Homeಮುಖಪುಟಉತ್ತರ ಪ್ರದೇಶ: ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಮುನ್ನಲೆಗೆ

ಉತ್ತರ ಪ್ರದೇಶ: ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಮುನ್ನಲೆಗೆ

2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ವಿಷಯಾಧಾರಿತ ಚರ್ಚೆಗೆ ತರುವ ನಿಟ್ಟಿನಲ್ಲಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಆರಂಭವಾಗಿದೆ.

- Advertisement -
- Advertisement -

2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ವಿಷಯಾಧಾರಿತ ಚರ್ಚೆಗೆ ತರುವ ನಿಟ್ಟಿನಲ್ಲಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಆರಂಭವಾಗಿದೆ.

ಖಾಲಿ ಇರುವ 25 ಲಕ್ಷ ಉದ್ಯೋಗಗಳನ್ನು ಯೋಗಿ ಆದಿತ್ಯನಾಥ ಸರ್ಕಾರ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಶುಕ್ರವಾರ ಚಾಲನೆ ಪಡೆದಿದೆ.

‘ಛಾತ್ರ್ ಯುವ ರೋಜ್‌‌ಗಾರ್‌ ಅಧಿಕಾರ್‌ ಮೋರ್ಚಾ’ ಸಂಘಟನೆಯ ನೇತೃತ್ವದಲ್ಲಿ ಚಳವಳಿಗೆ ಚಾಲನೆ ನೀಡಲಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಸರ್ಕಾರವನ್ನು ಎಚ್ಚರಿಸಲು ಪ್ರಭಾವ ಬೀರಲು ಸಂಘಟಕರು ಮುಂದಾಗಿದ್ದಾರೆ. ಲಕ್ನೋದಲ್ಲಿ ಸೆ. 24ರಂದು ‘ರೋಜ್‌ಗಾರ್‌ ಅಧಿಕಾರ್‌ ಸಮ್ಮೇಳನ’ ನಡೆದಿದೆ. ಈ ಸಮ್ಮೇಳನದಲ್ಲಿ ವಿರೋಧ ಪಕ್ಷಗಳ ಹಲವು ನಾಯಕರೂ ಪಾಲ್ಗೊಂಡಿದ್ದು, “ಘನತೆಯ ಜೊತೆಗೆ ಉದ್ಯೋಗ”, ಪ್ರತಿಯೊಬ್ಬ ಯುವಜನರಿಗೂ ಶಿಕ್ಷಣವೆಂಬುದು “ಮೂಲಭೂತ ಹಕ್ಕು” ಎಂದು ಬಿಜೆಪಿ ನೇತೃತ್ವದ ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

ಬಿಹಾರದ ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾದ ನಾಯಕ ಮನೋಜ್‌ ಮನ್ಜಿಲ್‌, ಸಾಮಾಜಿಕ ಚಳವಳಿಗಳನ್ನು ದಮನ ಮಾಡುವ ಉತ್ತರ ಪ್ರದೇಶದ ಸರ್ಕಾರದ ಪ್ರವೃತ್ತಿಯನ್ನು ಖಂಡಿಸಿದ್ದಾರೆ. “ದೇಶದ ಯುವಜನರ ನಿರುದ್ಯೋಗಕ್ಕೆ ಶೇ. 10ರಷ್ಟು ಕೊಡುಗೆ ಉತ್ತರ ಪ್ರದೇಶದ್ದಾಗಿದೆ. ಲಾಕ್‌ಡೌನ್‌ ಜಾರಿಯಿಂದಾಗಿ ದೊಡ್ಡ ಮಟ್ಟದ ಉದ್ಯೋಗ ನಷ್ಟ ಉಂಟಾಗಿದೆ” ಎಂದಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ ರಾಷ್ಟ್ರೀಯ ಸಂಯೋಜಕಿ ಸದಫ್‌ ಜಫಾರ್‌ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದ್ದು, “ಯುವಜನರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು” ಎಂದಿದ್ದಾರೆ.

ಮುಂದುವರಿದು, “ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ಮಾರಿ ಹಣವನ್ನು ಹೊಂದಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಸೆಂಟ್ರಲ್‌ ವಿಸ್ತಾ ಥರದ ಅಪ್ರಯೋಜಕ ಯೋಜನೆಗಳಿಗೆ ಹಣವನ್ನು ವಿನಿಯೋಗಿಸುತ್ತಿದೆ” ಎಂದು ಕುಟುಕಿದ್ದಾರೆ.ಆಮ್‌ ಆದ್ಮಿ ಪಾರ್ಟಿಯ ಪ್ರೊ.ಡಿ.ಎನ್‌.ಎಸ್‌.ಯಾದವ್‌ ಅವರು, ಪ್ರಜೆಗಳ ಮೂಲಭೂತ ಹಕ್ಕುಗಳ ಕುರಿತು ಬೆಳಕು ಚೆಲ್ಲಿದ್ದಾರೆ. “ಜನರಿಂದ ಆಯ್ಕೆಯಾದ ಸರ್ಕಾರವನ್ನು ನಿರುದ್ಯೋಗದ ಕುರಿತು ಪ್ರಶ್ನಿಸುವುದು ದೇಶದ ಪ್ರತಿಯೊಬ್ಬ ಯುವಜನರ ಕರ್ತವ್ಯ” ಎಂದಿದ್ದಾರೆ. “ನಿರುದ್ಯೋಗ ಕುರಿತ ಅಂಕಿ-ಅಂಶಗಳನ್ನು ಸರ್ಕಾರ ಮುಚ್ಚಿಡುತ್ತಿದೆ. ಉದ್ಯೋಗ ಸರ್ವೇ ನಡೆಸುವುದನ್ನು ಕಾರ್ಮಿಕ ಸಚಿವಾಲಯ ನಿಲ್ಲಿಸಿದೆ. ದೇಶದಲ್ಲಿ ಉದ್ಯೋಗನಾಶದ ಕುರಿತು ಕುರುಹುಗಳನ್ನು ನಾಶಪಡಿಸಲು ಸರ್ಕಾರ ಮುಂದಾಗಿದೆ” ಎಂದು ಕಟುವಾಗಿ ಟೀಕಿಸಿದ್ದಾರೆ.

ಪ್ರಸಿದ್ಧ ವಿಮರ್ಶಕ ವೀರೇಂದ್ರ ಯಾದವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದು, “ನಿರುದ್ಯೋಗ ವಿರುದ್ಧದ ಚಳವಳಿ ದೇಶವನ್ನು ಕಾಪಾಡುವ ಹೋರಾಟವಾಗಿದೆ” ಎಂದು ಬಣ್ಣಿಸಿದ್ದಾರೆ.

ಮಾಜಿ ಐಎಎಸ್‌ ಅಧಿಕಾರಿ ಸೂರ್ಯ ಪ್ರತಾಪ್‌ ಮಾತನಾಡಿ, “ಈ ಚಳವಳಿ ಸರ್ಕಾರವನ್ನು ಬದಲಿಸುವುದಕ್ಕೆ ಸಂಬಂಧಿಸಿದ್ದಲ್ಲ. ಯುವಜನರ ಭವಿಷ್ಯಕ್ಕೆ ಸಂಬಂಧಿಸಿದ್ದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ವರದಿ ಕೃಪೆ: ದಿ ವೈರ್‌

ಇದನ್ನೂ ಓದಿರಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...