Homeಮುಖಪುಟಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

ಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

- Advertisement -
- Advertisement -

ಘಾಜಿಯಾಬಾದ್: ಇಲ್ಲಿನ ನಂದಗ್ರಾಮ್‌ನಲ್ಲಿರುವ ತನ್ನ ಮನೆಯಲ್ಲಿದ್ದ ಹಾಗೂ ಭಾನುವಾರ ಬೆಳಗ್ಗೆ ಅಪಹರಣಕ್ಕೊಳಗಾದ 11 ವರ್ಷದ ಬಾಲಕಿಯು 80 ಕಿಮೀ ದೂರದ ಬುಲಂದ್‌ಶಹರ್ ಗ್ರಾಮದ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದಾಳೆ. ಕೊಲೆಯಾಗಿರುವ ಸ್ಥಿತಿಯಲ್ಲಿ ಗೋಣಿಚೀಲದೊಳಗೆ ಶವ ಸಿಕ್ಕಿದೆ.

ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಬಾಲಕಿಯ ನೆರೆಹೊರೆಯವರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಾಲಕಿಯು ತನ್ನ ಅಜ್ಜಿಯೊಂದಿಗೆ ನಂದಗ್ರಾಮ್‌ನ ನೈ ಬಸ್ತಿ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಆಕೆಯ ಪೋಷಕರು ಹರಿಯಾಣದ ಸೋನಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬಾಲಕಿಯ ಅಜ್ಜಿಯರು ರಾಸುಗಳಿಗಾಗಿ ಹುಲ್ಲು ಕೊಯ್ಯಲು ಹೊಲಕ್ಕೆ ಹೋಗಿದ್ದ ವೇಳೆ ಆರೋಪಿಗಳು ಮನೆಗೆ ನುಗ್ಗಿ ಬಾಲಕಿಯನ್ನು ಅಪರಿಸಿದ್ದಾರೆ. ಗ್ರಾಮದ ಜಾತ್ರೆಗೆ ಹೋಗೋಣವೆಂದು ಮನವೊಲಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಪದೇ ಪದೇ ಮನೆಗೆ ಬರುತ್ತಿದ್ದರಿಂದ ಬಾಲಕಿ ಕೊಂಚ ಹೆದರಿದ್ದಳು. ಕೆಲವು ಗಂಟೆಗಳ ನಂತರ, ಬಾಲಕಿಯ ಮಲತಂದೆ ಸೋನು ಸಿಂಗ್ ಅವರಿಗೆ ವಿವಿಧ ನಂಬರ್‌ಗಳಿಂದ ಮಿಸ್ಡ್ ಕಾಲ್‌ಗಳು ಬಂದಿದ್ದವು.

“ನನ್ನ ಫೋನ್ ಸೈಲೆಂಟ್ ಮೋಡ್‌ನಲ್ಲಿದ್ದ ಕಾರಣ ಕೆಲವು ಮಿಸ್‌ಕಾಲ್‌ಗಳಾಗಿದ್ದವು. ಕರೆಯೊಂದನ್ನು ಸ್ವೀಕರಿಸಿದಾಗ ನಿನ್ನ ಮಗಳನ್ನು ಅಪಹರಿಸಲಾಗಿದೆ ಎಂದು ತಿಳಿಸಲಾಯಿತು. ನಂತರದ ಕೆಲವು ಕರೆಗಳನ್ನು ಮಾಡಿ 30 ಲಕ್ಷ ರೂಪಾಯಿ ಕೊಟ್ಟರೆ ಮಾತ್ರ ಮಗಳನ್ನು ಬಿಡುವುದಾಗಿ ಹೇಳಿದರು” ಎಂದು ಮಲತಂದೆ ಸೋನು ಹೇಳಿದ್ದಾರೆ.

ಬಾಲಕಿಯ ತಾಯಿಯ ಮೊದಲ ಪತಿ ಮೋನು 2015ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ನಂತರ ಆ ತಾಯಿಯು ತನ್ನ ಸೋದರ ಮಾವ ಸೋನುವನ್ನು ಮದುವೆಯಾಗಿದ್ದರು.

ಒಂದು ವರ್ಷದ ಮಗುವಾಗಿದ್ದಾಗಿನಿಂದಲೂ ಬಾಲಕಿಯು ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಬಾಲಕಿಯ ತಾಯಿಯ ಪತಿ ಮೋನು ಅಪಘಾತಕ್ಕೀಡಾದ ಕಾರಣ ವಿಮಾ ಹಣ 26 ಲಕ್ಷ ರೂಪಾಯಿಯನ್ನು ಆ ತಾಯಿಯು ಶೀಘ್ರದಲ್ಲೇ ಪಡೆಯಲಿದ್ದಾರೆ ಎಂದು ನೆರೆಮನೆಯ ಬಬ್ಲು ಕುಮಾರ್ ಇತ್ತೀಚೆಗೆ ತಿಳಿದುಕೊಂಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಬಾಲಕಿಯನ್ನು ಅಪಹರಿಸಿ ಹಣ ದೋಚಲು ಸಂಚು ರೂಪಿಸಿದ್ದನು. ಈ ಕೃತ್ಯಕ್ಕೆ ಸಹಕರಿಸಲು ದಾದ್ರಿಯ ಅಮಿತ್, ಬುಲಂದ್‌ಶಹರ್‌ನ ಗಂಭೀರ್‌ ಎಂಬವವರ ಸಹಾಯ ಪಡೆದನು. ಪೊಲೀಸರ ಪ್ರಕಾರ ಈ ಮೂವರೂ ಕೆಲಸವಿಲ್ಲದ ನಿರುದ್ಯೋಗಿಗಳು.

