Homeಮುಖಪುಟಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

ಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

- Advertisement -
- Advertisement -

ಘಾಜಿಯಾಬಾದ್: ಇಲ್ಲಿನ ನಂದಗ್ರಾಮ್‌ನಲ್ಲಿರುವ ತನ್ನ ಮನೆಯಲ್ಲಿದ್ದ ಹಾಗೂ ಭಾನುವಾರ ಬೆಳಗ್ಗೆ ಅಪಹರಣಕ್ಕೊಳಗಾದ 11 ವರ್ಷದ ಬಾಲಕಿಯು 80 ಕಿಮೀ ದೂರದ ಬುಲಂದ್‌ಶಹರ್ ಗ್ರಾಮದ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದಾಳೆ. ಕೊಲೆಯಾಗಿರುವ ಸ್ಥಿತಿಯಲ್ಲಿ ಗೋಣಿಚೀಲದೊಳಗೆ ಶವ ಸಿಕ್ಕಿದೆ.

ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಬಾಲಕಿಯ ನೆರೆಹೊರೆಯವರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಾಲಕಿಯು ತನ್ನ ಅಜ್ಜಿಯೊಂದಿಗೆ ನಂದಗ್ರಾಮ್‌ನ ನೈ ಬಸ್ತಿ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಆಕೆಯ ಪೋಷಕರು ಹರಿಯಾಣದ ಸೋನಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬಾಲಕಿಯ ಅಜ್ಜಿಯರು ರಾಸುಗಳಿಗಾಗಿ ಹುಲ್ಲು ಕೊಯ್ಯಲು ಹೊಲಕ್ಕೆ ಹೋಗಿದ್ದ ವೇಳೆ ಆರೋಪಿಗಳು ಮನೆಗೆ ನುಗ್ಗಿ ಬಾಲಕಿಯನ್ನು ಅಪರಿಸಿದ್ದಾರೆ. ಗ್ರಾಮದ ಜಾತ್ರೆಗೆ ಹೋಗೋಣವೆಂದು ಮನವೊಲಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಪದೇ ಪದೇ ಮನೆಗೆ ಬರುತ್ತಿದ್ದರಿಂದ ಬಾಲಕಿ ಕೊಂಚ ಹೆದರಿದ್ದಳು. ಕೆಲವು ಗಂಟೆಗಳ ನಂತರ, ಬಾಲಕಿಯ ಮಲತಂದೆ ಸೋನು ಸಿಂಗ್ ಅವರಿಗೆ ವಿವಿಧ ನಂಬರ್‌ಗಳಿಂದ ಮಿಸ್ಡ್ ಕಾಲ್‌ಗಳು ಬಂದಿದ್ದವು.

“ನನ್ನ ಫೋನ್ ಸೈಲೆಂಟ್ ಮೋಡ್‌ನಲ್ಲಿದ್ದ ಕಾರಣ ಕೆಲವು ಮಿಸ್‌ಕಾಲ್‌ಗಳಾಗಿದ್ದವು. ಕರೆಯೊಂದನ್ನು ಸ್ವೀಕರಿಸಿದಾಗ ನಿನ್ನ ಮಗಳನ್ನು ಅಪಹರಿಸಲಾಗಿದೆ ಎಂದು ತಿಳಿಸಲಾಯಿತು. ನಂತರದ ಕೆಲವು ಕರೆಗಳನ್ನು ಮಾಡಿ 30 ಲಕ್ಷ ರೂಪಾಯಿ ಕೊಟ್ಟರೆ ಮಾತ್ರ ಮಗಳನ್ನು ಬಿಡುವುದಾಗಿ ಹೇಳಿದರು” ಎಂದು ಮಲತಂದೆ ಸೋನು ಹೇಳಿದ್ದಾರೆ.

ಬಾಲಕಿಯ ತಾಯಿಯ ಮೊದಲ ಪತಿ ಮೋನು 2015ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ನಂತರ ಆ ತಾಯಿಯು ತನ್ನ ಸೋದರ ಮಾವ ಸೋನುವನ್ನು ಮದುವೆಯಾಗಿದ್ದರು.

ಒಂದು ವರ್ಷದ ಮಗುವಾಗಿದ್ದಾಗಿನಿಂದಲೂ ಬಾಲಕಿಯು ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಬಾಲಕಿಯ ತಾಯಿಯ ಪತಿ ಮೋನು ಅಪಘಾತಕ್ಕೀಡಾದ ಕಾರಣ ವಿಮಾ ಹಣ 26 ಲಕ್ಷ ರೂಪಾಯಿಯನ್ನು ಆ ತಾಯಿಯು ಶೀಘ್ರದಲ್ಲೇ ಪಡೆಯಲಿದ್ದಾರೆ ಎಂದು ನೆರೆಮನೆಯ ಬಬ್ಲು ಕುಮಾರ್ ಇತ್ತೀಚೆಗೆ ತಿಳಿದುಕೊಂಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಬಾಲಕಿಯನ್ನು ಅಪಹರಿಸಿ ಹಣ ದೋಚಲು ಸಂಚು ರೂಪಿಸಿದ್ದನು. ಈ ಕೃತ್ಯಕ್ಕೆ ಸಹಕರಿಸಲು ದಾದ್ರಿಯ ಅಮಿತ್, ಬುಲಂದ್‌ಶಹರ್‌ನ ಗಂಭೀರ್‌ ಎಂಬವವರ ಸಹಾಯ ಪಡೆದನು. ಪೊಲೀಸರ ಪ್ರಕಾರ ಈ ಮೂವರೂ ಕೆಲಸವಿಲ್ಲದ ನಿರುದ್ಯೋಗಿಗಳು.

