Homeಮುಖಪುಟಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

ಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

- Advertisement -
- Advertisement -

ಘಾಜಿಯಾಬಾದ್: ಇಲ್ಲಿನ ನಂದಗ್ರಾಮ್‌ನಲ್ಲಿರುವ ತನ್ನ ಮನೆಯಲ್ಲಿದ್ದ ಹಾಗೂ ಭಾನುವಾರ ಬೆಳಗ್ಗೆ ಅಪಹರಣಕ್ಕೊಳಗಾದ 11 ವರ್ಷದ ಬಾಲಕಿಯು 80 ಕಿಮೀ ದೂರದ ಬುಲಂದ್‌ಶಹರ್ ಗ್ರಾಮದ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದಾಳೆ. ಕೊಲೆಯಾಗಿರುವ ಸ್ಥಿತಿಯಲ್ಲಿ ಗೋಣಿಚೀಲದೊಳಗೆ ಶವ ಸಿಕ್ಕಿದೆ.

ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಬಾಲಕಿಯ ನೆರೆಹೊರೆಯವರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಾಲಕಿಯು ತನ್ನ ಅಜ್ಜಿಯೊಂದಿಗೆ ನಂದಗ್ರಾಮ್‌ನ ನೈ ಬಸ್ತಿ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಆಕೆಯ ಪೋಷಕರು ಹರಿಯಾಣದ ಸೋನಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬಾಲಕಿಯ ಅಜ್ಜಿಯರು ರಾಸುಗಳಿಗಾಗಿ ಹುಲ್ಲು ಕೊಯ್ಯಲು ಹೊಲಕ್ಕೆ ಹೋಗಿದ್ದ ವೇಳೆ ಆರೋಪಿಗಳು ಮನೆಗೆ ನುಗ್ಗಿ ಬಾಲಕಿಯನ್ನು ಅಪರಿಸಿದ್ದಾರೆ. ಗ್ರಾಮದ ಜಾತ್ರೆಗೆ ಹೋಗೋಣವೆಂದು ಮನವೊಲಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಪದೇ ಪದೇ ಮನೆಗೆ ಬರುತ್ತಿದ್ದರಿಂದ ಬಾಲಕಿ ಕೊಂಚ ಹೆದರಿದ್ದಳು. ಕೆಲವು ಗಂಟೆಗಳ ನಂತರ, ಬಾಲಕಿಯ ಮಲತಂದೆ ಸೋನು ಸಿಂಗ್ ಅವರಿಗೆ ವಿವಿಧ ನಂಬರ್‌ಗಳಿಂದ ಮಿಸ್ಡ್ ಕಾಲ್‌ಗಳು ಬಂದಿದ್ದವು.

“ನನ್ನ ಫೋನ್ ಸೈಲೆಂಟ್ ಮೋಡ್‌ನಲ್ಲಿದ್ದ ಕಾರಣ ಕೆಲವು ಮಿಸ್‌ಕಾಲ್‌ಗಳಾಗಿದ್ದವು. ಕರೆಯೊಂದನ್ನು ಸ್ವೀಕರಿಸಿದಾಗ ನಿನ್ನ ಮಗಳನ್ನು ಅಪಹರಿಸಲಾಗಿದೆ ಎಂದು ತಿಳಿಸಲಾಯಿತು. ನಂತರದ ಕೆಲವು ಕರೆಗಳನ್ನು ಮಾಡಿ 30 ಲಕ್ಷ ರೂಪಾಯಿ ಕೊಟ್ಟರೆ ಮಾತ್ರ ಮಗಳನ್ನು ಬಿಡುವುದಾಗಿ ಹೇಳಿದರು” ಎಂದು ಮಲತಂದೆ ಸೋನು ಹೇಳಿದ್ದಾರೆ.

ಬಾಲಕಿಯ ತಾಯಿಯ ಮೊದಲ ಪತಿ ಮೋನು 2015ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ನಂತರ ಆ ತಾಯಿಯು ತನ್ನ ಸೋದರ ಮಾವ ಸೋನುವನ್ನು ಮದುವೆಯಾಗಿದ್ದರು.

ಒಂದು ವರ್ಷದ ಮಗುವಾಗಿದ್ದಾಗಿನಿಂದಲೂ ಬಾಲಕಿಯು ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಬಾಲಕಿಯ ತಾಯಿಯ ಪತಿ ಮೋನು ಅಪಘಾತಕ್ಕೀಡಾದ ಕಾರಣ ವಿಮಾ ಹಣ 26 ಲಕ್ಷ ರೂಪಾಯಿಯನ್ನು ಆ ತಾಯಿಯು ಶೀಘ್ರದಲ್ಲೇ ಪಡೆಯಲಿದ್ದಾರೆ ಎಂದು ನೆರೆಮನೆಯ ಬಬ್ಲು ಕುಮಾರ್ ಇತ್ತೀಚೆಗೆ ತಿಳಿದುಕೊಂಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಬಾಲಕಿಯನ್ನು ಅಪಹರಿಸಿ ಹಣ ದೋಚಲು ಸಂಚು ರೂಪಿಸಿದ್ದನು. ಈ ಕೃತ್ಯಕ್ಕೆ ಸಹಕರಿಸಲು ದಾದ್ರಿಯ ಅಮಿತ್, ಬುಲಂದ್‌ಶಹರ್‌ನ ಗಂಭೀರ್‌ ಎಂಬವವರ ಸಹಾಯ ಪಡೆದನು. ಪೊಲೀಸರ ಪ್ರಕಾರ ಈ ಮೂವರೂ ಕೆಲಸವಿಲ್ಲದ ನಿರುದ್ಯೋಗಿಗಳು.