ಭಾನುವಾರ ಬೆಳಿಗ್ಗೆ ಬಾಲಕಿಯೊದಿಗೆ ಈತ (ಬಬ್ಲು) ನಡೆದುಕೊಂಡು ಹೋಗುವುದನ್ನು ನೋಡಿದ್ದನ್ನು ಕೆಲವು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಆ ನಂತರ ಬಬ್ಲುವನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಅಲೋಕ್ ದುಬೆ ತಿಳಿಸಿದ್ದಾರೆ.

“ಬೆಳಿಗ್ಗೆ 10 ಗಂಟೆ ಸುಮಾರಿಗೆ, ಅಜ್ಜಿಯರು ಇಲ್ಲದಿದ್ದಾಗ ಮತ್ತು ಹುಡುಗಿ ಒಬ್ಬಳೇ ಇದ್ದಾಗ ಬಬ್ಲು ಮನೆಗೆ ನುಸುಳಿದನು. ಹಳ್ಳಿಯ ಜಾತ್ರೆಗೆ ಕರೆದುಕೊಂಡು ಹೋಗುವುದಾಗಿ ನಂಬಿಸಿದನು. ಬೈಕಿನಲ್ಲಿ ದೂರದಲ್ಲಿ ಕಾಯುತ್ತಿದ್ದ ಅಮಿತ್‌ಗೆ ಬಾಲಕಿಯನ್ನು ಒಪ್ಪಿಸಿದನು. ಹುಡುಗಿ ಅಮಿತ್‌ನನ್ನೂ ನಂಬಿದಳು. ಯಾಕೆಂದರೆ ಆತನೂ ಕೂಡ ಬಬ್ಲುನೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡುತ್ತಿದ್ದನು” ಎಂದು ದುಬೆ ಹೇಳಿದ್ದಾರೆ.

ಒಂದೂವರೆ ಗಂಟೆಯ ನಂತರ ಅಮಿತ್ ದಾದ್ರಿ ಬೈಪಾಸ್ ತಲುಪಿದಾಗ, ಗಂಭೀರ್ ಜೊತೆಗೆ ಸ್ಕೂಟರ್‌ನಲ್ಲಿ ಹೋಗುವಂತೆ ಹುಡುಗಿಗೆ ತಿಳಿಸಿದನು. “ಬಾಲಕಿಗೆ ಬಬ್ಲು ಮತ್ತು ಅಮಿತ್ ತಿಳಿದಿರುವ ಕಾರಣ, ಹೇಗಾದರೂ ಬಾಲಕಿಯನ್ನು ಕೊಲೆ ಹಾಗೂ ಸುಲಿಗೆ ಮಾಡಿ ಪರಾರಿಯಾಗಲು ನಿರ್ಧರಿಸಿದ್ದರು” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಗಂಭೀರ್ ಬಾಲಕಿಯನ್ನು ಬುಲಂದ್‌ಶಹರ್‌ನ ಸರೈ ಚಬಿಲಾ ಗ್ರಾಮದ ಕಾಡಿಗೆ ಕರೆದೊಯ್ದು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಹಾಕಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳ ನಡುವೆ ಎಸೆದಿದ್ದಾರೆ” ಎಂದು ಪೊಲೀಸರು ಕಂಡುಕೊಂಡಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

ಬಬ್ಲು, ಮನೆಗೆ ಹಿಂದಿರುಗಿದನು ಮತ್ತು ಇತರ ಗ್ರಾಮಸ್ಥರೊಂದಿಗೆ ಹುಡುಗಿಯ ಹುಡುಕಾಟದಲ್ಲಿ ತೊಡಗಿದನು. ಸೋನುಗೆ ನಿರಂತರ ಕರೆಗಳನ್ನು ಮಾಡುವಾಗ ಬಬ್ಲು ಮತ್ತು ಅಮಿತ್ ಬೇರೆ ಯಾವುದೇ ಸಿಮ್ ಕಾರ್ಡ್‌ಗಳನ್ನು ಖರೀದಿಸಿರಲಿಲ್ಲ. ಬೀದಿಯಲ್ಲಿ ನಡೆದು ಹೋಗುವ ಜನರ ಪೋನ್‌ಗಳನ್ನು ಪಡೆದುಕೊಂಡು ಕರೆಗಳನ್ನು ಮಾಡಿದ್ದರು.

ಮಂಗಳವಾರ ಸಂಜೆ, ಶವ ಪತ್ತೆಯಾದ ಕೆಲವು ಗಂಟೆಗಳ ನಂತರ, ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸರು ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಭಾನುವಾರ ಸಂಜೆಯೇ ಪೊಲೀಸರು ಬಬ್ಲುವನ್ನು ವಶಕ್ಕೆ ತೆಗೆದುಕೊಂಡರು, ಆದರೆ ವಿಚಾರಣೆ ಮಾಡಲಿಲ್ಲ. ಅವರು ಹಾಗೆ ಮಾಡಿದ್ದರೆ, ಪೊಲೀಸರಿಗೆ ನನ್ನ ಮೊಮ್ಮಗಳು ಎಲ್ಲಿದ್ದಾಳೆಂದು ತಿಳಿಯುತ್ತಿತ್ತು. ಮತ್ತು ಆಕೆಯನ್ನು ಉಳಿಸಬಹುದಿತ್ತು” ಬಾಲಕಿಯ ಅಜ್ಜಿ ಪ್ರತಿಕ್ರಿಯಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...