Homeಮುಖಪುಟಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

ಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

- Advertisement -
- Advertisement -

ಘಾಜಿಯಾಬಾದ್: ಇಲ್ಲಿನ ನಂದಗ್ರಾಮ್‌ನಲ್ಲಿರುವ ತನ್ನ ಮನೆಯಲ್ಲಿದ್ದ ಹಾಗೂ ಭಾನುವಾರ ಬೆಳಗ್ಗೆ ಅಪಹರಣಕ್ಕೊಳಗಾದ 11 ವರ್ಷದ ಬಾಲಕಿಯು 80 ಕಿಮೀ ದೂರದ ಬುಲಂದ್‌ಶಹರ್ ಗ್ರಾಮದ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದಾಳೆ. ಕೊಲೆಯಾಗಿರುವ ಸ್ಥಿತಿಯಲ್ಲಿ ಗೋಣಿಚೀಲದೊಳಗೆ ಶವ ಸಿಕ್ಕಿದೆ.

ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಬಾಲಕಿಯ ನೆರೆಹೊರೆಯವರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಾಲಕಿಯು ತನ್ನ ಅಜ್ಜಿಯೊಂದಿಗೆ ನಂದಗ್ರಾಮ್‌ನ ನೈ ಬಸ್ತಿ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಆಕೆಯ ಪೋಷಕರು ಹರಿಯಾಣದ ಸೋನಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬಾಲಕಿಯ ಅಜ್ಜಿಯರು ರಾಸುಗಳಿಗಾಗಿ ಹುಲ್ಲು ಕೊಯ್ಯಲು ಹೊಲಕ್ಕೆ ಹೋಗಿದ್ದ ವೇಳೆ ಆರೋಪಿಗಳು ಮನೆಗೆ ನುಗ್ಗಿ ಬಾಲಕಿಯನ್ನು ಅಪರಿಸಿದ್ದಾರೆ. ಗ್ರಾಮದ ಜಾತ್ರೆಗೆ ಹೋಗೋಣವೆಂದು ಮನವೊಲಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಪದೇ ಪದೇ ಮನೆಗೆ ಬರುತ್ತಿದ್ದರಿಂದ ಬಾಲಕಿ ಕೊಂಚ ಹೆದರಿದ್ದಳು. ಕೆಲವು ಗಂಟೆಗಳ ನಂತರ, ಬಾಲಕಿಯ ಮಲತಂದೆ ಸೋನು ಸಿಂಗ್ ಅವರಿಗೆ ವಿವಿಧ ನಂಬರ್‌ಗಳಿಂದ ಮಿಸ್ಡ್ ಕಾಲ್‌ಗಳು ಬಂದಿದ್ದವು.

“ನನ್ನ ಫೋನ್ ಸೈಲೆಂಟ್ ಮೋಡ್‌ನಲ್ಲಿದ್ದ ಕಾರಣ ಕೆಲವು ಮಿಸ್‌ಕಾಲ್‌ಗಳಾಗಿದ್ದವು. ಕರೆಯೊಂದನ್ನು ಸ್ವೀಕರಿಸಿದಾಗ ನಿನ್ನ ಮಗಳನ್ನು ಅಪಹರಿಸಲಾಗಿದೆ ಎಂದು ತಿಳಿಸಲಾಯಿತು. ನಂತರದ ಕೆಲವು ಕರೆಗಳನ್ನು ಮಾಡಿ 30 ಲಕ್ಷ ರೂಪಾಯಿ ಕೊಟ್ಟರೆ ಮಾತ್ರ ಮಗಳನ್ನು ಬಿಡುವುದಾಗಿ ಹೇಳಿದರು” ಎಂದು ಮಲತಂದೆ ಸೋನು ಹೇಳಿದ್ದಾರೆ.

ಬಾಲಕಿಯ ತಾಯಿಯ ಮೊದಲ ಪತಿ ಮೋನು 2015ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ನಂತರ ಆ ತಾಯಿಯು ತನ್ನ ಸೋದರ ಮಾವ ಸೋನುವನ್ನು ಮದುವೆಯಾಗಿದ್ದರು.

ಒಂದು ವರ್ಷದ ಮಗುವಾಗಿದ್ದಾಗಿನಿಂದಲೂ ಬಾಲಕಿಯು ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಬಾಲಕಿಯ ತಾಯಿಯ ಪತಿ ಮೋನು ಅಪಘಾತಕ್ಕೀಡಾದ ಕಾರಣ ವಿಮಾ ಹಣ 26 ಲಕ್ಷ ರೂಪಾಯಿಯನ್ನು ಆ ತಾಯಿಯು ಶೀಘ್ರದಲ್ಲೇ ಪಡೆಯಲಿದ್ದಾರೆ ಎಂದು ನೆರೆಮನೆಯ ಬಬ್ಲು ಕುಮಾರ್ ಇತ್ತೀಚೆಗೆ ತಿಳಿದುಕೊಂಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಬಾಲಕಿಯನ್ನು ಅಪಹರಿಸಿ ಹಣ ದೋಚಲು ಸಂಚು ರೂಪಿಸಿದ್ದನು. ಈ ಕೃತ್ಯಕ್ಕೆ ಸಹಕರಿಸಲು ದಾದ್ರಿಯ ಅಮಿತ್, ಬುಲಂದ್‌ಶಹರ್‌ನ ಗಂಭೀರ್‌ ಎಂಬವವರ ಸಹಾಯ ಪಡೆದನು. ಪೊಲೀಸರ ಪ್ರಕಾರ ಈ ಮೂವರೂ ಕೆಲಸವಿಲ್ಲದ ನಿರುದ್ಯೋಗಿಗಳು.

