Homeಮುಖಪುಟಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

ಉತ್ತರಪ್ರದೇಶ: ಅಪಹರಣಕ್ಕೊಳಗಾದ 11 ವರ್ಷದ ಬಾಲಕಿ ಶವವಾಗಿ ಪತ್ತೆ; ಪರಿಚಯಸ್ಥರಿಂದಲೇ ಕೊಲೆ

- Advertisement -
- Advertisement -

ಘಾಜಿಯಾಬಾದ್: ಇಲ್ಲಿನ ನಂದಗ್ರಾಮ್‌ನಲ್ಲಿರುವ ತನ್ನ ಮನೆಯಲ್ಲಿದ್ದ ಹಾಗೂ ಭಾನುವಾರ ಬೆಳಗ್ಗೆ ಅಪಹರಣಕ್ಕೊಳಗಾದ 11 ವರ್ಷದ ಬಾಲಕಿಯು 80 ಕಿಮೀ ದೂರದ ಬುಲಂದ್‌ಶಹರ್ ಗ್ರಾಮದ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದಾಳೆ. ಕೊಲೆಯಾಗಿರುವ ಸ್ಥಿತಿಯಲ್ಲಿ ಗೋಣಿಚೀಲದೊಳಗೆ ಶವ ಸಿಕ್ಕಿದೆ.

ಅಪಹರಣ ಮತ್ತು ಕೊಲೆಗೆ ಸಂಬಂಧಿಸಿದಂತೆ ಬಾಲಕಿಯ ನೆರೆಹೊರೆಯವರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಬಾಲಕಿಯು ತನ್ನ ಅಜ್ಜಿಯೊಂದಿಗೆ ನಂದಗ್ರಾಮ್‌ನ ನೈ ಬಸ್ತಿ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಆಕೆಯ ಪೋಷಕರು ಹರಿಯಾಣದ ಸೋನಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬಾಲಕಿಯ ಅಜ್ಜಿಯರು ರಾಸುಗಳಿಗಾಗಿ ಹುಲ್ಲು ಕೊಯ್ಯಲು ಹೊಲಕ್ಕೆ ಹೋಗಿದ್ದ ವೇಳೆ ಆರೋಪಿಗಳು ಮನೆಗೆ ನುಗ್ಗಿ ಬಾಲಕಿಯನ್ನು ಅಪರಿಸಿದ್ದಾರೆ. ಗ್ರಾಮದ ಜಾತ್ರೆಗೆ ಹೋಗೋಣವೆಂದು ಮನವೊಲಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಪದೇ ಪದೇ ಮನೆಗೆ ಬರುತ್ತಿದ್ದರಿಂದ ಬಾಲಕಿ ಕೊಂಚ ಹೆದರಿದ್ದಳು. ಕೆಲವು ಗಂಟೆಗಳ ನಂತರ, ಬಾಲಕಿಯ ಮಲತಂದೆ ಸೋನು ಸಿಂಗ್ ಅವರಿಗೆ ವಿವಿಧ ನಂಬರ್‌ಗಳಿಂದ ಮಿಸ್ಡ್ ಕಾಲ್‌ಗಳು ಬಂದಿದ್ದವು.

“ನನ್ನ ಫೋನ್ ಸೈಲೆಂಟ್ ಮೋಡ್‌ನಲ್ಲಿದ್ದ ಕಾರಣ ಕೆಲವು ಮಿಸ್‌ಕಾಲ್‌ಗಳಾಗಿದ್ದವು. ಕರೆಯೊಂದನ್ನು ಸ್ವೀಕರಿಸಿದಾಗ ನಿನ್ನ ಮಗಳನ್ನು ಅಪಹರಿಸಲಾಗಿದೆ ಎಂದು ತಿಳಿಸಲಾಯಿತು. ನಂತರದ ಕೆಲವು ಕರೆಗಳನ್ನು ಮಾಡಿ 30 ಲಕ್ಷ ರೂಪಾಯಿ ಕೊಟ್ಟರೆ ಮಾತ್ರ ಮಗಳನ್ನು ಬಿಡುವುದಾಗಿ ಹೇಳಿದರು” ಎಂದು ಮಲತಂದೆ ಸೋನು ಹೇಳಿದ್ದಾರೆ.

