Homeಮುಖಪುಟಉತ್ತರ ಪ್ರದೇಶದಲ್ಲಿ ಪತ್ರಕರ್ತನ ಗುಂಡಿಕ್ಕಿ ಕೊಲೆ: ಪೊಲೀಸರೇ ಆರೋಪಿಗಳೆಂದ ಕುಟುಂಬ!

ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಗುಂಡಿಕ್ಕಿ ಕೊಲೆ: ಪೊಲೀಸರೇ ಆರೋಪಿಗಳೆಂದ ಕುಟುಂಬ!

ಈ ಘಟನೆಯು ಪೊಲೀಸ್ ಸ್ಟೇಷನ್‌ನಿಂದ ಕೇವಲ 20 ಹೆಜ್ಜೆ ದೂರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಕುಟುಂಬವು ದೂರಿದೆ.

- Advertisement -
- Advertisement -

ಹಿಂದಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತನೊಬ್ಬನನ್ನು ಆಗಸ್ಟ್ 24 ರಂದು ಉತ್ತರಪ್ರದೇಶದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ. ಗಾಜಿಯಾಬಾದ್‌ನಲ್ಲಿ ಮತ್ತೊಬ್ಬ ಪತ್ರಕರ್ತನ ಹತ್ಯೆ ನಡೆದ ಒಂದು ತಿಂಗಳಿನಲ್ಲಿ ಈ ಘಟನೆ ನಡೆದಿದೆ.

ರತನ್ ಸಿಂಗ್ ಎಂದು ಗುರುತಿಸಲ್ಪಟ್ಟ ಪತ್ರಕರ್ತನನ್ನು ಬಲ್ಲಿಯಾ ಜಿಲ್ಲೆಯ ಫೆಫ್ನಾ ಪ್ರದೇಶದ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.

ಆತನನ್ನು ಬೆನ್ನಟ್ಟಿ ಗುಂಡು ಹಾರಿಸಿದ ಮೂವರನ್ನು ಪೊಲೀಸರು ಗುರುತಿಸಿ ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರತನ್ ಸಿಂಗ್ ಮತ್ತು ಆರೋಪಿಗಳ ನಡುವಿನ ಆಸ್ತಿ ವಿವಾದಕ್ಕೆ ಈ ಕೊಲೆ ನಡೆದಿದೆ. ಆದರೆ, ಪತ್ರಕರ್ತನ ಕುಟುಂಬ ಇದನ್ನು ನಿರಾಕರಿಸಿದ್ದು, ಪೊಲೀಸ್ ಮುಖ್ಯಸ್ಥರೆ ಪ್ರಮುಖ ಕೊಲೆ ಆರೋಪಿಗಳಾಗಿದ್ದು, ಪೊಲೀಸರು ಸುಳ್ಳು ಕಥೆ ಕಟ್ಟುತ್ತಿದ್ದಾರೆ ಎಂದು ಕುಟುಂಬ ಆರೋಪಿಸಿದೆ.

ರತನ್ ಸಿಂಗ್ ಜಿಲ್ಲೆಯ ನಗರ ಭಾಗದಲ್ಲಿ ವಾಸಿಸುತ್ತಿದ್ದು, ಅವರ ಹಳ್ಳಿಯ ಮನೆಯು ವಿವಾದದಲ್ಲಿತ್ತು. ಹಾಗಾಗಿಯೇ ಆರೋಪಿಗಳು ಆತನನ್ನು ಥಳಿಸಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೋಲೀಸರು ಶಂಕಿಸಿದ್ದಾರೆ. ಗುಂಡಿನ ದಾಳಿಗೊಳಗಾಗಿದ್ದ ರತನ್‌ ಸಿಂಗ್‌ರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.

ಆನಂತರ ಪೊಲೀಸರು ಅರವಿಂದ್ ಸಿಂಗ್, ದಿನೇಶ್ ಸಿಂಗ್ ಮತ್ತು ಸುನಿಲ್ ಸಿಂಗ್ ಎಂಬ ಮೂರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಪತ್ರಕರ್ತನ ಕುಟುಂಬವು ಹತ್ಯೆಯ ಮುಖ್ಯ ಅಪರಾಧಿ ಫೆಫ್ನಾ ಪೊಲೀಸ್ ಠಾಣೆಯ ಉಸ್ತುವಾರಿ ಪೋಲೀಸ್ ಎಂದು ಆರೋಪಿಸಿದ್ದಾರೆ. ಅವನು ತನ್ನ ವಾಹನದಲ್ಲಿ ಕೃತ್ಯ ನಡೆದ ಸ್ಥಳಕ್ಕೆ ಹೋಗಿ, ನಂತರ ಪರಾರಿಯಾಗಿದ್ದಾನೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅವರು ಆರೋಪಿಸಿದರು.

ಈ ಘಟನೆಯು ಪೊಲೀಸ್ ಸ್ಟೇಷನ್‌ನಿಂದ ಕೇವಲ 20 ಹೆಜ್ಜೆ ದೂರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಕುಟುಂಬವು ದೂರಿದೆ.

“ರತನ್ ಸಿಂಗ್, ಅವರ ಸಂಬಂಧಿಕರೊಂದಿಗೆ ಮನೆಗೆ ಸಂಬಂಧಿಸಿದಂತೆ ಹಳೆಯ ವಿವಾದ ಹೊಂದಿದ್ದರು. ಆ ಮೂವರನ್ನು ಕೂಡಲೇ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಘಟನೆಗೂ ಪತ್ರಿಕೋದ್ಯಮಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಬಲ್ಲಿಯಾ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು, ಇನ್ನೊಬ್ಬ ಪತ್ರಕರ್ತ ವಿಕ್ರಮ್ ಜೋಶಿ ತನ್ನ ಸೋದರ ಸಂಬಂಧಿಯೊಬ್ಬರ ಕಿರುಕುಳದ ಬಗ್ಗೆ ಪೊಲೀಸ್ ದೂರು ದಾಖಲಿಸಿದ ನಂತರ ಅವರ ಮಕ್ಕಳ ಮುಂದೆಯೇ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು.


ಇದನ್ನೂ ಓದಿ: ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...