Homeಮುಖಪುಟಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

ಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

- Advertisement -
- Advertisement -

ಘಾಜಿಯಾಬಾದ್: ಇಲ್ಲಿನ ನಂದಗ್ರಾಮ್‌ನಲ್ಲಿರುವ ತನ್ನ ಮನೆಯಲ್ಲಿದ್ದ ಹಾಗೂ ಭಾನುವಾರ ಬೆಳಗ್ಗೆ ಅಪಹರಣಕ್ಕೊಳಗಾದ 11 ವರ್ಷದ ಬಾಲಕಿಯು 80 ಕಿಮೀ ದೂರದ ಬುಲಂದ್‌ಶಹರ್ ಗ್ರಾಮದ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದಾಳೆ. ಕೊಲೆಯಾಗಿರುವ ಸ್ಥಿತಿಯಲ್ಲಿ ಗೋಣಿಚೀಲದೊಳಗೆ ಶವ ಸಿಕ್ಕಿದೆ.

ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಬಾಲಕಿಯ ನೆರೆಹೊರೆಯವರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಾಲಕಿಯು ತನ್ನ ಅಜ್ಜಿಯೊಂದಿಗೆ ನಂದಗ್ರಾಮ್‌ನ ನೈ ಬಸ್ತಿ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಆಕೆಯ ಪೋಷಕರು ಹರಿಯಾಣದ ಸೋನಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬಾಲಕಿಯ ಅಜ್ಜಿಯರು ರಾಸುಗಳಿಗಾಗಿ ಹುಲ್ಲು ಕೊಯ್ಯಲು ಹೊಲಕ್ಕೆ ಹೋಗಿದ್ದ ವೇಳೆ ಆರೋಪಿಗಳು ಮನೆಗೆ ನುಗ್ಗಿ ಬಾಲಕಿಯನ್ನು ಅಪರಿಸಿದ್ದಾರೆ. ಗ್ರಾಮದ ಜಾತ್ರೆಗೆ ಹೋಗೋಣವೆಂದು ಮನವೊಲಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಪದೇ ಪದೇ ಮನೆಗೆ ಬರುತ್ತಿದ್ದರಿಂದ ಬಾಲಕಿ ಕೊಂಚ ಹೆದರಿದ್ದಳು. ಕೆಲವು ಗಂಟೆಗಳ ನಂತರ, ಬಾಲಕಿಯ ಮಲತಂದೆ ಸೋನು ಸಿಂಗ್ ಅವರಿಗೆ ವಿವಿಧ ನಂಬರ್‌ಗಳಿಂದ ಮಿಸ್ಡ್ ಕಾಲ್‌ಗಳು ಬಂದಿದ್ದವು.

“ನನ್ನ ಫೋನ್ ಸೈಲೆಂಟ್ ಮೋಡ್‌ನಲ್ಲಿದ್ದ ಕಾರಣ ಕೆಲವು ಮಿಸ್‌ಕಾಲ್‌ಗಳಾಗಿದ್ದವು. ಕರೆಯೊಂದನ್ನು ಸ್ವೀಕರಿಸಿದಾಗ ನಿನ್ನ ಮಗಳನ್ನು ಅಪಹರಿಸಲಾಗಿದೆ ಎಂದು ತಿಳಿಸಲಾಯಿತು. ನಂತರದ ಕೆಲವು ಕರೆಗಳನ್ನು ಮಾಡಿ 30 ಲಕ್ಷ ರೂಪಾಯಿ ಕೊಟ್ಟರೆ ಮಾತ್ರ ಮಗಳನ್ನು ಬಿಡುವುದಾಗಿ ಹೇಳಿದರು” ಎಂದು ಮಲತಂದೆ ಸೋನು ಹೇಳಿದ್ದಾರೆ.

ಬಾಲಕಿಯ ತಾಯಿಯ ಮೊದಲ ಪತಿ ಮೋನು 2015ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ನಂತರ ಆ ತಾಯಿಯು ತನ್ನ ಸೋದರ ಮಾವ ಸೋನುವನ್ನು ಮದುವೆಯಾಗಿದ್ದರು.

ಒಂದು ವರ್ಷದ ಮಗುವಾಗಿದ್ದಾಗಿನಿಂದಲೂ ಬಾಲಕಿಯು ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಬಾಲಕಿಯ ತಾಯಿಯ ಪತಿ ಮೋನು ಅಪಘಾತಕ್ಕೀಡಾದ ಕಾರಣ ವಿಮಾ ಹಣ 26 ಲಕ್ಷ ರೂಪಾಯಿಯನ್ನು ಆ ತಾಯಿಯು ಶೀಘ್ರದಲ್ಲೇ ಪಡೆಯಲಿದ್ದಾರೆ ಎಂದು ನೆರೆಮನೆಯ ಬಬ್ಲು ಕುಮಾರ್ ಇತ್ತೀಚೆಗೆ ತಿಳಿದುಕೊಂಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಬಾಲಕಿಯನ್ನು ಅಪಹರಿಸಿ ಹಣ ದೋಚಲು ಸಂಚು ರೂಪಿಸಿದ್ದನು. ಈ ಕೃತ್ಯಕ್ಕೆ ಸಹಕರಿಸಲು ದಾದ್ರಿಯ ಅಮಿತ್, ಬುಲಂದ್‌ಶಹರ್‌ನ ಗಂಭೀರ್‌ ಎಂಬವವರ ಸಹಾಯ ಪಡೆದನು. ಪೊಲೀಸರ ಪ್ರಕಾರ ಈ ಮೂವರೂ ಕೆಲಸವಿಲ್ಲದ ನಿರುದ್ಯೋಗಿಗಳು.