ಬಾಲಕಿಯ ತಾಯಿಯ ಮೊದಲ ಪತಿ ಮೋನು 2015ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ನಂತರ ಆ ತಾಯಿಯು ತನ್ನ ಸೋದರ ಮಾವ ಸೋನುವನ್ನು ಮದುವೆಯಾಗಿದ್ದರು.

ಒಂದು ವರ್ಷದ ಮಗುವಾಗಿದ್ದಾಗಿನಿಂದಲೂ ಬಾಲಕಿಯು ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಬಾಲಕಿಯ ತಾಯಿಯ ಪತಿ ಮೋನು ಅಪಘಾತಕ್ಕೀಡಾದ ಕಾರಣ ವಿಮಾ ಹಣ 26 ಲಕ್ಷ ರೂಪಾಯಿಯನ್ನು ಆ ತಾಯಿಯು ಶೀಘ್ರದಲ್ಲೇ ಪಡೆಯಲಿದ್ದಾರೆ ಎಂದು ನೆರೆಮನೆಯ ಬಬ್ಲು ಕುಮಾರ್ ಇತ್ತೀಚೆಗೆ ತಿಳಿದುಕೊಂಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಬಾಲಕಿಯನ್ನು ಅಪಹರಿಸಿ ಹಣ ದೋಚಲು ಸಂಚು ರೂಪಿಸಿದ್ದನು. ಈ ಕೃತ್ಯಕ್ಕೆ ಸಹಕರಿಸಲು ದಾದ್ರಿಯ ಅಮಿತ್, ಬುಲಂದ್‌ಶಹರ್‌ನ ಗಂಭೀರ್‌ ಎಂಬವವರ ಸಹಾಯ ಪಡೆದನು. ಪೊಲೀಸರ ಪ್ರಕಾರ ಈ ಮೂವರೂ ಕೆಲಸವಿಲ್ಲದ ನಿರುದ್ಯೋಗಿಗಳು.

ಭಾನುವಾರ ಬೆಳಿಗ್ಗೆ ಬಾಲಕಿಯೊದಿಗೆ ಈತ (ಬಬ್ಲು) ನಡೆದುಕೊಂಡು ಹೋಗುವುದನ್ನು ನೋಡಿದ್ದನ್ನು ಕೆಲವು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಆ ನಂತರ ಬಬ್ಲುವನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಅಲೋಕ್ ದುಬೆ ತಿಳಿಸಿದ್ದಾರೆ.

“ಬೆಳಿಗ್ಗೆ 10 ಗಂಟೆ ಸುಮಾರಿಗೆ, ಅಜ್ಜಿಯರು ಇಲ್ಲದಿದ್ದಾಗ ಮತ್ತು ಹುಡುಗಿ ಒಬ್ಬಳೇ ಇದ್ದಾಗ ಬಬ್ಲು ಮನೆಗೆ ನುಸುಳಿದನು. ಹಳ್ಳಿಯ ಜಾತ್ರೆಗೆ ಕರೆದುಕೊಂಡು ಹೋಗುವುದಾಗಿ ನಂಬಿಸಿದನು. ಬೈಕಿನಲ್ಲಿ ದೂರದಲ್ಲಿ ಕಾಯುತ್ತಿದ್ದ ಅಮಿತ್‌ಗೆ ಬಾಲಕಿಯನ್ನು ಒಪ್ಪಿಸಿದನು. ಹುಡುಗಿ ಅಮಿತ್‌ನನ್ನೂ ನಂಬಿದಳು. ಯಾಕೆಂದರೆ ಆತನೂ ಕೂಡ ಬಬ್ಲುನೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡುತ್ತಿದ್ದನು” ಎಂದು ದುಬೆ ಹೇಳಿದ್ದಾರೆ.

