Homeಮುಖಪುಟಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

- Advertisement -
- Advertisement -

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಪೊಲೀಸ್ ಠಾಣೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಮುಸ್ಲಿಂ ಯುವಕ ಸಾವನ್ನಪ್ಪಿರುವುದರ ಕುರಿತು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಂದ ವರದಿ ಕೇಳಿದೆ.

ಸರ್ಕಾರದಿಂದ ವರದಿ ಬಂದ ನಂತರ ಆಯೋಗದಿಂದ ತಂಡವೊಂದು ಸ್ಥಳಕ್ಕೆ ಭೇಟಿ ನೀಡಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಆಯೋಗದ ಮುಖ್ಯಸ್ಥ ಸರ್ದಾರ್ ಇಕ್ಬಾಲ್ ಸಿಂಗ್ ಲಾಲ್ಪುರ ಹೇಳಿದ್ದಾರೆ.

“ಘಟನೆ ಕುರಿತು ಯುಪಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಯಿಂದ ನಾವು ವರದಿ ಕೇಳಿದ್ದೇವೆ. ವರದಿ ಪಡೆದ ನಂತರ, ನಾವು ಸ್ಥಳಕ್ಕೆ ಭೇಟಿ ನೀಡುತ್ತೇವೆ. ಒಬ್ಬ ವ್ಯಕ್ತಿಯ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ” ಎಂದಿದ್ದಾರೆ ಎಂದು ಆಯೋಗದ ಮುಖ್ಯಸ್ಥರನ್ನು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ.

ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ದಲಿತ ಯುವಕನ ಅನುಮಾನಸ್ಪದ ಸಾವು: ಮರ್ಯಾದೆಗೇಡು ಹತ್ಯೆ ಆರೋಪ

ಯುವಕ ಅಲ್ತಾಫ್‌ನ ವಿರುದ್ಧ ಅಪ್ರಾಪ್ತ ಹಿಂದೂ ಬಾಲಕಿಯನ್ನು ಅಪಹರಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ತಾಫ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. 22 ವರ್ಷದ ಯುವಕ ನವೆಂಬರ್ 8 ರಂದು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಯುವಕ ಆತ್ಮಹತ್ಯೆ  ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಆದರೆ, ಪೊಲೀಸರು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಕರ್ತವ್ಯ ನಿರತ ಸಿಬ್ಬಂದಿಯೇ ಆತನನ್ನು ಕೊಂದಿದ್ದಾರೆ ಎಂದು ಮೃತನ ಕುಟುಂಬ ಆರೋಪಿಸಿದೆ.

ಪೊಲೀಸ್ ಲಾಕಪ್‌ನ ವಾಶ್‌ರೂಮ್‌ನಲ್ಲಿ ಯುವಕ ತನ್ನ ಜಾಕೆಟ್ ಹುಡ್‌ನ ದಾರವನ್ನು ಬಳಸಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಘಟನೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಲಾಕಪ್ ಡೆತ್‌ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಅಖಿಲೇಶ್ ಯಾದವ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?” ಎಂದು ಟ್ವೀಟ್‌ ಮಾಡಿದ್ದರು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘಟನೆಯನ್ನು ಖಂಡಿಸಿದ್ದು, “ಕಾಸ್‌ಗಂಜ್‌ನಲ್ಲಿ ಅಲ್ತಾಫ್, ಆಗ್ರಾದಲ್ಲಿ ಅರುಣ್ ವಾಲ್ಮೀಕಿ, ಸುಲ್ತಾನ್‌ಪುರದಲ್ಲಿ ರಾಜೇಶ್ ಕೋರಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿರುವ ಘಟನೆಗಳಿಂದ ರಕ್ಷಕರು ಭಕ್ಷಕರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಪೊಲೀಸ್ ಕಸ್ಟಡಿ ಸಾವುಗಳಲ್ಲಿ ಯುಪಿ ದೇಶದಲ್ಲಿ ಅಗ್ರಸ್ಥಾನದಲ್ಲಿದೆ. ಕಾನೂನು ಸುವ್ಯವಸ್ಥೆ ಬಿಜೆಪಿ ಆಡಳಿತದಲ್ಲಿ ಸಂಪೂರ್ಣ ಅಸ್ತವ್ಯಸ್ತವಾಗಿದೆ, ಇಲ್ಲಿ ಯಾರೂ ಸುರಕ್ಷಿತವಾಗಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದರು.


ಇದನ್ನೂ ಓದಿ: ಲಾಕಪ್ ಡೆತ್: ’ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?’- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...