Homeಮುಖಪುಟಉತ್ತರ ಪ್ರದೇಶದಲ್ಲಿ ಪತ್ರಕರ್ತನ ಗುಂಡಿಕ್ಕಿ ಕೊಲೆ: ಪೊಲೀಸರೇ ಆರೋಪಿಗಳೆಂದ ಕುಟುಂಬ!

ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಗುಂಡಿಕ್ಕಿ ಕೊಲೆ: ಪೊಲೀಸರೇ ಆರೋಪಿಗಳೆಂದ ಕುಟುಂಬ!

ಈ ಘಟನೆಯು ಪೊಲೀಸ್ ಸ್ಟೇಷನ್‌ನಿಂದ ಕೇವಲ 20 ಹೆಜ್ಜೆ ದೂರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಕುಟುಂಬವು ದೂರಿದೆ.

- Advertisement -
- Advertisement -

ಹಿಂದಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತನೊಬ್ಬನನ್ನು ಆಗಸ್ಟ್ 24 ರಂದು ಉತ್ತರಪ್ರದೇಶದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ. ಗಾಜಿಯಾಬಾದ್‌ನಲ್ಲಿ ಮತ್ತೊಬ್ಬ ಪತ್ರಕರ್ತನ ಹತ್ಯೆ ನಡೆದ ಒಂದು ತಿಂಗಳಿನಲ್ಲಿ ಈ ಘಟನೆ ನಡೆದಿದೆ.

ರತನ್ ಸಿಂಗ್ ಎಂದು ಗುರುತಿಸಲ್ಪಟ್ಟ ಪತ್ರಕರ್ತನನ್ನು ಬಲ್ಲಿಯಾ ಜಿಲ್ಲೆಯ ಫೆಫ್ನಾ ಪ್ರದೇಶದ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.

ಆತನನ್ನು ಬೆನ್ನಟ್ಟಿ ಗುಂಡು ಹಾರಿಸಿದ ಮೂವರನ್ನು ಪೊಲೀಸರು ಗುರುತಿಸಿ ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರತನ್ ಸಿಂಗ್ ಮತ್ತು ಆರೋಪಿಗಳ ನಡುವಿನ ಆಸ್ತಿ ವಿವಾದಕ್ಕೆ ಈ ಕೊಲೆ ನಡೆದಿದೆ. ಆದರೆ, ಪತ್ರಕರ್ತನ ಕುಟುಂಬ ಇದನ್ನು ನಿರಾಕರಿಸಿದ್ದು, ಪೊಲೀಸ್ ಮುಖ್ಯಸ್ಥರೆ ಪ್ರಮುಖ ಕೊಲೆ ಆರೋಪಿಗಳಾಗಿದ್ದು, ಪೊಲೀಸರು ಸುಳ್ಳು ಕಥೆ ಕಟ್ಟುತ್ತಿದ್ದಾರೆ ಎಂದು ಕುಟುಂಬ ಆರೋಪಿಸಿದೆ.

ರತನ್ ಸಿಂಗ್ ಜಿಲ್ಲೆಯ ನಗರ ಭಾಗದಲ್ಲಿ ವಾಸಿಸುತ್ತಿದ್ದು, ಅವರ ಹಳ್ಳಿಯ ಮನೆಯು ವಿವಾದದಲ್ಲಿತ್ತು. ಹಾಗಾಗಿಯೇ ಆರೋಪಿಗಳು ಆತನನ್ನು ಥಳಿಸಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೋಲೀಸರು ಶಂಕಿಸಿದ್ದಾರೆ. ಗುಂಡಿನ ದಾಳಿಗೊಳಗಾಗಿದ್ದ ರತನ್‌ ಸಿಂಗ್‌ರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.

ಆನಂತರ ಪೊಲೀಸರು ಅರವಿಂದ್ ಸಿಂಗ್, ದಿನೇಶ್ ಸಿಂಗ್ ಮತ್ತು ಸುನಿಲ್ ಸಿಂಗ್ ಎಂಬ ಮೂರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಪತ್ರಕರ್ತನ ಕುಟುಂಬವು ಹತ್ಯೆಯ ಮುಖ್ಯ ಅಪರಾಧಿ ಫೆಫ್ನಾ ಪೊಲೀಸ್ ಠಾಣೆಯ ಉಸ್ತುವಾರಿ ಪೋಲೀಸ್ ಎಂದು ಆರೋಪಿಸಿದ್ದಾರೆ. ಅವನು ತನ್ನ ವಾಹನದಲ್ಲಿ ಕೃತ್ಯ ನಡೆದ ಸ್ಥಳಕ್ಕೆ ಹೋಗಿ, ನಂತರ ಪರಾರಿಯಾಗಿದ್ದಾನೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅವರು ಆರೋಪಿಸಿದರು.

ಈ ಘಟನೆಯು ಪೊಲೀಸ್ ಸ್ಟೇಷನ್‌ನಿಂದ ಕೇವಲ 20 ಹೆಜ್ಜೆ ದೂರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಕುಟುಂಬವು ದೂರಿದೆ.

“ರತನ್ ಸಿಂಗ್, ಅವರ ಸಂಬಂಧಿಕರೊಂದಿಗೆ ಮನೆಗೆ ಸಂಬಂಧಿಸಿದಂತೆ ಹಳೆಯ ವಿವಾದ ಹೊಂದಿದ್ದರು. ಆ ಮೂವರನ್ನು ಕೂಡಲೇ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಘಟನೆಗೂ ಪತ್ರಿಕೋದ್ಯಮಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಬಲ್ಲಿಯಾ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು, ಇನ್ನೊಬ್ಬ ಪತ್ರಕರ್ತ ವಿಕ್ರಮ್ ಜೋಶಿ ತನ್ನ ಸೋದರ ಸಂಬಂಧಿಯೊಬ್ಬರ ಕಿರುಕುಳದ ಬಗ್ಗೆ ಪೊಲೀಸ್ ದೂರು ದಾಖಲಿಸಿದ ನಂತರ ಅವರ ಮಕ್ಕಳ ಮುಂದೆಯೇ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು.


ಇದನ್ನೂ ಓದಿ: ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...