ಒಂದೂವರೆ ಗಂಟೆಯ ನಂತರ ಅಮಿತ್ ದಾದ್ರಿ ಬೈಪಾಸ್ ತಲುಪಿದಾಗ, ಗಂಭೀರ್ ಜೊತೆಗೆ ಸ್ಕೂಟರ್‌ನಲ್ಲಿ ಹೋಗುವಂತೆ ಹುಡುಗಿಗೆ ತಿಳಿಸಿದನು. “ಬಾಲಕಿಗೆ ಬಬ್ಲು ಮತ್ತು ಅಮಿತ್ ತಿಳಿದಿರುವ ಕಾರಣ, ಹೇಗಾದರೂ ಬಾಲಕಿಯನ್ನು ಕೊಲೆ ಹಾಗೂ ಸುಲಿಗೆ ಮಾಡಿ ಪರಾರಿಯಾಗಲು ನಿರ್ಧರಿಸಿದ್ದರು” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

“ಗಂಭೀರ್ ಬಾಲಕಿಯನ್ನು ಬುಲಂದ್‌ಶಹರ್‌ನ ಸರೈ ಚಬಿಲಾ ಗ್ರಾಮದ ಕಾಡಿಗೆ ಕರೆದೊಯ್ದು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ಹಾಕಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳ ನಡುವೆ ಎಸೆದಿದ್ದಾರೆ” ಎಂದು ಪೊಲೀಸರು ಕಂಡುಕೊಂಡಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

ಬಬ್ಲು, ಮನೆಗೆ ಹಿಂದಿರುಗಿದನು ಮತ್ತು ಇತರ ಗ್ರಾಮಸ್ಥರೊಂದಿಗೆ ಹುಡುಗಿಯ ಹುಡುಕಾಟದಲ್ಲಿ ತೊಡಗಿದನು. ಸೋನುಗೆ ನಿರಂತರ ಕರೆಗಳನ್ನು ಮಾಡುವಾಗ ಬಬ್ಲು ಮತ್ತು ಅಮಿತ್ ಬೇರೆ ಯಾವುದೇ ಸಿಮ್ ಕಾರ್ಡ್‌ಗಳನ್ನು ಖರೀದಿಸಿರಲಿಲ್ಲ. ಬೀದಿಯಲ್ಲಿ ನಡೆದು ಹೋಗುವ ಜನರ ಪೋನ್‌ಗಳನ್ನು ಪಡೆದುಕೊಂಡು ಕರೆಗಳನ್ನು ಮಾಡಿದ್ದರು.

ಮಂಗಳವಾರ ಸಂಜೆ, ಶವ ಪತ್ತೆಯಾದ ಕೆಲವು ಗಂಟೆಗಳ ನಂತರ, ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪೊಲೀಸರು ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಭಾನುವಾರ ಸಂಜೆಯೇ ಪೊಲೀಸರು ಬಬ್ಲುವನ್ನು ವಶಕ್ಕೆ ತೆಗೆದುಕೊಂಡರು, ಆದರೆ ವಿಚಾರಣೆ ಮಾಡಲಿಲ್ಲ. ಅವರು ಹಾಗೆ ಮಾಡಿದ್ದರೆ, ಪೊಲೀಸರಿಗೆ ನನ್ನ ಮೊಮ್ಮಗಳು ಎಲ್ಲಿದ್ದಾಳೆಂದು ತಿಳಿಯುತ್ತಿತ್ತು. ಮತ್ತು ಆಕೆಯನ್ನು ಉಳಿಸಬಹುದಿತ್ತು” ಬಾಲಕಿಯ ಅಜ್ಜಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...