Homeಮುಖಪುಟಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

ಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

- Advertisement -
- Advertisement -

ಘಾಜಿಯಾಬಾದ್: ಇಲ್ಲಿನ ನಂದಗ್ರಾಮ್‌ನಲ್ಲಿರುವ ತನ್ನ ಮನೆಯಲ್ಲಿದ್ದ ಹಾಗೂ ಭಾನುವಾರ ಬೆಳಗ್ಗೆ ಅಪಹರಣಕ್ಕೊಳಗಾದ 11 ವರ್ಷದ ಬಾಲಕಿಯು 80 ಕಿಮೀ ದೂರದ ಬುಲಂದ್‌ಶಹರ್ ಗ್ರಾಮದ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದಾಳೆ. ಕೊಲೆಯಾಗಿರುವ ಸ್ಥಿತಿಯಲ್ಲಿ ಗೋಣಿಚೀಲದೊಳಗೆ ಶವ ಸಿಕ್ಕಿದೆ.

ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಬಾಲಕಿಯ ನೆರೆಹೊರೆಯವರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಾಲಕಿಯು ತನ್ನ ಅಜ್ಜಿಯೊಂದಿಗೆ ನಂದಗ್ರಾಮ್‌ನ ನೈ ಬಸ್ತಿ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಆಕೆಯ ಪೋಷಕರು ಹರಿಯಾಣದ ಸೋನಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬಾಲಕಿಯ ಅಜ್ಜಿಯರು ರಾಸುಗಳಿಗಾಗಿ ಹುಲ್ಲು ಕೊಯ್ಯಲು ಹೊಲಕ್ಕೆ ಹೋಗಿದ್ದ ವೇಳೆ ಆರೋಪಿಗಳು ಮನೆಗೆ ನುಗ್ಗಿ ಬಾಲಕಿಯನ್ನು ಅಪರಿಸಿದ್ದಾರೆ. ಗ್ರಾಮದ ಜಾತ್ರೆಗೆ ಹೋಗೋಣವೆಂದು ಮನವೊಲಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಪದೇ ಪದೇ ಮನೆಗೆ ಬರುತ್ತಿದ್ದರಿಂದ ಬಾಲಕಿ ಕೊಂಚ ಹೆದರಿದ್ದಳು. ಕೆಲವು ಗಂಟೆಗಳ ನಂತರ, ಬಾಲಕಿಯ ಮಲತಂದೆ ಸೋನು ಸಿಂಗ್ ಅವರಿಗೆ ವಿವಿಧ ನಂಬರ್‌ಗಳಿಂದ ಮಿಸ್ಡ್ ಕಾಲ್‌ಗಳು ಬಂದಿದ್ದವು.

“ನನ್ನ ಫೋನ್ ಸೈಲೆಂಟ್ ಮೋಡ್‌ನಲ್ಲಿದ್ದ ಕಾರಣ ಕೆಲವು ಮಿಸ್‌ಕಾಲ್‌ಗಳಾಗಿದ್ದವು. ಕರೆಯೊಂದನ್ನು ಸ್ವೀಕರಿಸಿದಾಗ ನಿನ್ನ ಮಗಳನ್ನು ಅಪಹರಿಸಲಾಗಿದೆ ಎಂದು ತಿಳಿಸಲಾಯಿತು. ನಂತರದ ಕೆಲವು ಕರೆಗಳನ್ನು ಮಾಡಿ 30 ಲಕ್ಷ ರೂಪಾಯಿ ಕೊಟ್ಟರೆ ಮಾತ್ರ ಮಗಳನ್ನು ಬಿಡುವುದಾಗಿ ಹೇಳಿದರು” ಎಂದು ಮಲತಂದೆ ಸೋನು ಹೇಳಿದ್ದಾರೆ.

ಬಾಲಕಿಯ ತಾಯಿಯ ಮೊದಲ ಪತಿ ಮೋನು 2015ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ನಂತರ ಆ ತಾಯಿಯು ತನ್ನ ಸೋದರ ಮಾವ ಸೋನುವನ್ನು ಮದುವೆಯಾಗಿದ್ದರು.

ಒಂದು ವರ್ಷದ ಮಗುವಾಗಿದ್ದಾಗಿನಿಂದಲೂ ಬಾಲಕಿಯು ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಬಾಲಕಿಯ ತಾಯಿಯ ಪತಿ ಮೋನು ಅಪಘಾತಕ್ಕೀಡಾದ ಕಾರಣ ವಿಮಾ ಹಣ 26 ಲಕ್ಷ ರೂಪಾಯಿಯನ್ನು ಆ ತಾಯಿಯು ಶೀಘ್ರದಲ್ಲೇ ಪಡೆಯಲಿದ್ದಾರೆ ಎಂದು ನೆರೆಮನೆಯ ಬಬ್ಲು ಕುಮಾರ್ ಇತ್ತೀಚೆಗೆ ತಿಳಿದುಕೊಂಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಬಾಲಕಿಯನ್ನು ಅಪಹರಿಸಿ ಹಣ ದೋಚಲು ಸಂಚು ರೂಪಿಸಿದ್ದನು. ಈ ಕೃತ್ಯಕ್ಕೆ ಸಹಕರಿಸಲು ದಾದ್ರಿಯ ಅಮಿತ್, ಬುಲಂದ್‌ಶಹರ್‌ನ ಗಂಭೀರ್‌ ಎಂಬವವರ ಸಹಾಯ ಪಡೆದನು. ಪೊಲೀಸರ ಪ್ರಕಾರ ಈ ಮೂವರೂ ಕೆಲಸವಿಲ್ಲದ ನಿರುದ್ಯೋಗಿಗಳು.

