Homeಮುಖಪುಟಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

ಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

- Advertisement -
- Advertisement -

ಘಾಜಿಯಾಬಾದ್: ಇಲ್ಲಿನ ನಂದಗ್ರಾಮ್‌ನಲ್ಲಿರುವ ತನ್ನ ಮನೆಯಲ್ಲಿದ್ದ ಹಾಗೂ ಭಾನುವಾರ ಬೆಳಗ್ಗೆ ಅಪಹರಣಕ್ಕೊಳಗಾದ 11 ವರ್ಷದ ಬಾಲಕಿಯು 80 ಕಿಮೀ ದೂರದ ಬುಲಂದ್‌ಶಹರ್ ಗ್ರಾಮದ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದಾಳೆ. ಕೊಲೆಯಾಗಿರುವ ಸ್ಥಿತಿಯಲ್ಲಿ ಗೋಣಿಚೀಲದೊಳಗೆ ಶವ ಸಿಕ್ಕಿದೆ.

ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಬಾಲಕಿಯ ನೆರೆಹೊರೆಯವರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಾಲಕಿಯು ತನ್ನ ಅಜ್ಜಿಯೊಂದಿಗೆ ನಂದಗ್ರಾಮ್‌ನ ನೈ ಬಸ್ತಿ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಆಕೆಯ ಪೋಷಕರು ಹರಿಯಾಣದ ಸೋನಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬಾಲಕಿಯ ಅಜ್ಜಿಯರು ರಾಸುಗಳಿಗಾಗಿ ಹುಲ್ಲು ಕೊಯ್ಯಲು ಹೊಲಕ್ಕೆ ಹೋಗಿದ್ದ ವೇಳೆ ಆರೋಪಿಗಳು ಮನೆಗೆ ನುಗ್ಗಿ ಬಾಲಕಿಯನ್ನು ಅಪರಿಸಿದ್ದಾರೆ. ಗ್ರಾಮದ ಜಾತ್ರೆಗೆ ಹೋಗೋಣವೆಂದು ಮನವೊಲಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಪದೇ ಪದೇ ಮನೆಗೆ ಬರುತ್ತಿದ್ದರಿಂದ ಬಾಲಕಿ ಕೊಂಚ ಹೆದರಿದ್ದಳು. ಕೆಲವು ಗಂಟೆಗಳ ನಂತರ, ಬಾಲಕಿಯ ಮಲತಂದೆ ಸೋನು ಸಿಂಗ್ ಅವರಿಗೆ ವಿವಿಧ ನಂಬರ್‌ಗಳಿಂದ ಮಿಸ್ಡ್ ಕಾಲ್‌ಗಳು ಬಂದಿದ್ದವು.

“ನನ್ನ ಫೋನ್ ಸೈಲೆಂಟ್ ಮೋಡ್‌ನಲ್ಲಿದ್ದ ಕಾರಣ ಕೆಲವು ಮಿಸ್‌ಕಾಲ್‌ಗಳಾಗಿದ್ದವು. ಕರೆಯೊಂದನ್ನು ಸ್ವೀಕರಿಸಿದಾಗ ನಿನ್ನ ಮಗಳನ್ನು ಅಪಹರಿಸಲಾಗಿದೆ ಎಂದು ತಿಳಿಸಲಾಯಿತು. ನಂತರದ ಕೆಲವು ಕರೆಗಳನ್ನು ಮಾಡಿ 30 ಲಕ್ಷ ರೂಪಾಯಿ ಕೊಟ್ಟರೆ ಮಾತ್ರ ಮಗಳನ್ನು ಬಿಡುವುದಾಗಿ ಹೇಳಿದರು” ಎಂದು ಮಲತಂದೆ ಸೋನು ಹೇಳಿದ್ದಾರೆ.

ಬಾಲಕಿಯ ತಾಯಿಯ ಮೊದಲ ಪತಿ ಮೋನು 2015ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ನಂತರ ಆ ತಾಯಿಯು ತನ್ನ ಸೋದರ ಮಾವ ಸೋನುವನ್ನು ಮದುವೆಯಾಗಿದ್ದರು.

ಒಂದು ವರ್ಷದ ಮಗುವಾಗಿದ್ದಾಗಿನಿಂದಲೂ ಬಾಲಕಿಯು ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಬಾಲಕಿಯ ತಾಯಿಯ ಪತಿ ಮೋನು ಅಪಘಾತಕ್ಕೀಡಾದ ಕಾರಣ ವಿಮಾ ಹಣ 26 ಲಕ್ಷ ರೂಪಾಯಿಯನ್ನು ಆ ತಾಯಿಯು ಶೀಘ್ರದಲ್ಲೇ ಪಡೆಯಲಿದ್ದಾರೆ ಎಂದು ನೆರೆಮನೆಯ ಬಬ್ಲು ಕುಮಾರ್ ಇತ್ತೀಚೆಗೆ ತಿಳಿದುಕೊಂಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಬಾಲಕಿಯನ್ನು ಅಪಹರಿಸಿ ಹಣ ದೋಚಲು ಸಂಚು ರೂಪಿಸಿದ್ದನು. ಈ ಕೃತ್ಯಕ್ಕೆ ಸಹಕರಿಸಲು ದಾದ್ರಿಯ ಅಮಿತ್, ಬುಲಂದ್‌ಶಹರ್‌ನ ಗಂಭೀರ್‌ ಎಂಬವವರ ಸಹಾಯ ಪಡೆದನು. ಪೊಲೀಸರ ಪ್ರಕಾರ ಈ ಮೂವರೂ ಕೆಲಸವಿಲ್ಲದ ನಿರುದ್ಯೋಗಿಗಳು.

