Homeಮುಖಪುಟಉತ್ತರ ಪ್ರದೇಶ: ನ್ಯಾಯಾಲಯ ಅಂಗಳದಲ್ಲಿ ವಕೀಲನಿಗೆ ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶ: ನ್ಯಾಯಾಲಯ ಅಂಗಳದಲ್ಲಿ ವಕೀಲನಿಗೆ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಉತ್ತರ ಪ್ರದೇಶದ ಶಹಜಾನ್ಪುರ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರೊಬ್ಬರಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ನ್ಯಾಯಾಂಗ ಸಂಕೀರ್ಣದ ಮೂರನೇ ಅಂತಸ್ತಿನಲ್ಲಿ ವಕೀಲನ ಶವ ಪತ್ತೆಯಾಗಿದ್ದು, ನಾಡ ಬಂದೂಕು ಮೃತದೇಹದ ಪಕ್ಕದಲ್ಲಿ ಸಿಕ್ಕಿದೆ.

“ಕೊಲೆಯಾಗುವ ಸಂದರ್ಭದಲ್ಲಿ ವ್ಯಕ್ತಿ ಒಬ್ಬರೇ ಇದ್ದರೂ ಎನಿಸುತ್ತದೆ. ವಿಧಿವಿಜ್ಞಾನ ತಂಡವು ಕೆಲಸ ಆರಂಭಿಸಿದೆ. ಕೊಲೆಗೆ ಕಾರಣ ಸ್ಪಷ್ಟವಾಗಿಲ್ಲ” ಎಂದು ಜಹಜಾನ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಕೀಲರೊಬ್ಬರು ಪ್ರತಿಕ್ರಿಯಿಸಿ, “ನಮಗೂ ಹೆಚ್ಚಿನ ಮಾಹಿತಿ ಇಲ್ಲ. ನಾವು ಕೋರ್ಟ್‌ನಲ್ಲಿದ್ದವು. ಒಬ್ಬರು ಬಂದು ಹೀಗೆ ವಕೀಲರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ತಿಳಿಸಿದರು. ಮೃತದೇಹದ ಪಕ್ಕದಲ್ಲಿ ನಾಡಬಂದೂಕನ್ನು ಕಂಡೆವು. ಕೊಲೆಯಾಗಿರುವ ವ್ಯಕ್ತಿಯು ಈ ಹಿಂದೆ ಬ್ಯಾಂಕ್‌ ಉದ್ಯೋಗಿಯಾಗಿದ್ದರು. ನಾಲ್ಕೈದು ವರ್ಷಗಳಿಂದ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದರು” ಎಂದಿರುವುದಾಗಿ ಎನ್‌ಡಿಟಿವಿ ಹೇಳಿದೆ.

“ಈ ಘಟನೆ ದುಃಖಕರ ಹಾಗೂ ನಾಚಿಕೆಗೇಡು” ಎಂದಿರುವ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು, ಉತ್ತರ ಪ್ರದೇಶ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸಿದ್ದಾರೆ.

“ಶಹಜಾನ್ಪುರ ಕೋರ್ಟ್ ಅಂಗಳದಲ್ಲಿ ನಡೆದಿರುವ ಘಟನೆ ಅತ್ಯಂತ ದುಃಖಕರ ಹಾಗೂ ನಾಚಿಗೆಗೇಡಿನ ಸಂಗತಿ. ಬಿಜೆಪಿ ನೇತೃತ್ವದ  ಸರ್ಕಾರದಲ್ಲಿನ ಕಾನೂನು ಸುವ್ಯವಸ್ಥೆಯ ಸ್ಥಿತಿಯನ್ನು ಈ ಘಟನೆ ತೋರುತ್ತದೆ. ಘಟನೆಯ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಸರಿಯಾದ ಕ್ರಮ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಸೆಪ್ಟೆಂಬರ್‌ ಘಟನೆ

ದೆಹಲಿಯ ರೋಹಿಣಿ ನ್ಯಾಯಾಲಯ ಸಂಕೀರ್ಣದಲ್ಲಿ ಸೆಪ್ಟೆಂಬರ್‌ ತಿಂಗಳಲ್ಲಿ ಗುಂಡಿನ ಕಾಳಗ ನಡೆದು, ಮೂವರು ಜೀವ ಕಳೆದುಕೊಂಡಿದ್ದರು.

ವಕೀಲರ ವೇಷದಲ್ಲಿದ್ದ ಗ್ಯಾಂಗ್‌ಸ್ಟರ್‌ಗಳ ಗುಂಪು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಗುಂಡಿನ ಕಾಳಗ ನಡೆದಿತ್ತು. ಈ ಮುಖಾಮುಖಿಯಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್ ಜಿತೆಂದರ್ ಗೋಗಿ ಸೇರಿ ಮೂವರು ಕೊಲೆಯಾಗಿದ್ದರು. ಹಲವರು ಗಾಯಗೊಂಡಿದ್ದರು.

ರೋಹಿಣಿ ಕೋರ್ಟ್ ನಂ. 207 ರ ಗಗನ್ ದೀಪ್ ಸಿಂಗ್ ಎಎಸ್‌ಜೆ NDPS ಕೋರ್ಟ್ ಆವರಣದಲ್ಲಿ ಫೈರಿಂಗ್ ನಡೆದಿತ್ತು. ಸುಮಾರು 40 ಸುತ್ತಿನ ಗುಂಡು ಹಾರಿಸಲಾಗಿತ್ತು. ವಕೀಲರು ಸಹ ಗಾಯಗೊಂಡಿದ್ದರು.

ಹಲವು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ತಿಹಾರ್‌ ಜೈಲಿನಲ್ಲಿದ್ದ ಕುಖ್ಯಾತ ಗ್ಯಾಂಗ್‌ಸ್ಟರ್ ಜಿತೆಂದರ್ ಗೋಗಿಯನ್ನು ವಿಚಾರಣೆಗೆಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಈ ಘಟನೆ ಜರುಗಿತ್ತು. ಗೋಗಿಯ ವಿರೋಧ ಬಣವಾದ ತಿಲ್ಲು ಗ್ಯಾಂಗ್‌ನ ಇಬ್ಬರು ವಕೀಲರು ವೇಷದಲ್ಲಿ ಕೋರ್ಟ್ ಪ್ರವೇಶಿಸಿ ಗೋಗಿ ಮೇಲೆ ಗುಂಡಿಕ್ಕಿದ್ದರು. ಗೋಗಿ ಸ್ಥಳದಲ್ಲೇ ಮೃತಪಟ್ಟ ವೇಳೆ ಅಲ್ಲಿನ  ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡು ಗುಂಡು ಹಾರಿಸಿದ್ದರು.

ಇದನ್ನೂ ಓದಿರಿ: ದೆಹಲಿ ಕೋರ್ಟ್ ಆವರಣದಲ್ಲಿಯೇ ಗುಂಡಿನ ಕಾಳಗ: ಗ್ಯಾಂಗ್‌ಸ್ಟರ್ ಸೇರಿ ಮೂವರ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...