ಭಾನುವಾರ ಬೆಳಿಗ್ಗೆ ಬಾಲಕಿಯೊದಿಗೆ ಈತ (ಬಬ್ಲು) ನಡೆದುಕೊಂಡು ಹೋಗುವುದನ್ನು ನೋಡಿದ್ದನ್ನು ಕೆಲವು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಆ ನಂತರ ಬಬ್ಲುವನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಅಲೋಕ್ ದುಬೆ ತಿಳಿಸಿದ್ದಾರೆ.

“ಬೆಳಿಗ್ಗೆ 10 ಗಂಟೆ ಸುಮಾರಿಗೆ, ಅಜ್ಜಿಯರು ಇಲ್ಲದಿದ್ದಾಗ ಮತ್ತು ಹುಡುಗಿ ಒಬ್ಬಳೇ ಇದ್ದಾಗ ಬಬ್ಲು ಮನೆಗೆ ನುಸುಳಿದನು. ಹಳ್ಳಿಯ ಜಾತ್ರೆಗೆ ಕರೆದುಕೊಂಡು ಹೋಗುವುದಾಗಿ ನಂಬಿಸಿದನು. ಬೈಕಿನಲ್ಲಿ ದೂರದಲ್ಲಿ ಕಾಯುತ್ತಿದ್ದ ಅಮಿತ್‌ಗೆ ಬಾಲಕಿಯನ್ನು ಒಪ್ಪಿಸಿದನು. ಹುಡುಗಿ ಅಮಿತ್‌ನನ್ನೂ ನಂಬಿದಳು. ಯಾಕೆಂದರೆ ಆತನೂ ಕೂಡ ಬಬ್ಲುನೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡುತ್ತಿದ್ದನು” ಎಂದು ದುಬೆ ಹೇಳಿದ್ದಾರೆ.

ಒಂದೂವರೆ ಗಂಟೆಯ ನಂತರ ಅಮಿತ್ ದಾದ್ರಿ ಬೈಪಾಸ್ ತಲುಪಿದಾಗ, ಗಂಭೀರ್ ಜೊತೆಗೆ ಸ್ಕೂಟರ್‌ನಲ್ಲಿ ಹೋಗುವಂತೆ ಹುಡುಗಿಗೆ ತಿಳಿಸಿದನು. “ಬಾಲಕಿಗೆ ಬಬ್ಲು ಮತ್ತು ಅಮಿತ್ ತಿಳಿದಿರುವ ಕಾರಣ, ಹೇಗಾದರೂ ಬಾಲಕಿಯನ್ನು ಕೊಲೆ ಹಾಗೂ ಸುಲಿಗೆ ಮಾಡಿ ಪರಾರಿಯಾಗಲು ನಿರ್ಧರಿಸಿದ್ದರು” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಗಂಭೀರ್ ಬಾಲಕಿಯನ್ನು ಬುಲಂದ್‌ಶಹರ್‌ನ ಸರೈ ಚಬಿಲಾ ಗ್ರಾಮದ ಕಾಡಿಗೆ ಕರೆದೊಯ್ದು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಹಾಕಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳ ನಡುವೆ ಎಸೆದಿದ್ದಾರೆ” ಎಂದು ಪೊಲೀಸರು ಕಂಡುಕೊಂಡಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

ಬಬ್ಲು, ಮನೆಗೆ ಹಿಂದಿರುಗಿದನು ಮತ್ತು ಇತರ ಗ್ರಾಮಸ್ಥರೊಂದಿಗೆ ಹುಡುಗಿಯ ಹುಡುಕಾಟದಲ್ಲಿ ತೊಡಗಿದನು. ಸೋನುಗೆ ನಿರಂತರ ಕರೆಗಳನ್ನು ಮಾಡುವಾಗ ಬಬ್ಲು ಮತ್ತು ಅಮಿತ್ ಬೇರೆ ಯಾವುದೇ ಸಿಮ್ ಕಾರ್ಡ್‌ಗಳನ್ನು ಖರೀದಿಸಿರಲಿಲ್ಲ. ಬೀದಿಯಲ್ಲಿ ನಡೆದು ಹೋಗುವ ಜನರ ಪೋನ್‌ಗಳನ್ನು ಪಡೆದುಕೊಂಡು ಕರೆಗಳನ್ನು ಮಾಡಿದ್ದರು.

ಮಂಗಳವಾರ ಸಂಜೆ, ಶವ ಪತ್ತೆಯಾದ ಕೆಲವು ಗಂಟೆಗಳ ನಂತರ, ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸರು ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಭಾನುವಾರ ಸಂಜೆಯೇ ಪೊಲೀಸರು ಬಬ್ಲುವನ್ನು ವಶಕ್ಕೆ ತೆಗೆದುಕೊಂಡರು, ಆದರೆ ವಿಚಾರಣೆ ಮಾಡಲಿಲ್ಲ. ಅವರು ಹಾಗೆ ಮಾಡಿದ್ದರೆ, ಪೊಲೀಸರಿಗೆ ನನ್ನ ಮೊಮ್ಮಗಳು ಎಲ್ಲಿದ್ದಾಳೆಂದು ತಿಳಿಯುತ್ತಿತ್ತು. ಮತ್ತು ಆಕೆಯನ್ನು ಉಳಿಸಬಹುದಿತ್ತು” ಬಾಲಕಿಯ ಅಜ್ಜಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...