ಭಾನುವಾರ ಬೆಳಿಗ್ಗೆ ಬಾಲಕಿಯೊದಿಗೆ ಈತ (ಬಬ್ಲು) ನಡೆದುಕೊಂಡು ಹೋಗುವುದನ್ನು ನೋಡಿದ್ದನ್ನು ಕೆಲವು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಆ ನಂತರ ಬಬ್ಲುವನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಅಲೋಕ್ ದುಬೆ ತಿಳಿಸಿದ್ದಾರೆ.

“ಬೆಳಿಗ್ಗೆ 10 ಗಂಟೆ ಸುಮಾರಿಗೆ, ಅಜ್ಜಿಯರು ಇಲ್ಲದಿದ್ದಾಗ ಮತ್ತು ಹುಡುಗಿ ಒಬ್ಬಳೇ ಇದ್ದಾಗ ಬಬ್ಲು ಮನೆಗೆ ನುಸುಳಿದನು. ಹಳ್ಳಿಯ ಜಾತ್ರೆಗೆ ಕರೆದುಕೊಂಡು ಹೋಗುವುದಾಗಿ ನಂಬಿಸಿದನು. ಬೈಕಿನಲ್ಲಿ ದೂರದಲ್ಲಿ ಕಾಯುತ್ತಿದ್ದ ಅಮಿತ್‌ಗೆ ಬಾಲಕಿಯನ್ನು ಒಪ್ಪಿಸಿದನು. ಹುಡುಗಿ ಅಮಿತ್‌ನನ್ನೂ ನಂಬಿದಳು. ಯಾಕೆಂದರೆ ಆತನೂ ಕೂಡ ಬಬ್ಲುನೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡುತ್ತಿದ್ದನು” ಎಂದು ದುಬೆ ಹೇಳಿದ್ದಾರೆ.

ಒಂದೂವರೆ ಗಂಟೆಯ ನಂತರ ಅಮಿತ್ ದಾದ್ರಿ ಬೈಪಾಸ್ ತಲುಪಿದಾಗ, ಗಂಭೀರ್ ಜೊತೆಗೆ ಸ್ಕೂಟರ್‌ನಲ್ಲಿ ಹೋಗುವಂತೆ ಹುಡುಗಿಗೆ ತಿಳಿಸಿದನು. “ಬಾಲಕಿಗೆ ಬಬ್ಲು ಮತ್ತು ಅಮಿತ್ ತಿಳಿದಿರುವ ಕಾರಣ, ಹೇಗಾದರೂ ಬಾಲಕಿಯನ್ನು ಕೊಲೆ ಹಾಗೂ ಸುಲಿಗೆ ಮಾಡಿ ಪರಾರಿಯಾಗಲು ನಿರ್ಧರಿಸಿದ್ದರು” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಗಂಭೀರ್ ಬಾಲಕಿಯನ್ನು ಬುಲಂದ್‌ಶಹರ್‌ನ ಸರೈ ಚಬಿಲಾ ಗ್ರಾಮದ ಕಾಡಿಗೆ ಕರೆದೊಯ್ದು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಹಾಕಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳ ನಡುವೆ ಎಸೆದಿದ್ದಾರೆ” ಎಂದು ಪೊಲೀಸರು ಕಂಡುಕೊಂಡಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

ಬಬ್ಲು, ಮನೆಗೆ ಹಿಂದಿರುಗಿದನು ಮತ್ತು ಇತರ ಗ್ರಾಮಸ್ಥರೊಂದಿಗೆ ಹುಡುಗಿಯ ಹುಡುಕಾಟದಲ್ಲಿ ತೊಡಗಿದನು. ಸೋನುಗೆ ನಿರಂತರ ಕರೆಗಳನ್ನು ಮಾಡುವಾಗ ಬಬ್ಲು ಮತ್ತು ಅಮಿತ್ ಬೇರೆ ಯಾವುದೇ ಸಿಮ್ ಕಾರ್ಡ್‌ಗಳನ್ನು ಖರೀದಿಸಿರಲಿಲ್ಲ. ಬೀದಿಯಲ್ಲಿ ನಡೆದು ಹೋಗುವ ಜನರ ಪೋನ್‌ಗಳನ್ನು ಪಡೆದುಕೊಂಡು ಕರೆಗಳನ್ನು ಮಾಡಿದ್ದರು.

ಮಂಗಳವಾರ ಸಂಜೆ, ಶವ ಪತ್ತೆಯಾದ ಕೆಲವು ಗಂಟೆಗಳ ನಂತರ, ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸರು ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಭಾನುವಾರ ಸಂಜೆಯೇ ಪೊಲೀಸರು ಬಬ್ಲುವನ್ನು ವಶಕ್ಕೆ ತೆಗೆದುಕೊಂಡರು, ಆದರೆ ವಿಚಾರಣೆ ಮಾಡಲಿಲ್ಲ. ಅವರು ಹಾಗೆ ಮಾಡಿದ್ದರೆ, ಪೊಲೀಸರಿಗೆ ನನ್ನ ಮೊಮ್ಮಗಳು ಎಲ್ಲಿದ್ದಾಳೆಂದು ತಿಳಿಯುತ್ತಿತ್ತು. ಮತ್ತು ಆಕೆಯನ್ನು ಉಳಿಸಬಹುದಿತ್ತು” ಬಾಲಕಿಯ ಅಜ್ಜಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...