Homeಮುಖಪುಟಉತ್ತರ ಪ್ರದೇಶ | ಲೈಂಗಿಕ ದೌರ್ಜನ್ಯದ ಅಪರಾಧಿಗೆ ಜೀವಾವಧಿ ಶಿಕ್ಷೆ : 'ಲವ್ ಜಿಹಾದ್' ಎಂದ...

ಉತ್ತರ ಪ್ರದೇಶ | ಲೈಂಗಿಕ ದೌರ್ಜನ್ಯದ ಅಪರಾಧಿಗೆ ಜೀವಾವಧಿ ಶಿಕ್ಷೆ : ‘ಲವ್ ಜಿಹಾದ್’ ಎಂದ ನ್ಯಾಯಾಧೀಶ

- Advertisement -
- Advertisement -

“ಹಿಂದುತ್ವ ಗುಂಪುಗಳು ಮತ್ತು ಪೋಷಕರ ಒತ್ತಡದಿಂದ ನಾನು ದೂರು ಕೊಟ್ಟಿದ್ದೆ” ಎಂದು ವಿದ್ಯಾರ್ಥಿನಿ ಹೇಳಿದ ಹೊರತಾಗಿಯೂ, ಆಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ 26 ವರ್ಷದ ಮುಸ್ಲಿಂ ಯುವಕನಿಗೆ ಉತ್ತರ ಪ್ರದೇಶದ ಬರೇಲಿಯ ಜಿಲ್ಲಾ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದೆ ಎಂದು scroll.in ವರದಿ ಮಾಡಿದೆ.

ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಧೀಶ ರವಿ ಕುಮಾರ್ ದಿವಾಕರ್ ಅವರು ಪ್ರಕರಣವನ್ನು ‘ಲವ್ ಜಿಹಾದ್’ ನ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ಆದರೆ, ಈ ಪ್ರಕರಣ ಉತ್ತರ ಪ್ರದೇಶ ಮತಾಂತರ ನಿಷೇಧ ಕಾಯ್ದೆ-2020ರ ಅಡಿಯಲ್ಲಿ ದಾಖಲಿಸಲಾಗಿರಲಿಲ್ಲ ಎಂದು ವರದಿ ತಿಳಿಸಿದೆ.

“ಅಕ್ರಮ ಮತಾಂತರಕ್ಕೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಇರುವಂತಹ ಪರಿಸ್ಥಿತಿಯನ್ನು ಭಾರತದಲ್ಲಿಯೂ ಸೃಷ್ಟಿಸುವ ಉದ್ದೇಶದಿಂದ ಹಿಂದೂ ಹುಡುಗಿಯರಿಗೆ ‘ಪ್ರೀತಿ’ಯ ಆಮಿಷವೊಡ್ಡಲಾಗುತ್ತಿದೆ ಎಂದು ನ್ಯಾಯಾಧೀಶ ರವಿ ಕುಮಾರ್ ಹೇಳಿದ್ದಾರೆ. ಅಕ್ರಮ ಮತಾಂತರವು ದೇಶದ ಗಣನೀಯ ಭದ್ರತೆ, ಸಾರ್ವಭೌಮತ್ವಕ್ಕೆ ಬೆದರಿಕೆ ಒಡ್ಡುತ್ತದೆ” ಎಂದಿದ್ದಾರೆ.

ಆದರೆ, ಈ ಹಿಂದೆ ‘ಲವ್ ಜಿಹಾದ್’ ಕುರಿತಂತೆ ಸಂಸತ್ತಿಗೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಭಾರತೀಯ ಕಾನೂನಿನಲ್ಲಿ ಅಂತಹ ಪದವನ್ನು ವ್ಯಾಖ್ಯಾನಿಸುವ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿತ್ತು.

25 ವರ್ಷದ ಮೊಹಮ್ಮದ್ ಆಲಿಂ ಎನ್ನುವವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಅಪರಾಧಕ್ಕೆ ನೆರವಾದ ಕಾರಣ ನೀಡಿ ಆಲಿಂ ಅವರ ತಂದೆಗೆ ಕೂಡ ಎರಡು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ.

“ಆಲಿಂ ಅವರು ತಮ್ಮ ಹೆಸರನ್ನು ‘ಆನಂದ್’ ಎಂದು ಹೇಳಿ ವಿದ್ಯಾರ್ಥಿನಿಯನ್ನು ವಂಚಿಸಿದ್ದಾರೆ. ಆತ ಆನಂದ್ ಎಂದು ಗೊತ್ತಾದ ನಂತರ ವಿದ್ಯಾರ್ಥಿನಿ ದೂರು ದಾಖಲಿಸಿದ್ದರು. ಕೋಚಿಂಗ್ ಕೇಂದ್ರವೊಂದರಲ್ಲಿ ಆಲಿಂ ಅವರು ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ್ದರು. ನಂತರ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಆಕೆ ಗರ್ಭಿಣಿಯಾದ ಬಳಿಕ ಗರ್ಭಪಾತಕ್ಕೆ ಕಾರಣವಾಗುವ ವಸ್ತುವನ್ನು ಬೆರೆಸಿದ ರಸವನ್ನು ಕುಡಿಸಿದ್ದರು” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ವಿದ್ಯಾರ್ಥಿನಿ 2023ರಲ್ಲಿ ಆಲಿಂ ವಿರುದ್ದ ಪ್ರಕರಣ ದಾಖಲಿಸಿದ್ದಳು. ಆದರೆ, ವಿಚಾರಣೆಯ ವೇಳೆ ತನ್ನ ಆರೋಪಗಳನ್ನು ವಾಪಸ್ ಪಡೆದಿದ್ದಳು. ಆದರೆ, ಆಕೆಯ ವಾದವನ್ನು ನ್ಯಾಯಾಧೀಶ ದಿವಾಕರ್ ತಿರಸ್ಕರಿಸಿದ್ದು, ಆಕೆ ಆಲಿಂನ ಒತ್ತಡಕ್ಕೆ ಮಣಿದು ಈ ಹೇಳಿಕೆ ನೀಡಿದ್ದಾಳೆ ಎಂದಿರುವುದಾಗಿ ವರದಿಗಳು ಹೇಳಿದೆ.

ಜ್ಞಾನವಾಪಿ ಪ್ರಕರಣದಲ್ಲಿ ಆದೇಶ ನೀಡಿದ್ದರು ನ್ಯಾ.ದಿವಾಕರ್ 

ನ್ಯಾಯಾಧೀಶ ದಿವಾಕರ್ ಅವರು ವಾರಣಾಸಿಯಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿದ್ದಾಗ, ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಚಿತ್ರೀಕರಣಕ್ಕೆ ಹಾಗೂ ವಜುಖಾನಾ ಪ್ರದೇಶ ಮುಚ್ಚಲು ಆದೇಶಿಸಿದ್ದರು.

ಇದನ್ನೂ ಓದಿ : ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...