Homeಮುಖಪುಟಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

ಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

- Advertisement -
- Advertisement -

ಘಾಜಿಯಾಬಾದ್: ಇಲ್ಲಿನ ನಂದಗ್ರಾಮ್‌ನಲ್ಲಿರುವ ತನ್ನ ಮನೆಯಲ್ಲಿದ್ದ ಹಾಗೂ ಭಾನುವಾರ ಬೆಳಗ್ಗೆ ಅಪಹರಣಕ್ಕೊಳಗಾದ 11 ವರ್ಷದ ಬಾಲಕಿಯು 80 ಕಿಮೀ ದೂರದ ಬುಲಂದ್‌ಶಹರ್ ಗ್ರಾಮದ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದಾಳೆ. ಕೊಲೆಯಾಗಿರುವ ಸ್ಥಿತಿಯಲ್ಲಿ ಗೋಣಿಚೀಲದೊಳಗೆ ಶವ ಸಿಕ್ಕಿದೆ.

ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಬಾಲಕಿಯ ನೆರೆಹೊರೆಯವರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಾಲಕಿಯು ತನ್ನ ಅಜ್ಜಿಯೊಂದಿಗೆ ನಂದಗ್ರಾಮ್‌ನ ನೈ ಬಸ್ತಿ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಆಕೆಯ ಪೋಷಕರು ಹರಿಯಾಣದ ಸೋನಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬಾಲಕಿಯ ಅಜ್ಜಿಯರು ರಾಸುಗಳಿಗಾಗಿ ಹುಲ್ಲು ಕೊಯ್ಯಲು ಹೊಲಕ್ಕೆ ಹೋಗಿದ್ದ ವೇಳೆ ಆರೋಪಿಗಳು ಮನೆಗೆ ನುಗ್ಗಿ ಬಾಲಕಿಯನ್ನು ಅಪರಿಸಿದ್ದಾರೆ. ಗ್ರಾಮದ ಜಾತ್ರೆಗೆ ಹೋಗೋಣವೆಂದು ಮನವೊಲಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಪದೇ ಪದೇ ಮನೆಗೆ ಬರುತ್ತಿದ್ದರಿಂದ ಬಾಲಕಿ ಕೊಂಚ ಹೆದರಿದ್ದಳು. ಕೆಲವು ಗಂಟೆಗಳ ನಂತರ, ಬಾಲಕಿಯ ಮಲತಂದೆ ಸೋನು ಸಿಂಗ್ ಅವರಿಗೆ ವಿವಿಧ ನಂಬರ್‌ಗಳಿಂದ ಮಿಸ್ಡ್ ಕಾಲ್‌ಗಳು ಬಂದಿದ್ದವು.

“ನನ್ನ ಫೋನ್ ಸೈಲೆಂಟ್ ಮೋಡ್‌ನಲ್ಲಿದ್ದ ಕಾರಣ ಕೆಲವು ಮಿಸ್‌ಕಾಲ್‌ಗಳಾಗಿದ್ದವು. ಕರೆಯೊಂದನ್ನು ಸ್ವೀಕರಿಸಿದಾಗ ನಿನ್ನ ಮಗಳನ್ನು ಅಪಹರಿಸಲಾಗಿದೆ ಎಂದು ತಿಳಿಸಲಾಯಿತು. ನಂತರದ ಕೆಲವು ಕರೆಗಳನ್ನು ಮಾಡಿ 30 ಲಕ್ಷ ರೂಪಾಯಿ ಕೊಟ್ಟರೆ ಮಾತ್ರ ಮಗಳನ್ನು ಬಿಡುವುದಾಗಿ ಹೇಳಿದರು” ಎಂದು ಮಲತಂದೆ ಸೋನು ಹೇಳಿದ್ದಾರೆ.

ಬಾಲಕಿಯ ತಾಯಿಯ ಮೊದಲ ಪತಿ ಮೋನು 2015ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ನಂತರ ಆ ತಾಯಿಯು ತನ್ನ ಸೋದರ ಮಾವ ಸೋನುವನ್ನು ಮದುವೆಯಾಗಿದ್ದರು.

ಒಂದು ವರ್ಷದ ಮಗುವಾಗಿದ್ದಾಗಿನಿಂದಲೂ ಬಾಲಕಿಯು ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಬಾಲಕಿಯ ತಾಯಿಯ ಪತಿ ಮೋನು ಅಪಘಾತಕ್ಕೀಡಾದ ಕಾರಣ ವಿಮಾ ಹಣ 26 ಲಕ್ಷ ರೂಪಾಯಿಯನ್ನು ಆ ತಾಯಿಯು ಶೀಘ್ರದಲ್ಲೇ ಪಡೆಯಲಿದ್ದಾರೆ ಎಂದು ನೆರೆಮನೆಯ ಬಬ್ಲು ಕುಮಾರ್ ಇತ್ತೀಚೆಗೆ ತಿಳಿದುಕೊಂಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಬಾಲಕಿಯನ್ನು ಅಪಹರಿಸಿ ಹಣ ದೋಚಲು ಸಂಚು ರೂಪಿಸಿದ್ದನು. ಈ ಕೃತ್ಯಕ್ಕೆ ಸಹಕರಿಸಲು ದಾದ್ರಿಯ ಅಮಿತ್, ಬುಲಂದ್‌ಶಹರ್‌ನ ಗಂಭೀರ್‌ ಎಂಬವವರ ಸಹಾಯ ಪಡೆದನು. ಪೊಲೀಸರ ಪ್ರಕಾರ ಈ ಮೂವರೂ ಕೆಲಸವಿಲ್ಲದ ನಿರುದ್ಯೋಗಿಗಳು.

