Homeಮುಖಪುಟಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

- Advertisement -
- Advertisement -

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಪೊಲೀಸ್ ಠಾಣೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಮುಸ್ಲಿಂ ಯುವಕ ಸಾವನ್ನಪ್ಪಿರುವುದರ ಕುರಿತು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಂದ ವರದಿ ಕೇಳಿದೆ.

ಸರ್ಕಾರದಿಂದ ವರದಿ ಬಂದ ನಂತರ ಆಯೋಗದಿಂದ ತಂಡವೊಂದು ಸ್ಥಳಕ್ಕೆ ಭೇಟಿ ನೀಡಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಆಯೋಗದ ಮುಖ್ಯಸ್ಥ ಸರ್ದಾರ್ ಇಕ್ಬಾಲ್ ಸಿಂಗ್ ಲಾಲ್ಪುರ ಹೇಳಿದ್ದಾರೆ.

“ಘಟನೆ ಕುರಿತು ಯುಪಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಯಿಂದ ನಾವು ವರದಿ ಕೇಳಿದ್ದೇವೆ. ವರದಿ ಪಡೆದ ನಂತರ, ನಾವು ಸ್ಥಳಕ್ಕೆ ಭೇಟಿ ನೀಡುತ್ತೇವೆ. ಒಬ್ಬ ವ್ಯಕ್ತಿಯ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ” ಎಂದಿದ್ದಾರೆ ಎಂದು ಆಯೋಗದ ಮುಖ್ಯಸ್ಥರನ್ನು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ.

ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ದಲಿತ ಯುವಕನ ಅನುಮಾನಸ್ಪದ ಸಾವು: ಮರ್ಯಾದೆಗೇಡು ಹತ್ಯೆ ಆರೋಪ

ಯುವಕ ಅಲ್ತಾಫ್‌ನ ವಿರುದ್ಧ ಅಪ್ರಾಪ್ತ ಹಿಂದೂ ಬಾಲಕಿಯನ್ನು ಅಪಹರಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ತಾಫ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. 22 ವರ್ಷದ ಯುವಕ ನವೆಂಬರ್ 8 ರಂದು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಯುವಕ ಆತ್ಮಹತ್ಯೆ  ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಆದರೆ, ಪೊಲೀಸರು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಕರ್ತವ್ಯ ನಿರತ ಸಿಬ್ಬಂದಿಯೇ ಆತನನ್ನು ಕೊಂದಿದ್ದಾರೆ ಎಂದು ಮೃತನ ಕುಟುಂಬ ಆರೋಪಿಸಿದೆ.

ಪೊಲೀಸ್ ಲಾಕಪ್‌ನ ವಾಶ್‌ರೂಮ್‌ನಲ್ಲಿ ಯುವಕ ತನ್ನ ಜಾಕೆಟ್ ಹುಡ್‌ನ ದಾರವನ್ನು ಬಳಸಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಘಟನೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಲಾಕಪ್ ಡೆತ್‌ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಅಖಿಲೇಶ್ ಯಾದವ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?” ಎಂದು ಟ್ವೀಟ್‌ ಮಾಡಿದ್ದರು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘಟನೆಯನ್ನು ಖಂಡಿಸಿದ್ದು, “ಕಾಸ್‌ಗಂಜ್‌ನಲ್ಲಿ ಅಲ್ತಾಫ್, ಆಗ್ರಾದಲ್ಲಿ ಅರುಣ್ ವಾಲ್ಮೀಕಿ, ಸುಲ್ತಾನ್‌ಪುರದಲ್ಲಿ ರಾಜೇಶ್ ಕೋರಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿರುವ ಘಟನೆಗಳಿಂದ ರಕ್ಷಕರು ಭಕ್ಷಕರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಪೊಲೀಸ್ ಕಸ್ಟಡಿ ಸಾವುಗಳಲ್ಲಿ ಯುಪಿ ದೇಶದಲ್ಲಿ ಅಗ್ರಸ್ಥಾನದಲ್ಲಿದೆ. ಕಾನೂನು ಸುವ್ಯವಸ್ಥೆ ಬಿಜೆಪಿ ಆಡಳಿತದಲ್ಲಿ ಸಂಪೂರ್ಣ ಅಸ್ತವ್ಯಸ್ತವಾಗಿದೆ, ಇಲ್ಲಿ ಯಾರೂ ಸುರಕ್ಷಿತವಾಗಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದರು.


ಇದನ್ನೂ ಓದಿ: ಲಾಕಪ್ ಡೆತ್: ’ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?’- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...