ಭಾನುವಾರ ಬೆಳಿಗ್ಗೆ ಬಾಲಕಿಯೊದಿಗೆ ಈತ (ಬಬ್ಲು) ನಡೆದುಕೊಂಡು ಹೋಗುವುದನ್ನು ನೋಡಿದ್ದನ್ನು ಕೆಲವು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಆ ನಂತರ ಬಬ್ಲುವನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಅಲೋಕ್ ದುಬೆ ತಿಳಿಸಿದ್ದಾರೆ.

“ಬೆಳಿಗ್ಗೆ 10 ಗಂಟೆ ಸುಮಾರಿಗೆ, ಅಜ್ಜಿಯರು ಇಲ್ಲದಿದ್ದಾಗ ಮತ್ತು ಹುಡುಗಿ ಒಬ್ಬಳೇ ಇದ್ದಾಗ ಬಬ್ಲು ಮನೆಗೆ ನುಸುಳಿದನು. ಹಳ್ಳಿಯ ಜಾತ್ರೆಗೆ ಕರೆದುಕೊಂಡು ಹೋಗುವುದಾಗಿ ನಂಬಿಸಿದನು. ಬೈಕಿನಲ್ಲಿ ದೂರದಲ್ಲಿ ಕಾಯುತ್ತಿದ್ದ ಅಮಿತ್‌ಗೆ ಬಾಲಕಿಯನ್ನು ಒಪ್ಪಿಸಿದನು. ಹುಡುಗಿ ಅಮಿತ್‌ನನ್ನೂ ನಂಬಿದಳು. ಯಾಕೆಂದರೆ ಆತನೂ ಕೂಡ ಬಬ್ಲುನೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡುತ್ತಿದ್ದನು” ಎಂದು ದುಬೆ ಹೇಳಿದ್ದಾರೆ.

ಒಂದೂವರೆ ಗಂಟೆಯ ನಂತರ ಅಮಿತ್ ದಾದ್ರಿ ಬೈಪಾಸ್ ತಲುಪಿದಾಗ, ಗಂಭೀರ್ ಜೊತೆಗೆ ಸ್ಕೂಟರ್‌ನಲ್ಲಿ ಹೋಗುವಂತೆ ಹುಡುಗಿಗೆ ತಿಳಿಸಿದನು. “ಬಾಲಕಿಗೆ ಬಬ್ಲು ಮತ್ತು ಅಮಿತ್ ತಿಳಿದಿರುವ ಕಾರಣ, ಹೇಗಾದರೂ ಬಾಲಕಿಯನ್ನು ಕೊಲೆ ಹಾಗೂ ಸುಲಿಗೆ ಮಾಡಿ ಪರಾರಿಯಾಗಲು ನಿರ್ಧರಿಸಿದ್ದರು” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಗಂಭೀರ್ ಬಾಲಕಿಯನ್ನು ಬುಲಂದ್‌ಶಹರ್‌ನ ಸರೈ ಚಬಿಲಾ ಗ್ರಾಮದ ಕಾಡಿಗೆ ಕರೆದೊಯ್ದು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಹಾಕಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳ ನಡುವೆ ಎಸೆದಿದ್ದಾರೆ” ಎಂದು ಪೊಲೀಸರು ಕಂಡುಕೊಂಡಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

ಬಬ್ಲು, ಮನೆಗೆ ಹಿಂದಿರುಗಿದನು ಮತ್ತು ಇತರ ಗ್ರಾಮಸ್ಥರೊಂದಿಗೆ ಹುಡುಗಿಯ ಹುಡುಕಾಟದಲ್ಲಿ ತೊಡಗಿದನು. ಸೋನುಗೆ ನಿರಂತರ ಕರೆಗಳನ್ನು ಮಾಡುವಾಗ ಬಬ್ಲು ಮತ್ತು ಅಮಿತ್ ಬೇರೆ ಯಾವುದೇ ಸಿಮ್ ಕಾರ್ಡ್‌ಗಳನ್ನು ಖರೀದಿಸಿರಲಿಲ್ಲ. ಬೀದಿಯಲ್ಲಿ ನಡೆದು ಹೋಗುವ ಜನರ ಪೋನ್‌ಗಳನ್ನು ಪಡೆದುಕೊಂಡು ಕರೆಗಳನ್ನು ಮಾಡಿದ್ದರು.

ಮಂಗಳವಾರ ಸಂಜೆ, ಶವ ಪತ್ತೆಯಾದ ಕೆಲವು ಗಂಟೆಗಳ ನಂತರ, ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸರು ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಭಾನುವಾರ ಸಂಜೆಯೇ ಪೊಲೀಸರು ಬಬ್ಲುವನ್ನು ವಶಕ್ಕೆ ತೆಗೆದುಕೊಂಡರು, ಆದರೆ ವಿಚಾರಣೆ ಮಾಡಲಿಲ್ಲ. ಅವರು ಹಾಗೆ ಮಾಡಿದ್ದರೆ, ಪೊಲೀಸರಿಗೆ ನನ್ನ ಮೊಮ್ಮಗಳು ಎಲ್ಲಿದ್ದಾಳೆಂದು ತಿಳಿಯುತ್ತಿತ್ತು. ಮತ್ತು ಆಕೆಯನ್ನು ಉಳಿಸಬಹುದಿತ್ತು” ಬಾಲಕಿಯ ಅಜ್ಜಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...