ಭಾನುವಾರ ಬೆಳಿಗ್ಗೆ ಬಾಲಕಿಯೊದಿಗೆ ಈತ (ಬಬ್ಲು) ನಡೆದುಕೊಂಡು ಹೋಗುವುದನ್ನು ನೋಡಿದ್ದನ್ನು ಕೆಲವು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಆ ನಂತರ ಬಬ್ಲುವನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಅಲೋಕ್ ದುಬೆ ತಿಳಿಸಿದ್ದಾರೆ.

“ಬೆಳಿಗ್ಗೆ 10 ಗಂಟೆ ಸುಮಾರಿಗೆ, ಅಜ್ಜಿಯರು ಇಲ್ಲದಿದ್ದಾಗ ಮತ್ತು ಹುಡುಗಿ ಒಬ್ಬಳೇ ಇದ್ದಾಗ ಬಬ್ಲು ಮನೆಗೆ ನುಸುಳಿದನು. ಹಳ್ಳಿಯ ಜಾತ್ರೆಗೆ ಕರೆದುಕೊಂಡು ಹೋಗುವುದಾಗಿ ನಂಬಿಸಿದನು. ಬೈಕಿನಲ್ಲಿ ದೂರದಲ್ಲಿ ಕಾಯುತ್ತಿದ್ದ ಅಮಿತ್‌ಗೆ ಬಾಲಕಿಯನ್ನು ಒಪ್ಪಿಸಿದನು. ಹುಡುಗಿ ಅಮಿತ್‌ನನ್ನೂ ನಂಬಿದಳು. ಯಾಕೆಂದರೆ ಆತನೂ ಕೂಡ ಬಬ್ಲುನೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡುತ್ತಿದ್ದನು” ಎಂದು ದುಬೆ ಹೇಳಿದ್ದಾರೆ.

ಒಂದೂವರೆ ಗಂಟೆಯ ನಂತರ ಅಮಿತ್ ದಾದ್ರಿ ಬೈಪಾಸ್ ತಲುಪಿದಾಗ, ಗಂಭೀರ್ ಜೊತೆಗೆ ಸ್ಕೂಟರ್‌ನಲ್ಲಿ ಹೋಗುವಂತೆ ಹುಡುಗಿಗೆ ತಿಳಿಸಿದನು. “ಬಾಲಕಿಗೆ ಬಬ್ಲು ಮತ್ತು ಅಮಿತ್ ತಿಳಿದಿರುವ ಕಾರಣ, ಹೇಗಾದರೂ ಬಾಲಕಿಯನ್ನು ಕೊಲೆ ಹಾಗೂ ಸುಲಿಗೆ ಮಾಡಿ ಪರಾರಿಯಾಗಲು ನಿರ್ಧರಿಸಿದ್ದರು” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಗಂಭೀರ್ ಬಾಲಕಿಯನ್ನು ಬುಲಂದ್‌ಶಹರ್‌ನ ಸರೈ ಚಬಿಲಾ ಗ್ರಾಮದ ಕಾಡಿಗೆ ಕರೆದೊಯ್ದು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಹಾಕಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳ ನಡುವೆ ಎಸೆದಿದ್ದಾರೆ” ಎಂದು ಪೊಲೀಸರು ಕಂಡುಕೊಂಡಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

ಬಬ್ಲು, ಮನೆಗೆ ಹಿಂದಿರುಗಿದನು ಮತ್ತು ಇತರ ಗ್ರಾಮಸ್ಥರೊಂದಿಗೆ ಹುಡುಗಿಯ ಹುಡುಕಾಟದಲ್ಲಿ ತೊಡಗಿದನು. ಸೋನುಗೆ ನಿರಂತರ ಕರೆಗಳನ್ನು ಮಾಡುವಾಗ ಬಬ್ಲು ಮತ್ತು ಅಮಿತ್ ಬೇರೆ ಯಾವುದೇ ಸಿಮ್ ಕಾರ್ಡ್‌ಗಳನ್ನು ಖರೀದಿಸಿರಲಿಲ್ಲ. ಬೀದಿಯಲ್ಲಿ ನಡೆದು ಹೋಗುವ ಜನರ ಪೋನ್‌ಗಳನ್ನು ಪಡೆದುಕೊಂಡು ಕರೆಗಳನ್ನು ಮಾಡಿದ್ದರು.

ಮಂಗಳವಾರ ಸಂಜೆ, ಶವ ಪತ್ತೆಯಾದ ಕೆಲವು ಗಂಟೆಗಳ ನಂತರ, ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸರು ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಭಾನುವಾರ ಸಂಜೆಯೇ ಪೊಲೀಸರು ಬಬ್ಲುವನ್ನು ವಶಕ್ಕೆ ತೆಗೆದುಕೊಂಡರು, ಆದರೆ ವಿಚಾರಣೆ ಮಾಡಲಿಲ್ಲ. ಅವರು ಹಾಗೆ ಮಾಡಿದ್ದರೆ, ಪೊಲೀಸರಿಗೆ ನನ್ನ ಮೊಮ್ಮಗಳು ಎಲ್ಲಿದ್ದಾಳೆಂದು ತಿಳಿಯುತ್ತಿತ್ತು. ಮತ್ತು ಆಕೆಯನ್ನು ಉಳಿಸಬಹುದಿತ್ತು” ಬಾಲಕಿಯ ಅಜ್ಜಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...