ ನಂತರ ಆ ವೀಡಿಯೊವನ್ನು ಆಕೆಯ ಕುಟುಂಬಕ್ಕೆ ತೋರಿಸಿದ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಐದು ವರ್ಷಗಳ ಹಿಂದೆ ವಿವಾಹವಾಗಿದ್ದ ಶೋಬಿತಾ ಗುಪ್ತಾ ಅವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮೊದಲು ಅವರು ತಮ್ಮ ಪತಿಯೊಂದಿಗೆ ಜಗಳವಾಡಿದ್ದಾಗಿ ತಿಳಿದು ಬಂದಿದ್ದು, ಆತನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಜಯ್ ಗುಪ್ತಾ ಅವರು ರೆಕಾರ್ಡ್‌ ಮಾಡಿರುವ ಮೊಬೈಲ್ ಫೋನ್ ವೀಡಿಯೊದಲ್ಲಿ ಶೋಬಿತಾ ತನ್ನ ಕುತ್ತಿಗೆಗೆ ಸ್ಕಾರ್ಫ್ ಹಾಕಿಕೊಂಡು ಹಾಸಿಗೆಯ ಮೇಲಿರುವ ಫ್ಯಾನ್‌ಗೆ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದು ದಾಖಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ರಕ್ತಸಿಕ್ತ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಪತ್ತೆ- ಅತ್ಯಾಚಾರದ ಶಂಕೆ

ತನ್ನ ಪತ್ನಿ ನೇಣು ಹಾಕಿಕೊಳ್ಳುತ್ತಿದ್ದರೂ ಸಂಜಯ್ ಗುಪ್ತಾ ಯಾವುದೇ ಹಂತದಲ್ಲೂ ಅವರನ್ನು ತಡೆಯಲು ಪ್ರಯತ್ನಿಸುವುದಿಲ್ಲ. ಜೊತೆಗೆ ಆತ,“ಇದು ನಿನ್ನ ಮನಸ್ಥಿತಿ. ನೀನು ತುಂಬಾ ಕಳಪೆ ಮನಸ್ಥಿತಿಯನ್ನು ಹೊಂದಿದ್ದಿ” ಎಂದು ಹೇಳುವುದು ಕೇಳುತ್ತದೆ.

ಶೋಬಿತಾ ಕುಣಿಕೆಯನ್ನು ಹಿಡಿದು ಹಾಸಿಗೆಯ ಮೇಲೆ ನಿಂತು ಅವನತ್ತ ಕಣ್ಣು ಹಾಯಿಸಿದ ವೇಳೆ, ವೀಡಿಯೊ ಕೊನೆಗೊಳ್ಳುತ್ತದೆ.

ಶೋಬಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಂಗಳವಾರ ಮಧ್ಯಾಹ್ನ ತನ್ನ ಅಳಿಯನಿಂದ ಕರೆ ಬಂದಿತ್ತು ಎಂದು ಶೋಬಿತಾ ಅವರ ತಂದೆ ರಾಜ್ ಕಿಶೋರ್ ಗುಪ್ತಾ ಹೇಳುತ್ತಾರೆ. ಅವರು ಮಗಳ ಮನೆಗೆ ದಾವಿಸಿದ ವೇಳೆ ಹಾಸಿಗೆಯ ಮೇಲೆ ಮೃತ ದೇಹವಿತ್ತು ಎಂದು ಕುಟುಂಬ ಹೇಳಿದ್ದು, ಸಂಜಯ್ ಗುಪ್ತಾ ತನ್ನ ಪತ್ನಿಗೆ ಕೃತಕ ಉಸಿರಾಟ ನೀಡುತ್ತಿದ್ದನು ಎಂದು ವರದಿಯಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಡ್ರಿಪ್‌ನಲ್ಲಿ ರಕ್ತ ಕಣಗಳ ಬದಲಿಗೆ ಹಣ್ಣಿನ ಜ್ಯೂಸ್ ನೀಡಿದ ಆಸ್ಪತ್ರೆ; ರೋಗಿ ಸಾವು

