ಉತ್ತರ ಪ್ರದೇಶದ ಕಾಸ್ಗಂಜ್ನಲ್ಲಿ ಪೊಲೀಸ್ ಠಾಣೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಯುವಕ ಸಾವನ್ನಪ್ಪಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಅಖಿಲೇಶ್ ಯಾದವ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಸ್ಗಂಜ್ನಲ್ಲಿ 22 ವರ್ಷದ ಯುವಕ ನವೆಂಬರ್ 8 ರಂದು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಯುವಕ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಆದರೆ, ಪೊಲೀಸರು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಮೃತನ ಕುಟುಂಬ ಆರೋಪಿಸಿದೆ.’
ಯುವಕ ಅಲ್ತಾಫ್ನ ವಿರುದ್ಧ ಯುವತಿಯನ್ನು ಅಪಹರಿಸಿ ಬಲವಂತದ ಮದುವೆಗೆ ಸಂಬಂಧಿಸಿದಂತೆ ಕಳೆದ ವಾರ ಪ್ರಕರಣದ ದಾಖಲಾಗಿತ್ತು. ಮಂಗಳವಾರ ಬೆಳಗ್ಗೆ ಅಲ್ತಾಫ್ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಅವರು ಠಾಣೆಯಲ್ಲೇ ಮೃತಪಟ್ಟಿದ್ದರು.
ಇದನ್ನೂ ಓದಿ: ಉತ್ತರ ಪ್ರದೇಶ: ಠಾಣೆಯಲ್ಲಿ ಯುವಕನ ಅನುಮಾನಸ್ಪದ ಸಾವು, ಐವರು ಪೊಲೀಸರ ಅಮಾನತು
ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?” ಎಂದು ಟ್ವೀಟ್ ಮಾಡಿದ್ದಾರೆ.
क्या उत्तर प्रदेश में मानवाधिकार नाम की कोई चीज़ बची है?
— Rahul Gandhi (@RahulGandhi) November 10, 2021
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘಟನೆಯನ್ನು ಖಂಡಿಸಿದ್ದು, “ಕಾಸ್ಗಂಜ್ನಲ್ಲಿ ಅಲ್ತಾಫ್, ಆಗ್ರಾದಲ್ಲಿ ಅರುಣ್ ವಾಲ್ಮೀಕಿ, ಸುಲ್ತಾನ್ಪುರದಲ್ಲಿ ರಾಜೇಶ್ ಕೋರಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿರುವ ಘಟನೆಗಳಿಂದ ರಕ್ಷಕರು ಭಕ್ಷಕರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಪೊಲೀಸ್ ಕಸ್ಟಡಿ ಸಾವುಗಳಲ್ಲಿ ಯುಪಿ ದೇಶದಲ್ಲಿ ಅಗ್ರಸ್ಥಾನದಲ್ಲಿದೆ. ಕಾನೂನು ಸುವ್ಯವಸ್ಥೆ ಬಿಜೆಪಿ ಆಡಳಿತದಲ್ಲಿ ಸಂಪೂರ್ಣ ಅಸ್ತವ್ಯಸ್ತವಾಗಿದೆ, ಇಲ್ಲಿ ಯಾರೂ ಸುರಕ್ಷಿತವಾಗಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
कासगंज में अल्ताफ, आगरा में अरुण वाल्मीकि, सुल्तानपुर में राजेश कोरी की पुलिस कस्टडी में मौत जैसी घटनाओं से साफ है कि रक्षक भक्षक बन चुके हैं।
उप्र पुलिस हिरासत में मौत के मामले में देश में सबसे ऊपर है। भाजपा राज में कानून व्यवस्था पूरी तरह चौपट है। यहां कोई भी सुरक्षित नहीं है।
— Priyanka Gandhi Vadra (@priyankagandhi) November 10, 2021
ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ದಲಿತ ಯುವಕನ ಅನುಮಾನಸ್ಪದ ಸಾವು: ಮರ್ಯಾದೆಗೇಡು ಹತ್ಯೆ ಆರೋಪ
ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕೂಡ ಲಾಕಪ್ ಡೆತ್ ಖಂಡಿಸಿ ಟ್ವೀಟ್ ಮಾಡಿದ್ದಾರೆ.”ಕಾಸ್ಗಂಜ್ನಲ್ಲಿ ವಿಚಾರಣೆಗೆಂದು ಕರೆತಂದಿದ್ದ ಯುವಕ ಪೊಲೀಸ್ ಠಾಣೆಯಲ್ಲಿ ಸಾವೀಗಿಡಾಗಿರುವ ಪ್ರಕರಣ ಅತ್ಯಂತ ಅನುಮಾನಾಸ್ಪದವಾಗಿದೆ. ನಿರ್ಲಕ್ಷ್ಯದ ಹೆಸರಲ್ಲಿ ಕೆಲ ಪೊಲೀಸರನ್ನು ಅಮಾನತು ಮಾಡಿರುವುದು ಕೇವಲ ನೆಪ ಮಾತ್ರ. ಬಿಜೆಪಿ ಆಡಳಿತದಲ್ಲಿ ಪೊಲೀಸರ ಮೇಲಿನ ನಂಬಿಕೆ ಮತ್ತು ನ್ಯಾಯಕ್ಕಾಗಿ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.
