Homeಮುಖಪುಟಉತ್ತರ ಪ್ರದೇಶ | ಲೈಂಗಿಕ ದೌರ್ಜನ್ಯದ ಅಪರಾಧಿಗೆ ಜೀವಾವಧಿ ಶಿಕ್ಷೆ : 'ಲವ್ ಜಿಹಾದ್' ಎಂದ...

ಉತ್ತರ ಪ್ರದೇಶ | ಲೈಂಗಿಕ ದೌರ್ಜನ್ಯದ ಅಪರಾಧಿಗೆ ಜೀವಾವಧಿ ಶಿಕ್ಷೆ : ‘ಲವ್ ಜಿಹಾದ್’ ಎಂದ ನ್ಯಾಯಾಧೀಶ

- Advertisement -
- Advertisement -

“ಹಿಂದುತ್ವ ಗುಂಪುಗಳು ಮತ್ತು ಪೋಷಕರ ಒತ್ತಡದಿಂದ ನಾನು ದೂರು ಕೊಟ್ಟಿದ್ದೆ” ಎಂದು ವಿದ್ಯಾರ್ಥಿನಿ ಹೇಳಿದ ಹೊರತಾಗಿಯೂ, ಆಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ 26 ವರ್ಷದ ಮುಸ್ಲಿಂ ಯುವಕನಿಗೆ ಉತ್ತರ ಪ್ರದೇಶದ ಬರೇಲಿಯ ಜಿಲ್ಲಾ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದೆ ಎಂದು scroll.in ವರದಿ ಮಾಡಿದೆ.

ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಧೀಶ ರವಿ ಕುಮಾರ್ ದಿವಾಕರ್ ಅವರು ಪ್ರಕರಣವನ್ನು ‘ಲವ್ ಜಿಹಾದ್’ ನ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ಆದರೆ, ಈ ಪ್ರಕರಣ ಉತ್ತರ ಪ್ರದೇಶ ಮತಾಂತರ ನಿಷೇಧ ಕಾಯ್ದೆ-2020ರ ಅಡಿಯಲ್ಲಿ ದಾಖಲಿಸಲಾಗಿರಲಿಲ್ಲ ಎಂದು ವರದಿ ತಿಳಿಸಿದೆ.

“ಅಕ್ರಮ ಮತಾಂತರಕ್ಕೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಇರುವಂತಹ ಪರಿಸ್ಥಿತಿಯನ್ನು ಭಾರತದಲ್ಲಿಯೂ ಸೃಷ್ಟಿಸುವ ಉದ್ದೇಶದಿಂದ ಹಿಂದೂ ಹುಡುಗಿಯರಿಗೆ ‘ಪ್ರೀತಿ’ಯ ಆಮಿಷವೊಡ್ಡಲಾಗುತ್ತಿದೆ ಎಂದು ನ್ಯಾಯಾಧೀಶ ರವಿ ಕುಮಾರ್ ಹೇಳಿದ್ದಾರೆ. ಅಕ್ರಮ ಮತಾಂತರವು ದೇಶದ ಗಣನೀಯ ಭದ್ರತೆ, ಸಾರ್ವಭೌಮತ್ವಕ್ಕೆ ಬೆದರಿಕೆ ಒಡ್ಡುತ್ತದೆ” ಎಂದಿದ್ದಾರೆ.

ಆದರೆ, ಈ ಹಿಂದೆ ‘ಲವ್ ಜಿಹಾದ್’ ಕುರಿತಂತೆ ಸಂಸತ್ತಿಗೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಭಾರತೀಯ ಕಾನೂನಿನಲ್ಲಿ ಅಂತಹ ಪದವನ್ನು ವ್ಯಾಖ್ಯಾನಿಸುವ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿತ್ತು.

25 ವರ್ಷದ ಮೊಹಮ್ಮದ್ ಆಲಿಂ ಎನ್ನುವವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಅಪರಾಧಕ್ಕೆ ನೆರವಾದ ಕಾರಣ ನೀಡಿ ಆಲಿಂ ಅವರ ತಂದೆಗೆ ಕೂಡ ಎರಡು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ.

“ಆಲಿಂ ಅವರು ತಮ್ಮ ಹೆಸರನ್ನು ‘ಆನಂದ್’ ಎಂದು ಹೇಳಿ ವಿದ್ಯಾರ್ಥಿನಿಯನ್ನು ವಂಚಿಸಿದ್ದಾರೆ. ಆತ ಆನಂದ್ ಎಂದು ಗೊತ್ತಾದ ನಂತರ ವಿದ್ಯಾರ್ಥಿನಿ ದೂರು ದಾಖಲಿಸಿದ್ದರು. ಕೋಚಿಂಗ್ ಕೇಂದ್ರವೊಂದರಲ್ಲಿ ಆಲಿಂ ಅವರು ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ್ದರು. ನಂತರ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಆಕೆ ಗರ್ಭಿಣಿಯಾದ ಬಳಿಕ ಗರ್ಭಪಾತಕ್ಕೆ ಕಾರಣವಾಗುವ ವಸ್ತುವನ್ನು ಬೆರೆಸಿದ ರಸವನ್ನು ಕುಡಿಸಿದ್ದರು” ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ವಿದ್ಯಾರ್ಥಿನಿ 2023ರಲ್ಲಿ ಆಲಿಂ ವಿರುದ್ದ ಪ್ರಕರಣ ದಾಖಲಿಸಿದ್ದಳು. ಆದರೆ, ವಿಚಾರಣೆಯ ವೇಳೆ ತನ್ನ ಆರೋಪಗಳನ್ನು ವಾಪಸ್ ಪಡೆದಿದ್ದಳು. ಆದರೆ, ಆಕೆಯ ವಾದವನ್ನು ನ್ಯಾಯಾಧೀಶ ದಿವಾಕರ್ ತಿರಸ್ಕರಿಸಿದ್ದು, ಆಕೆ ಆಲಿಂನ ಒತ್ತಡಕ್ಕೆ ಮಣಿದು ಈ ಹೇಳಿಕೆ ನೀಡಿದ್ದಾಳೆ ಎಂದಿರುವುದಾಗಿ ವರದಿಗಳು ಹೇಳಿದೆ.

ಜ್ಞಾನವಾಪಿ ಪ್ರಕರಣದಲ್ಲಿ ಆದೇಶ ನೀಡಿದ್ದರು ನ್ಯಾ.ದಿವಾಕರ್ 

ನ್ಯಾಯಾಧೀಶ ದಿವಾಕರ್ ಅವರು ವಾರಣಾಸಿಯಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿದ್ದಾಗ, ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಚಿತ್ರೀಕರಣಕ್ಕೆ ಹಾಗೂ ವಜುಖಾನಾ ಪ್ರದೇಶ ಮುಚ್ಚಲು ಆದೇಶಿಸಿದ್ದರು.

ಇದನ್ನೂ ಓದಿ : ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...