ಸಂಜಯ್ ಗುಪ್ತಾ ತಾನು ತೆಗೆದ ವೀಡಿಯೊವನ್ನು ತನ್ನ ಅತ್ತೆಯವರಿಗೆ ತೋರಿಸಿ, ಆಕೆಯ ಮೊದಲ ಆತ್ಮಹತ್ಯೆ ಪ್ರಯತ್ನದ ಸಮಯಲ್ಲಿ ನಾನು ಅವಳನ್ನು ಉಳಿಸಿದೆ ಎಂದು ಹೇಳಿಕೊಂಡಿದ್ದಾನೆ. ಆತನ ವರ್ತನೆ ಅತ್ಯಂತ ಪ್ರಶ್ನಾರ್ಹವಾಗಿತ್ತು ಎಂದು ಶೋಬಿತಾ ತಂದೆ ಹೇಳಿದ್ದಾರೆ.

“ಆಸ್ಪತ್ರೆಗೆ ಕರೆದೊಯ್ಯುವ ಬದಲು ಆಕೆಯ ಎದೆಯನ್ನು ಪಂಪ್ ಮಾಡುವುದನ್ನು ನಾವು ನೋಡಿದ್ದೇವೆ. ಮಗಳು ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ಹೇಳುವ ವೀಡಿಯೊವನ್ನು ಸಂಜಯ್ ನಮಗೆ ತೋರಿಸಿದ್ದಾನೆ. ಅದರಲ್ಲಿ ಅವನು ಅವಳನ್ನು ತಡೆಯುವ ಬದಲಿಗೆ ವೀಡಿಯೊ ಮಾಡುತ್ತಿದ್ದಾನೆ. ಘಟನೆಯು 12.30 ಕ್ಕೆ ಸಂಭವಿಸಿದೆ, ಅದರ ನಂತರ ಆಕೆ ಸಾವನ್ನಪ್ಪಿದ್ದು, ಅನುಮಾನಾಸ್ಪದವಾಗಿದೆ” ಎಂದು ರಾಜ್ ಕಿಶೋರ್ ಗುಪ್ತಾ ಹೇಳಿದ್ದಾರೆ.

ಶೋಬಿತಾ ಅವರನ್ನು ಮನೆಯವರು ಆಸ್ಪತ್ರೆಗೆ ಕರೆದೊಯ್ದಿದಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಘೋಷಿಸಿದೆ. ಆ ಬಳಿಕ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದರು. ಆರೋಪಿ ತನ್ನ ಪತ್ನಿಯನ್ನು ಉಳಿಸಬಹುದಿತ್ತು, ಆದರೆ ಅವನು ಅವಳನ್ನು ತಡೆಯಲಿಲ್ಲ ಎಂಬುವುದು ಅರಗಿಸಿಕೊಳ್ಳಲು ಸಾಧ್ಯವಾಗದೆ ಆಕೆಯ ಕುಟುಂಬ ಆಘಾತದಲ್ಲಿದೆ ಎಂದು ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

“ನಮಗೆ ನ್ಯಾಯ ಬೇಕು” ಎಂದು ಅವರು ಹೇಳಿದ್ದು, “ಅವಳನ್ನು ತಡೆಯುವ ಬದಲು, ಅವನು ವೀಡಿಯೊ ತೆಗೆದುಕೊಂಡು ಅವಳೊಂದಿಗೆ ಶಾಂತವಾಗಿ ಮಾತನಾಡುತ್ತಿದ್ದನು” ಎಂದು ಸಂಬಂಧಿಕರೊಬ್ಬರು ಹೇಳಿದ್ದಾರೆ.

ಪತ್ನಿಯ ಸಾವಿನಲ್ಲಿ ಸಂಜಯ್ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. “ನಾವು ಅವನನ್ನು ವಿಚಾರಣೆಗಾಗಿ ಕರೆದೊಯ್ದಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...