Homeಮುಖಪುಟಉತ್ತರ ಪ್ರದೇಶದಲ್ಲಿ ಪತ್ರಕರ್ತನ ಗುಂಡಿಕ್ಕಿ ಕೊಲೆ: ಪೊಲೀಸರೇ ಆರೋಪಿಗಳೆಂದ ಕುಟುಂಬ!

ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಗುಂಡಿಕ್ಕಿ ಕೊಲೆ: ಪೊಲೀಸರೇ ಆರೋಪಿಗಳೆಂದ ಕುಟುಂಬ!

ಈ ಘಟನೆಯು ಪೊಲೀಸ್ ಸ್ಟೇಷನ್‌ನಿಂದ ಕೇವಲ 20 ಹೆಜ್ಜೆ ದೂರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಕುಟುಂಬವು ದೂರಿದೆ.

- Advertisement -
- Advertisement -

ಹಿಂದಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತನೊಬ್ಬನನ್ನು ಆಗಸ್ಟ್ 24 ರಂದು ಉತ್ತರಪ್ರದೇಶದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ. ಗಾಜಿಯಾಬಾದ್‌ನಲ್ಲಿ ಮತ್ತೊಬ್ಬ ಪತ್ರಕರ್ತನ ಹತ್ಯೆ ನಡೆದ ಒಂದು ತಿಂಗಳಿನಲ್ಲಿ ಈ ಘಟನೆ ನಡೆದಿದೆ.

ರತನ್ ಸಿಂಗ್ ಎಂದು ಗುರುತಿಸಲ್ಪಟ್ಟ ಪತ್ರಕರ್ತನನ್ನು ಬಲ್ಲಿಯಾ ಜಿಲ್ಲೆಯ ಫೆಫ್ನಾ ಪ್ರದೇಶದ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.

ಆತನನ್ನು ಬೆನ್ನಟ್ಟಿ ಗುಂಡು ಹಾರಿಸಿದ ಮೂವರನ್ನು ಪೊಲೀಸರು ಗುರುತಿಸಿ ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರತನ್ ಸಿಂಗ್ ಮತ್ತು ಆರೋಪಿಗಳ ನಡುವಿನ ಆಸ್ತಿ ವಿವಾದಕ್ಕೆ ಈ ಕೊಲೆ ನಡೆದಿದೆ. ಆದರೆ, ಪತ್ರಕರ್ತನ ಕುಟುಂಬ ಇದನ್ನು ನಿರಾಕರಿಸಿದ್ದು, ಪೊಲೀಸ್ ಮುಖ್ಯಸ್ಥರೆ ಪ್ರಮುಖ ಕೊಲೆ ಆರೋಪಿಗಳಾಗಿದ್ದು, ಪೊಲೀಸರು ಸುಳ್ಳು ಕಥೆ ಕಟ್ಟುತ್ತಿದ್ದಾರೆ ಎಂದು ಕುಟುಂಬ ಆರೋಪಿಸಿದೆ.

ರತನ್ ಸಿಂಗ್ ಜಿಲ್ಲೆಯ ನಗರ ಭಾಗದಲ್ಲಿ ವಾಸಿಸುತ್ತಿದ್ದು, ಅವರ ಹಳ್ಳಿಯ ಮನೆಯು ವಿವಾದದಲ್ಲಿತ್ತು. ಹಾಗಾಗಿಯೇ ಆರೋಪಿಗಳು ಆತನನ್ನು ಥಳಿಸಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೋಲೀಸರು ಶಂಕಿಸಿದ್ದಾರೆ. ಗುಂಡಿನ ದಾಳಿಗೊಳಗಾಗಿದ್ದ ರತನ್‌ ಸಿಂಗ್‌ರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.

ಆನಂತರ ಪೊಲೀಸರು ಅರವಿಂದ್ ಸಿಂಗ್, ದಿನೇಶ್ ಸಿಂಗ್ ಮತ್ತು ಸುನಿಲ್ ಸಿಂಗ್ ಎಂಬ ಮೂರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಪತ್ರಕರ್ತನ ಕುಟುಂಬವು ಹತ್ಯೆಯ ಮುಖ್ಯ ಅಪರಾಧಿ ಫೆಫ್ನಾ ಪೊಲೀಸ್ ಠಾಣೆಯ ಉಸ್ತುವಾರಿ ಪೋಲೀಸ್ ಎಂದು ಆರೋಪಿಸಿದ್ದಾರೆ. ಅವನು ತನ್ನ ವಾಹನದಲ್ಲಿ ಕೃತ್ಯ ನಡೆದ ಸ್ಥಳಕ್ಕೆ ಹೋಗಿ, ನಂತರ ಪರಾರಿಯಾಗಿದ್ದಾನೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅವರು ಆರೋಪಿಸಿದರು.

ಈ ಘಟನೆಯು ಪೊಲೀಸ್ ಸ್ಟೇಷನ್‌ನಿಂದ ಕೇವಲ 20 ಹೆಜ್ಜೆ ದೂರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಕುಟುಂಬವು ದೂರಿದೆ.

“ರತನ್ ಸಿಂಗ್, ಅವರ ಸಂಬಂಧಿಕರೊಂದಿಗೆ ಮನೆಗೆ ಸಂಬಂಧಿಸಿದಂತೆ ಹಳೆಯ ವಿವಾದ ಹೊಂದಿದ್ದರು. ಆ ಮೂವರನ್ನು ಕೂಡಲೇ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಘಟನೆಗೂ ಪತ್ರಿಕೋದ್ಯಮಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಬಲ್ಲಿಯಾ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು, ಇನ್ನೊಬ್ಬ ಪತ್ರಕರ್ತ ವಿಕ್ರಮ್ ಜೋಶಿ ತನ್ನ ಸೋದರ ಸಂಬಂಧಿಯೊಬ್ಬರ ಕಿರುಕುಳದ ಬಗ್ಗೆ ಪೊಲೀಸ್ ದೂರು ದಾಖಲಿಸಿದ ನಂತರ ಅವರ ಮಕ್ಕಳ ಮುಂದೆಯೇ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು.


ಇದನ್ನೂ ಓದಿ: ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...