ಭಾನುವಾರ ಬೆಳಿಗ್ಗೆ ಬಾಲಕಿಯೊದಿಗೆ ಈತ (ಬಬ್ಲು) ನಡೆದುಕೊಂಡು ಹೋಗುವುದನ್ನು ನೋಡಿದ್ದನ್ನು ಕೆಲವು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಆ ನಂತರ ಬಬ್ಲುವನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಅಲೋಕ್ ದುಬೆ ತಿಳಿಸಿದ್ದಾರೆ.

“ಬೆಳಿಗ್ಗೆ 10 ಗಂಟೆ ಸುಮಾರಿಗೆ, ಅಜ್ಜಿಯರು ಇಲ್ಲದಿದ್ದಾಗ ಮತ್ತು ಹುಡುಗಿ ಒಬ್ಬಳೇ ಇದ್ದಾಗ ಬಬ್ಲು ಮನೆಗೆ ನುಸುಳಿದನು. ಹಳ್ಳಿಯ ಜಾತ್ರೆಗೆ ಕರೆದುಕೊಂಡು ಹೋಗುವುದಾಗಿ ನಂಬಿಸಿದನು. ಬೈಕಿನಲ್ಲಿ ದೂರದಲ್ಲಿ ಕಾಯುತ್ತಿದ್ದ ಅಮಿತ್‌ಗೆ ಬಾಲಕಿಯನ್ನು ಒಪ್ಪಿಸಿದನು. ಹುಡುಗಿ ಅಮಿತ್‌ನನ್ನೂ ನಂಬಿದಳು. ಯಾಕೆಂದರೆ ಆತನೂ ಕೂಡ ಬಬ್ಲುನೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡುತ್ತಿದ್ದನು” ಎಂದು ದುಬೆ ಹೇಳಿದ್ದಾರೆ.

ಒಂದೂವರೆ ಗಂಟೆಯ ನಂತರ ಅಮಿತ್ ದಾದ್ರಿ ಬೈಪಾಸ್ ತಲುಪಿದಾಗ, ಗಂಭೀರ್ ಜೊತೆಗೆ ಸ್ಕೂಟರ್‌ನಲ್ಲಿ ಹೋಗುವಂತೆ ಹುಡುಗಿಗೆ ತಿಳಿಸಿದನು. “ಬಾಲಕಿಗೆ ಬಬ್ಲು ಮತ್ತು ಅಮಿತ್ ತಿಳಿದಿರುವ ಕಾರಣ, ಹೇಗಾದರೂ ಬಾಲಕಿಯನ್ನು ಕೊಲೆ ಹಾಗೂ ಸುಲಿಗೆ ಮಾಡಿ ಪರಾರಿಯಾಗಲು ನಿರ್ಧರಿಸಿದ್ದರು” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಗಂಭೀರ್ ಬಾಲಕಿಯನ್ನು ಬುಲಂದ್‌ಶಹರ್‌ನ ಸರೈ ಚಬಿಲಾ ಗ್ರಾಮದ ಕಾಡಿಗೆ ಕರೆದೊಯ್ದು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಹಾಕಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳ ನಡುವೆ ಎಸೆದಿದ್ದಾರೆ” ಎಂದು ಪೊಲೀಸರು ಕಂಡುಕೊಂಡಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

ಬಬ್ಲು, ಮನೆಗೆ ಹಿಂದಿರುಗಿದನು ಮತ್ತು ಇತರ ಗ್ರಾಮಸ್ಥರೊಂದಿಗೆ ಹುಡುಗಿಯ ಹುಡುಕಾಟದಲ್ಲಿ ತೊಡಗಿದನು. ಸೋನುಗೆ ನಿರಂತರ ಕರೆಗಳನ್ನು ಮಾಡುವಾಗ ಬಬ್ಲು ಮತ್ತು ಅಮಿತ್ ಬೇರೆ ಯಾವುದೇ ಸಿಮ್ ಕಾರ್ಡ್‌ಗಳನ್ನು ಖರೀದಿಸಿರಲಿಲ್ಲ. ಬೀದಿಯಲ್ಲಿ ನಡೆದು ಹೋಗುವ ಜನರ ಪೋನ್‌ಗಳನ್ನು ಪಡೆದುಕೊಂಡು ಕರೆಗಳನ್ನು ಮಾಡಿದ್ದರು.

ಮಂಗಳವಾರ ಸಂಜೆ, ಶವ ಪತ್ತೆಯಾದ ಕೆಲವು ಗಂಟೆಗಳ ನಂತರ, ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸರು ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಭಾನುವಾರ ಸಂಜೆಯೇ ಪೊಲೀಸರು ಬಬ್ಲುವನ್ನು ವಶಕ್ಕೆ ತೆಗೆದುಕೊಂಡರು, ಆದರೆ ವಿಚಾರಣೆ ಮಾಡಲಿಲ್ಲ. ಅವರು ಹಾಗೆ ಮಾಡಿದ್ದರೆ, ಪೊಲೀಸರಿಗೆ ನನ್ನ ಮೊಮ್ಮಗಳು ಎಲ್ಲಿದ್ದಾಳೆಂದು ತಿಳಿಯುತ್ತಿತ್ತು. ಮತ್ತು ಆಕೆಯನ್ನು ಉಳಿಸಬಹುದಿತ್ತು” ಬಾಲಕಿಯ ಅಜ್ಜಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...