कासगंज में पूछताछ के लिए लाए गए युवक की थाने में मौत का मामला बेहद संदेहास्पद है। लापरवाही के नाम पर कुछ पुलिसवालों का निलंबन सिर्फ़ दिखावटी कार्रवाई है।
इस मामले में इंसाफ़ व भाजपा के राज में पुलिस में विश्वास की पुनर्स्थापना के लिए न्यायिक जाँच होनी ही चाहिए। #भाजपा_ख़त्म pic.twitter.com/sI2FT05Bv9
— Akhilesh Yadav (@yadavakhilesh) November 10, 2021
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, “ಕಾಸ್ಗಂಜ್ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಮತ್ತೊಬ್ಬ ಯುವಕ ಸಾವನ್ನಪ್ಪಿರುವುದು ಅತ್ಯಂತ ದುಃಖಕರ ಮತ್ತು ನಾಚಿಕೆಗೇಡಿನ ಸಂಗತಿ. ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸರ್ಕಾರ ಕಠಿಣ ಶಿಕ್ಷೆ ನೀಡಬೇಕು. ಸಂತ್ರಸ್ತ ಕುಟುಂಬಕ್ಕೆ ನೆರವು ನೀಡಬೇಕು. ಲಾಕಪ್ ಡೆತ್ ತಡೆಯುವಲ್ಲಿ ಮತ್ತು ಪೊಲೀಸರನ್ನು ಸಾರ್ವಜನಿಕರ ರಕ್ಷಕರನ್ನಾಗಿ ಮಾಡುವಲ್ಲಿ ಯುಪಿ ಸರ್ಕಾರ ವಿಫಲವಾಗಿದೆ ಎಂದು ಸಾಬೀತುಪಡಿಸುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
कासगंज में पुलिस कस्टडी में एक और युवक की मौत अति-दुखद व शर्मनाक। सरकार घटना की उच्चस्तरीय जाँच कराकर दोषियों को सख़्त सजा दे तथा पीड़ित परिवार की मदद भी करे। यूपी सरकार आएदिन कस्टडी में मौत रोकने व पुलिस को जनता की रक्षक बनाने में विफल साबित हो रही है यह अति-चिन्ता की बात।
— Mayawati (@Mayawati) November 11, 2021
“ಅಪ್ತಾಫ್ ಪೊಲೀಸ್ ಠಾಣೆಯಲ್ಲಿ ಶೌಚಾಲಯಕ್ಕೆ ಹೋಗಬೇಕು ಎಂದು ಕೇಳಿದ್ದರು. ಕೆಲವು ನಿಮಿಷಗಳಾದರೂ ಅವರು ಶೌಚಾಲಯದಿಂದ ಹಿಂತಿರುಗದಿದ್ದಾಗ, ಪೊಲೀಸರು ಒಳಗೆ ಹೋಗಿ ನೋಡಿದ್ದಾರೆ. ಅಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ” ಎಂದು ಇಟಾಹ್ನ ಪೊಲೀಸ್ ಮುಖ್ಯಸ್ಥ ರೋಹನ್ ಪ್ರಮೋದ್ ಬೋತ್ರೆ ಹೇಳಿಕೆ ನೀಡಿದ್ದರು.
ಆದರೆ, ಮೃತ ಅಲ್ತಾಫ್ ಅವರ ತಂದೆ ಚಾಂದ್ ಮಿಯಾನ್, “ನಾನು ನನ್ನ ಮಗನನ್ನು ಪೊಲೀಸರಿಗೆ ಒಪ್ಪಿಸಿದ್ದೇನೆ. ಆತನ ಸಾವಿನಲ್ಲಿ ಪೊಲೀಸರ ಕೈವಾಡವಿದೆ ಎಂಬ ಸಂಶಯವಿದೆ” ಎಂದು ಆರೋಪಿಸಿದ್ದಾರೆ. ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಅಷ್ಟು ಚಿಕ್ಕ ಕೊಳಾಯಿಗೆ ನೇಣು ಹಾಕಿಕೊಳ್ಳಲು ಸಾಧ್ಯವೆ…? ಇದು ಪೊಲೀಸರು ಮಾಡಿರುವ ಕೊಲೆ ಎಂದು ಆರೋಪಿಸಲಾಗಿದ್ದು, #JusticeForAltaf ಹ್ಯಾಶ್ಟ್ಯಾಗ್ ಟ್ರೆಂಡ್ ಮಾಡಲಾಗುತ್ತಿದೆ.
“Altaf has died by setting a trap with this tap, says Kasganj SP. The faucet is at 2 feet. Aren't you ashamed”#MuslimLivesMatter https://t.co/kkLFApSu1B
— Randa HABIB (@RandaHabib) November 11, 2021
ಇದನ್ನೂ ಓದಿ: ನೆರೆ ನೀರಿನಲ್ಲಿ ಫೋಟೋ ಶೂಟ್ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರು