Homeಮುಖಪುಟಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡುಗಳಲ್ಲಿ ಅತೀ ಹೆಚ್ಚು ಕ್ಯಾನ್ಸರ್ ಪ್ರಕರಣಗಳು...

ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡುಗಳಲ್ಲಿ ಅತೀ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿ: ಕೇಂದ್ರ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಬಿಹಾರ ಮತ್ತು ತಮಿಳುನಾಡು ದೇಶದಲ್ಲಿ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿರುವ ಐದು ರಾಜ್ಯಗಳಾಗಿವೆ ಎಂದು ಕೇಂದ್ರ ಸರ್ಕರ ಶುಕ್ರವಾರ ತಿಳಿಸಿದೆ.

ಸಾಂಕ್ರಾಮಿಕವಲ್ಲದ ರೋಗಗಳ (ಎನ್‌ಸಿಡಿ) ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರನ್ನು 100% ತಪಾಸಣೆ ಮಾಡಲು ಫೆಬ್ರವರಿ 20 ರಿಂದ ಮಾರ್ಚ್ 31 ರವರೆಗೆ ಸಚಿವಾಲಯವು ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಉತ್ತರ ಪ್ರದೇಶ

“ಈ ಅಭಿಯಾನವನ್ನು ದೇಶಾದ್ಯಂತ ಆಯುಷ್ಮಾನ್ ಆರೋಗ್ಯ ಮಂದಿರಗಳು ಮತ್ತು ಇತರ ಆರೋಗ್ಯ ಸೌಲಭ್ಯಗಳಲ್ಲಿ ನಡೆಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)-ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮ (ಎನ್‌ಸಿಆರ್‌ಪಿ)ವನ್ನು ಉಲ್ಲೇಖಿಸಿದ ಅವರು, ಕ್ಯಾನ್ಸರ್ ಪ್ರಕರಣಗಳು ಹೆಚ್ಚು ಇರುವ ಐದು ರಾಜ್ಯಗಳು ಉತ್ತರ ಪ್ರದೇಶ (2,10,958 ಪ್ರಕರಣಗಳು), ಮಹಾರಾಷ್ಟ್ರ (1,21,717), ಪಶ್ಚಿಮ ಬಂಗಾಳ (1,13,581), ಬಿಹಾರ (1,09,274) ಮತ್ತು ತಮಿಳುನಾಡು (93,536) ಎಂದು ಹೇಳಿದ್ದಾರೆ.

ICMR-NCRP ದತ್ತಾಂಶದ ಪ್ರಕಾರ, 2025 ರಲ್ಲಿ ದೇಶದಲ್ಲಿ ಅಂದಾಜು ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ 15,69,793 ಎಂದು ಅವರು ಹೇಳಿದ್ದಾರೆ. ಜಾಗತಿಕ ಕ್ಯಾನ್ಸರ್ ವೀಕ್ಷಣಾಲಯ, ಅಂತರರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (IARC)ಯನ್ನು ಉಲ್ಲೇಖಿಸಿದ ಅವರು, 2040 ರ ವೇಳೆಗೆ ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳು 22,18,694 ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

“ರೋಗ ಪತ್ತೆಗಾಗಿ ಸುಧಾರಿತ ರೋಗನಿರ್ಣಯ ತಂತ್ರಗಳ ಲಭ್ಯತೆ ಮತ್ತು ಅದು ಜನರ ಕೈಗೆಟುಕದಿರುವುದು, ಹೆಚ್ಚಿದ ಜೀವಿತಾವಧಿ, ವೃದ್ಧರ ಜನಸಂಖ್ಯೆಯ ಹೆಚ್ಚುತ್ತಿರುವುದು, ಹೆಚ್ಚಿನ ಆರೋಗ್ಯ ಪ್ರಜ್ಞೆ ಮತ್ತು ಸುಧಾರಿತ ಆರೋಗ್ಯ ಹುಡುಕಾಟ ನಡವಳಿಕೆ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಲು ಕಾರಣ” ಎಂದು ICMR ಅನ್ನು ಉಲ್ಲೇಖಿಸಿ ಸಚಿವರು ಹೇಳಿದ್ದಾರೆ.