ಭಾನುವಾರ ಬೆಳಿಗ್ಗೆ ಬಾಲಕಿಯೊದಿಗೆ ಈತ (ಬಬ್ಲು) ನಡೆದುಕೊಂಡು ಹೋಗುವುದನ್ನು ನೋಡಿದ್ದನ್ನು ಕೆಲವು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಆ ನಂತರ ಬಬ್ಲುವನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಅಲೋಕ್ ದುಬೆ ತಿಳಿಸಿದ್ದಾರೆ.

“ಬೆಳಿಗ್ಗೆ 10 ಗಂಟೆ ಸುಮಾರಿಗೆ, ಅಜ್ಜಿಯರು ಇಲ್ಲದಿದ್ದಾಗ ಮತ್ತು ಹುಡುಗಿ ಒಬ್ಬಳೇ ಇದ್ದಾಗ ಬಬ್ಲು ಮನೆಗೆ ನುಸುಳಿದನು. ಹಳ್ಳಿಯ ಜಾತ್ರೆಗೆ ಕರೆದುಕೊಂಡು ಹೋಗುವುದಾಗಿ ನಂಬಿಸಿದನು. ಬೈಕಿನಲ್ಲಿ ದೂರದಲ್ಲಿ ಕಾಯುತ್ತಿದ್ದ ಅಮಿತ್‌ಗೆ ಬಾಲಕಿಯನ್ನು ಒಪ್ಪಿಸಿದನು. ಹುಡುಗಿ ಅಮಿತ್‌ನನ್ನೂ ನಂಬಿದಳು. ಯಾಕೆಂದರೆ ಆತನೂ ಕೂಡ ಬಬ್ಲುನೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡುತ್ತಿದ್ದನು” ಎಂದು ದುಬೆ ಹೇಳಿದ್ದಾರೆ.

ಒಂದೂವರೆ ಗಂಟೆಯ ನಂತರ ಅಮಿತ್ ದಾದ್ರಿ ಬೈಪಾಸ್ ತಲುಪಿದಾಗ, ಗಂಭೀರ್ ಜೊತೆಗೆ ಸ್ಕೂಟರ್‌ನಲ್ಲಿ ಹೋಗುವಂತೆ ಹುಡುಗಿಗೆ ತಿಳಿಸಿದನು. “ಬಾಲಕಿಗೆ ಬಬ್ಲು ಮತ್ತು ಅಮಿತ್ ತಿಳಿದಿರುವ ಕಾರಣ, ಹೇಗಾದರೂ ಬಾಲಕಿಯನ್ನು ಕೊಲೆ ಹಾಗೂ ಸುಲಿಗೆ ಮಾಡಿ ಪರಾರಿಯಾಗಲು ನಿರ್ಧರಿಸಿದ್ದರು” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಗಂಭೀರ್ ಬಾಲಕಿಯನ್ನು ಬುಲಂದ್‌ಶಹರ್‌ನ ಸರೈ ಚಬಿಲಾ ಗ್ರಾಮದ ಕಾಡಿಗೆ ಕರೆದೊಯ್ದು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಹಾಕಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳ ನಡುವೆ ಎಸೆದಿದ್ದಾರೆ” ಎಂದು ಪೊಲೀಸರು ಕಂಡುಕೊಂಡಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

ಬಬ್ಲು, ಮನೆಗೆ ಹಿಂದಿರುಗಿದನು ಮತ್ತು ಇತರ ಗ್ರಾಮಸ್ಥರೊಂದಿಗೆ ಹುಡುಗಿಯ ಹುಡುಕಾಟದಲ್ಲಿ ತೊಡಗಿದನು. ಸೋನುಗೆ ನಿರಂತರ ಕರೆಗಳನ್ನು ಮಾಡುವಾಗ ಬಬ್ಲು ಮತ್ತು ಅಮಿತ್ ಬೇರೆ ಯಾವುದೇ ಸಿಮ್ ಕಾರ್ಡ್‌ಗಳನ್ನು ಖರೀದಿಸಿರಲಿಲ್ಲ. ಬೀದಿಯಲ್ಲಿ ನಡೆದು ಹೋಗುವ ಜನರ ಪೋನ್‌ಗಳನ್ನು ಪಡೆದುಕೊಂಡು ಕರೆಗಳನ್ನು ಮಾಡಿದ್ದರು.

ಮಂಗಳವಾರ ಸಂಜೆ, ಶವ ಪತ್ತೆಯಾದ ಕೆಲವು ಗಂಟೆಗಳ ನಂತರ, ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸರು ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಭಾನುವಾರ ಸಂಜೆಯೇ ಪೊಲೀಸರು ಬಬ್ಲುವನ್ನು ವಶಕ್ಕೆ ತೆಗೆದುಕೊಂಡರು, ಆದರೆ ವಿಚಾರಣೆ ಮಾಡಲಿಲ್ಲ. ಅವರು ಹಾಗೆ ಮಾಡಿದ್ದರೆ, ಪೊಲೀಸರಿಗೆ ನನ್ನ ಮೊಮ್ಮಗಳು ಎಲ್ಲಿದ್ದಾಳೆಂದು ತಿಳಿಯುತ್ತಿತ್ತು. ಮತ್ತು ಆಕೆಯನ್ನು ಉಳಿಸಬಹುದಿತ್ತು” ಬಾಲಕಿಯ ಅಜ್ಜಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...