Homeಮುಖಪುಟಉತ್ತರ ಪ್ರದೇಶ: ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಮುನ್ನಲೆಗೆ

ಉತ್ತರ ಪ್ರದೇಶ: ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಮುನ್ನಲೆಗೆ

2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ವಿಷಯಾಧಾರಿತ ಚರ್ಚೆಗೆ ತರುವ ನಿಟ್ಟಿನಲ್ಲಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಆರಂಭವಾಗಿದೆ.

- Advertisement -
- Advertisement -

2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ವಿಷಯಾಧಾರಿತ ಚರ್ಚೆಗೆ ತರುವ ನಿಟ್ಟಿನಲ್ಲಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಆರಂಭವಾಗಿದೆ.

ಖಾಲಿ ಇರುವ 25 ಲಕ್ಷ ಉದ್ಯೋಗಗಳನ್ನು ಯೋಗಿ ಆದಿತ್ಯನಾಥ ಸರ್ಕಾರ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಶುಕ್ರವಾರ ಚಾಲನೆ ಪಡೆದಿದೆ.

‘ಛಾತ್ರ್ ಯುವ ರೋಜ್‌‌ಗಾರ್‌ ಅಧಿಕಾರ್‌ ಮೋರ್ಚಾ’ ಸಂಘಟನೆಯ ನೇತೃತ್ವದಲ್ಲಿ ಚಳವಳಿಗೆ ಚಾಲನೆ ನೀಡಲಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಸರ್ಕಾರವನ್ನು ಎಚ್ಚರಿಸಲು ಪ್ರಭಾವ ಬೀರಲು ಸಂಘಟಕರು ಮುಂದಾಗಿದ್ದಾರೆ. ಲಕ್ನೋದಲ್ಲಿ ಸೆ. 24ರಂದು ‘ರೋಜ್‌ಗಾರ್‌ ಅಧಿಕಾರ್‌ ಸಮ್ಮೇಳನ’ ನಡೆದಿದೆ. ಈ ಸಮ್ಮೇಳನದಲ್ಲಿ ವಿರೋಧ ಪಕ್ಷಗಳ ಹಲವು ನಾಯಕರೂ ಪಾಲ್ಗೊಂಡಿದ್ದು, “ಘನತೆಯ ಜೊತೆಗೆ ಉದ್ಯೋಗ”, ಪ್ರತಿಯೊಬ್ಬ ಯುವಜನರಿಗೂ ಶಿಕ್ಷಣವೆಂಬುದು “ಮೂಲಭೂತ ಹಕ್ಕು” ಎಂದು ಬಿಜೆಪಿ ನೇತೃತ್ವದ ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

ಬಿಹಾರದ ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾದ ನಾಯಕ ಮನೋಜ್‌ ಮನ್ಜಿಲ್‌, ಸಾಮಾಜಿಕ ಚಳವಳಿಗಳನ್ನು ದಮನ ಮಾಡುವ ಉತ್ತರ ಪ್ರದೇಶದ ಸರ್ಕಾರದ ಪ್ರವೃತ್ತಿಯನ್ನು ಖಂಡಿಸಿದ್ದಾರೆ. “ದೇಶದ ಯುವಜನರ ನಿರುದ್ಯೋಗಕ್ಕೆ ಶೇ. 10ರಷ್ಟು ಕೊಡುಗೆ ಉತ್ತರ ಪ್ರದೇಶದ್ದಾಗಿದೆ. ಲಾಕ್‌ಡೌನ್‌ ಜಾರಿಯಿಂದಾಗಿ ದೊಡ್ಡ ಮಟ್ಟದ ಉದ್ಯೋಗ ನಷ್ಟ ಉಂಟಾಗಿದೆ” ಎಂದಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ ರಾಷ್ಟ್ರೀಯ ಸಂಯೋಜಕಿ ಸದಫ್‌ ಜಫಾರ್‌ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದ್ದು, “ಯುವಜನರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು” ಎಂದಿದ್ದಾರೆ.

ಮುಂದುವರಿದು, “ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ಮಾರಿ ಹಣವನ್ನು ಹೊಂದಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಸೆಂಟ್ರಲ್‌ ವಿಸ್ತಾ ಥರದ ಅಪ್ರಯೋಜಕ ಯೋಜನೆಗಳಿಗೆ ಹಣವನ್ನು ವಿನಿಯೋಗಿಸುತ್ತಿದೆ” ಎಂದು ಕುಟುಕಿದ್ದಾರೆ.ಆಮ್‌ ಆದ್ಮಿ ಪಾರ್ಟಿಯ ಪ್ರೊ.ಡಿ.ಎನ್‌.ಎಸ್‌.ಯಾದವ್‌ ಅವರು, ಪ್ರಜೆಗಳ ಮೂಲಭೂತ ಹಕ್ಕುಗಳ ಕುರಿತು ಬೆಳಕು ಚೆಲ್ಲಿದ್ದಾರೆ. “ಜನರಿಂದ ಆಯ್ಕೆಯಾದ ಸರ್ಕಾರವನ್ನು ನಿರುದ್ಯೋಗದ ಕುರಿತು ಪ್ರಶ್ನಿಸುವುದು ದೇಶದ ಪ್ರತಿಯೊಬ್ಬ ಯುವಜನರ ಕರ್ತವ್ಯ” ಎಂದಿದ್ದಾರೆ. “ನಿರುದ್ಯೋಗ ಕುರಿತ ಅಂಕಿ-ಅಂಶಗಳನ್ನು ಸರ್ಕಾರ ಮುಚ್ಚಿಡುತ್ತಿದೆ. ಉದ್ಯೋಗ ಸರ್ವೇ ನಡೆಸುವುದನ್ನು ಕಾರ್ಮಿಕ ಸಚಿವಾಲಯ ನಿಲ್ಲಿಸಿದೆ. ದೇಶದಲ್ಲಿ ಉದ್ಯೋಗನಾಶದ ಕುರಿತು ಕುರುಹುಗಳನ್ನು ನಾಶಪಡಿಸಲು ಸರ್ಕಾರ ಮುಂದಾಗಿದೆ” ಎಂದು ಕಟುವಾಗಿ ಟೀಕಿಸಿದ್ದಾರೆ.

ಪ್ರಸಿದ್ಧ ವಿಮರ್ಶಕ ವೀರೇಂದ್ರ ಯಾದವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದು, “ನಿರುದ್ಯೋಗ ವಿರುದ್ಧದ ಚಳವಳಿ ದೇಶವನ್ನು ಕಾಪಾಡುವ ಹೋರಾಟವಾಗಿದೆ” ಎಂದು ಬಣ್ಣಿಸಿದ್ದಾರೆ.

ಮಾಜಿ ಐಎಎಸ್‌ ಅಧಿಕಾರಿ ಸೂರ್ಯ ಪ್ರತಾಪ್‌ ಮಾತನಾಡಿ, “ಈ ಚಳವಳಿ ಸರ್ಕಾರವನ್ನು ಬದಲಿಸುವುದಕ್ಕೆ ಸಂಬಂಧಿಸಿದ್ದಲ್ಲ. ಯುವಜನರ ಭವಿಷ್ಯಕ್ಕೆ ಸಂಬಂಧಿಸಿದ್ದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ವರದಿ ಕೃಪೆ: ದಿ ವೈರ್‌

ಇದನ್ನೂ ಓದಿರಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...