ಅಲ್ಲದೆ, ಕ್ಯಾನ್ಸರ್ ಸೇರಿದಂತೆ ಸಾಂಕ್ರಾಮಿಕವಲ್ಲದ ರೋಗಗಳಿಗೆ ಸಂಬಂಧಿಸಿದ ಅಪಾಯಕಾರಿ ಅಂಶಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ. ಉದಾಹರಣೆಗೆ ತಂಬಾಕು ಮತ್ತು ಮದ್ಯ ಸೇವನೆ, ಸಾಕಷ್ಟು ದೈಹಿಕ ಚಟುವಟಿಕೆಗಳು ಇಲ್ಲದಿರುವುದು, ಅನಾರೋಗ್ಯಕರ ಆಹಾರ ಪದ್ಧತಿ, ಹೆಚ್ಚಿನ ಉಪ್ಪು, ಸಕ್ಕರೆ ಮತ್ತು ಸ್ಯಾಚುರೇಟೆಡ್ ಕೊಬ್ಬಿನ ಸೇವನೆ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಜಾಗತಿಕ ಕ್ಯಾನ್ಸರ್ ವೀಕ್ಷಣಾಲಯ, ಅಂತರರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (IARC) ಮಾಹಿತಿ ಪ್ರಕಾರ, ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳ ಅಂದಾಜು ಪ್ರಮಾಣ 14,13,316 ಇದ್ದು, ವಿಶ್ವದಲ್ಲೆ ಅತೀ ಹೆಚ್ಚು ಕ್ಯಾನ್ಸರ್‌ ಇರುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಭಾರತದ ಪ್ರತಿ 1 ಲಕ್ಷ ಜನರಲ್ಲಿ 98.5 ಜನರಿಗೆ ಕ್ಯಾನ್ಸರ್ ಇವೆ. ಮೊದಲ ಸ್ಥಾನದಲ್ಲಿ ಚೀನಾ ಇದ್ದು, ಇಲ್ಲಿನ 48,24,703 ಜನರಿಗೆ ಕ್ಯಾನ್ಸರ್‌ ಇದೆ. ಇಲ್ಲಿನ ಪ್ರತಿ 1 ಲಕ್ಷ ಜನರಲ್ಲಿ 201.6 ಜನರಿಗೆ ಕ್ಯಾನ್ಸರ್ ಇವೆ. ಅಮೇರಿಕಾ 2ನೇ ಸ್ಥಾನದಲ್ಲಿದ್ದು, ಇಲ್ಲಿ 23,80,189 ಜನರಿಗೆ ಕ್ಯಾನ್ಸರ್ ಇದೆ. ಇಲ್ಲಿನ ಪ್ರತಿ 1 ಲಕ್ಷ ಜನರಲ್ಲಿ 367 ಜನರಿಗೆ ಕ್ಯಾನ್ಸರ್ ಇವೆ.

ICMR-NCRP ದತ್ತಾಂಶವನ್ನು ಉಲ್ಲೇಖಿಸಿದ ಸಚಿವರು, ಶ್ವಾಸಕೋಶ ಮತ್ತು ಸ್ತನದ ಕ್ಯಾನ್ಸರ್‌ ದೇಶದ ಪುರುಷರು ಮತ್ತು ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕ್ಯಾನ್ಸರ್ ಆಗಿದೆ ಎಂದು ಹೇಳಿದ್ದಾರೆ. 2025-26 ರ ಬಜೆಟ್ ಘೋಷಣೆಯ ಪ್ರಕಾರ, ಭಾರತದಾದ್ಯಂತ ಜಿಲ್ಲಾ ಆಸ್ಪತ್ರೆಗಳಲ್ಲಿ 200 ಡೇ ಕೇರ್ ಕ್ಯಾನ್ಸರ್ ಕೇಂದ್ರಗಳನ್ನು (DCCCs) ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  “ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

“ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...