ಭಾನುವಾರ ಬೆಳಿಗ್ಗೆ ಬಾಲಕಿಯೊದಿಗೆ ಈತ (ಬಬ್ಲು) ನಡೆದುಕೊಂಡು ಹೋಗುವುದನ್ನು ನೋಡಿದ್ದನ್ನು ಕೆಲವು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಆ ನಂತರ ಬಬ್ಲುವನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಅಲೋಕ್ ದುಬೆ ತಿಳಿಸಿದ್ದಾರೆ.

“ಬೆಳಿಗ್ಗೆ 10 ಗಂಟೆ ಸುಮಾರಿಗೆ, ಅಜ್ಜಿಯರು ಇಲ್ಲದಿದ್ದಾಗ ಮತ್ತು ಹುಡುಗಿ ಒಬ್ಬಳೇ ಇದ್ದಾಗ ಬಬ್ಲು ಮನೆಗೆ ನುಸುಳಿದನು. ಹಳ್ಳಿಯ ಜಾತ್ರೆಗೆ ಕರೆದುಕೊಂಡು ಹೋಗುವುದಾಗಿ ನಂಬಿಸಿದನು. ಬೈಕಿನಲ್ಲಿ ದೂರದಲ್ಲಿ ಕಾಯುತ್ತಿದ್ದ ಅಮಿತ್‌ಗೆ ಬಾಲಕಿಯನ್ನು ಒಪ್ಪಿಸಿದನು. ಹುಡುಗಿ ಅಮಿತ್‌ನನ್ನೂ ನಂಬಿದಳು. ಯಾಕೆಂದರೆ ಆತನೂ ಕೂಡ ಬಬ್ಲುನೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡುತ್ತಿದ್ದನು” ಎಂದು ದುಬೆ ಹೇಳಿದ್ದಾರೆ.

ಒಂದೂವರೆ ಗಂಟೆಯ ನಂತರ ಅಮಿತ್ ದಾದ್ರಿ ಬೈಪಾಸ್ ತಲುಪಿದಾಗ, ಗಂಭೀರ್ ಜೊತೆಗೆ ಸ್ಕೂಟರ್‌ನಲ್ಲಿ ಹೋಗುವಂತೆ ಹುಡುಗಿಗೆ ತಿಳಿಸಿದನು. “ಬಾಲಕಿಗೆ ಬಬ್ಲು ಮತ್ತು ಅಮಿತ್ ತಿಳಿದಿರುವ ಕಾರಣ, ಹೇಗಾದರೂ ಬಾಲಕಿಯನ್ನು ಕೊಲೆ ಹಾಗೂ ಸುಲಿಗೆ ಮಾಡಿ ಪರಾರಿಯಾಗಲು ನಿರ್ಧರಿಸಿದ್ದರು” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಗಂಭೀರ್ ಬಾಲಕಿಯನ್ನು ಬುಲಂದ್‌ಶಹರ್‌ನ ಸರೈ ಚಬಿಲಾ ಗ್ರಾಮದ ಕಾಡಿಗೆ ಕರೆದೊಯ್ದು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಹಾಕಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳ ನಡುವೆ ಎಸೆದಿದ್ದಾರೆ” ಎಂದು ಪೊಲೀಸರು ಕಂಡುಕೊಂಡಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

ಬಬ್ಲು, ಮನೆಗೆ ಹಿಂದಿರುಗಿದನು ಮತ್ತು ಇತರ ಗ್ರಾಮಸ್ಥರೊಂದಿಗೆ ಹುಡುಗಿಯ ಹುಡುಕಾಟದಲ್ಲಿ ತೊಡಗಿದನು. ಸೋನುಗೆ ನಿರಂತರ ಕರೆಗಳನ್ನು ಮಾಡುವಾಗ ಬಬ್ಲು ಮತ್ತು ಅಮಿತ್ ಬೇರೆ ಯಾವುದೇ ಸಿಮ್ ಕಾರ್ಡ್‌ಗಳನ್ನು ಖರೀದಿಸಿರಲಿಲ್ಲ. ಬೀದಿಯಲ್ಲಿ ನಡೆದು ಹೋಗುವ ಜನರ ಪೋನ್‌ಗಳನ್ನು ಪಡೆದುಕೊಂಡು ಕರೆಗಳನ್ನು ಮಾಡಿದ್ದರು.

ಮಂಗಳವಾರ ಸಂಜೆ, ಶವ ಪತ್ತೆಯಾದ ಕೆಲವು ಗಂಟೆಗಳ ನಂತರ, ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸರು ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಭಾನುವಾರ ಸಂಜೆಯೇ ಪೊಲೀಸರು ಬಬ್ಲುವನ್ನು ವಶಕ್ಕೆ ತೆಗೆದುಕೊಂಡರು, ಆದರೆ ವಿಚಾರಣೆ ಮಾಡಲಿಲ್ಲ. ಅವರು ಹಾಗೆ ಮಾಡಿದ್ದರೆ, ಪೊಲೀಸರಿಗೆ ನನ್ನ ಮೊಮ್ಮಗಳು ಎಲ್ಲಿದ್ದಾಳೆಂದು ತಿಳಿಯುತ್ತಿತ್ತು. ಮತ್ತು ಆಕೆಯನ್ನು ಉಳಿಸಬಹುದಿತ್ತು” ಬಾಲಕಿಯ ಅಜ್ಜಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...