Homeಮುಖಪುಟಉತ್ತರ ಪ್ರದೇಶ: ನ್ಯಾಯಾಲಯ ಅಂಗಳದಲ್ಲಿ ವಕೀಲನಿಗೆ ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶ: ನ್ಯಾಯಾಲಯ ಅಂಗಳದಲ್ಲಿ ವಕೀಲನಿಗೆ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಉತ್ತರ ಪ್ರದೇಶದ ಶಹಜಾನ್ಪುರ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರೊಬ್ಬರಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ನ್ಯಾಯಾಂಗ ಸಂಕೀರ್ಣದ ಮೂರನೇ ಅಂತಸ್ತಿನಲ್ಲಿ ವಕೀಲನ ಶವ ಪತ್ತೆಯಾಗಿದ್ದು, ನಾಡ ಬಂದೂಕು ಮೃತದೇಹದ ಪಕ್ಕದಲ್ಲಿ ಸಿಕ್ಕಿದೆ.

“ಕೊಲೆಯಾಗುವ ಸಂದರ್ಭದಲ್ಲಿ ವ್ಯಕ್ತಿ ಒಬ್ಬರೇ ಇದ್ದರೂ ಎನಿಸುತ್ತದೆ. ವಿಧಿವಿಜ್ಞಾನ ತಂಡವು ಕೆಲಸ ಆರಂಭಿಸಿದೆ. ಕೊಲೆಗೆ ಕಾರಣ ಸ್ಪಷ್ಟವಾಗಿಲ್ಲ” ಎಂದು ಜಹಜಾನ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಕೀಲರೊಬ್ಬರು ಪ್ರತಿಕ್ರಿಯಿಸಿ, “ನಮಗೂ ಹೆಚ್ಚಿನ ಮಾಹಿತಿ ಇಲ್ಲ. ನಾವು ಕೋರ್ಟ್‌ನಲ್ಲಿದ್ದವು. ಒಬ್ಬರು ಬಂದು ಹೀಗೆ ವಕೀಲರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ತಿಳಿಸಿದರು. ಮೃತದೇಹದ ಪಕ್ಕದಲ್ಲಿ ನಾಡಬಂದೂಕನ್ನು ಕಂಡೆವು. ಕೊಲೆಯಾಗಿರುವ ವ್ಯಕ್ತಿಯು ಈ ಹಿಂದೆ ಬ್ಯಾಂಕ್‌ ಉದ್ಯೋಗಿಯಾಗಿದ್ದರು. ನಾಲ್ಕೈದು ವರ್ಷಗಳಿಂದ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದರು” ಎಂದಿರುವುದಾಗಿ ಎನ್‌ಡಿಟಿವಿ ಹೇಳಿದೆ.

“ಈ ಘಟನೆ ದುಃಖಕರ ಹಾಗೂ ನಾಚಿಕೆಗೇಡು” ಎಂದಿರುವ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು, ಉತ್ತರ ಪ್ರದೇಶ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸಿದ್ದಾರೆ.

“ಶಹಜಾನ್ಪುರ ಕೋರ್ಟ್ ಅಂಗಳದಲ್ಲಿ ನಡೆದಿರುವ ಘಟನೆ ಅತ್ಯಂತ ದುಃಖಕರ ಹಾಗೂ ನಾಚಿಗೆಗೇಡಿನ ಸಂಗತಿ. ಬಿಜೆಪಿ ನೇತೃತ್ವದ  ಸರ್ಕಾರದಲ್ಲಿನ ಕಾನೂನು ಸುವ್ಯವಸ್ಥೆಯ ಸ್ಥಿತಿಯನ್ನು ಈ ಘಟನೆ ತೋರುತ್ತದೆ. ಘಟನೆಯ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಸರಿಯಾದ ಕ್ರಮ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಸೆಪ್ಟೆಂಬರ್‌ ಘಟನೆ

ದೆಹಲಿಯ ರೋಹಿಣಿ ನ್ಯಾಯಾಲಯ ಸಂಕೀರ್ಣದಲ್ಲಿ ಸೆಪ್ಟೆಂಬರ್‌ ತಿಂಗಳಲ್ಲಿ ಗುಂಡಿನ ಕಾಳಗ ನಡೆದು, ಮೂವರು ಜೀವ ಕಳೆದುಕೊಂಡಿದ್ದರು.

ವಕೀಲರ ವೇಷದಲ್ಲಿದ್ದ ಗ್ಯಾಂಗ್‌ಸ್ಟರ್‌ಗಳ ಗುಂಪು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಗುಂಡಿನ ಕಾಳಗ ನಡೆದಿತ್ತು. ಈ ಮುಖಾಮುಖಿಯಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್ ಜಿತೆಂದರ್ ಗೋಗಿ ಸೇರಿ ಮೂವರು ಕೊಲೆಯಾಗಿದ್ದರು. ಹಲವರು ಗಾಯಗೊಂಡಿದ್ದರು.

ರೋಹಿಣಿ ಕೋರ್ಟ್ ನಂ. 207 ರ ಗಗನ್ ದೀಪ್ ಸಿಂಗ್ ಎಎಸ್‌ಜೆ NDPS ಕೋರ್ಟ್ ಆವರಣದಲ್ಲಿ ಫೈರಿಂಗ್ ನಡೆದಿತ್ತು. ಸುಮಾರು 40 ಸುತ್ತಿನ ಗುಂಡು ಹಾರಿಸಲಾಗಿತ್ತು. ವಕೀಲರು ಸಹ ಗಾಯಗೊಂಡಿದ್ದರು.

ಹಲವು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ತಿಹಾರ್‌ ಜೈಲಿನಲ್ಲಿದ್ದ ಕುಖ್ಯಾತ ಗ್ಯಾಂಗ್‌ಸ್ಟರ್ ಜಿತೆಂದರ್ ಗೋಗಿಯನ್ನು ವಿಚಾರಣೆಗೆಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಈ ಘಟನೆ ಜರುಗಿತ್ತು. ಗೋಗಿಯ ವಿರೋಧ ಬಣವಾದ ತಿಲ್ಲು ಗ್ಯಾಂಗ್‌ನ ಇಬ್ಬರು ವಕೀಲರು ವೇಷದಲ್ಲಿ ಕೋರ್ಟ್ ಪ್ರವೇಶಿಸಿ ಗೋಗಿ ಮೇಲೆ ಗುಂಡಿಕ್ಕಿದ್ದರು. ಗೋಗಿ ಸ್ಥಳದಲ್ಲೇ ಮೃತಪಟ್ಟ ವೇಳೆ ಅಲ್ಲಿನ  ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡು ಗುಂಡು ಹಾರಿಸಿದ್ದರು.

ಇದನ್ನೂ ಓದಿರಿ: ದೆಹಲಿ ಕೋರ್ಟ್ ಆವರಣದಲ್ಲಿಯೇ ಗುಂಡಿನ ಕಾಳಗ: ಗ್ಯಾಂಗ್‌ಸ್ಟರ್ ಸೇರಿ ಮೂವರ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...