Homeಮುಖಪುಟಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡುಗಳಲ್ಲಿ ಅತೀ ಹೆಚ್ಚು ಕ್ಯಾನ್ಸರ್ ಪ್ರಕರಣಗಳು...

ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡುಗಳಲ್ಲಿ ಅತೀ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿ: ಕೇಂದ್ರ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಬಿಹಾರ ಮತ್ತು ತಮಿಳುನಾಡು ದೇಶದಲ್ಲಿ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿರುವ ಐದು ರಾಜ್ಯಗಳಾಗಿವೆ ಎಂದು ಕೇಂದ್ರ ಸರ್ಕರ ಶುಕ್ರವಾರ ತಿಳಿಸಿದೆ.

ಸಾಂಕ್ರಾಮಿಕವಲ್ಲದ ರೋಗಗಳ (ಎನ್‌ಸಿಡಿ) ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರನ್ನು 100% ತಪಾಸಣೆ ಮಾಡಲು ಫೆಬ್ರವರಿ 20 ರಿಂದ ಮಾರ್ಚ್ 31 ರವರೆಗೆ ಸಚಿವಾಲಯವು ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಉತ್ತರ ಪ್ರದೇಶ

“ಈ ಅಭಿಯಾನವನ್ನು ದೇಶಾದ್ಯಂತ ಆಯುಷ್ಮಾನ್ ಆರೋಗ್ಯ ಮಂದಿರಗಳು ಮತ್ತು ಇತರ ಆರೋಗ್ಯ ಸೌಲಭ್ಯಗಳಲ್ಲಿ ನಡೆಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)-ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮ (ಎನ್‌ಸಿಆರ್‌ಪಿ)ವನ್ನು ಉಲ್ಲೇಖಿಸಿದ ಅವರು, ಕ್ಯಾನ್ಸರ್ ಪ್ರಕರಣಗಳು ಹೆಚ್ಚು ಇರುವ ಐದು ರಾಜ್ಯಗಳು ಉತ್ತರ ಪ್ರದೇಶ (2,10,958 ಪ್ರಕರಣಗಳು), ಮಹಾರಾಷ್ಟ್ರ (1,21,717), ಪಶ್ಚಿಮ ಬಂಗಾಳ (1,13,581), ಬಿಹಾರ (1,09,274) ಮತ್ತು ತಮಿಳುನಾಡು (93,536) ಎಂದು ಹೇಳಿದ್ದಾರೆ.

ICMR-NCRP ದತ್ತಾಂಶದ ಪ್ರಕಾರ, 2025 ರಲ್ಲಿ ದೇಶದಲ್ಲಿ ಅಂದಾಜು ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ 15,69,793 ಎಂದು ಅವರು ಹೇಳಿದ್ದಾರೆ. ಜಾಗತಿಕ ಕ್ಯಾನ್ಸರ್ ವೀಕ್ಷಣಾಲಯ, ಅಂತರರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (IARC)ಯನ್ನು ಉಲ್ಲೇಖಿಸಿದ ಅವರು, 2040 ರ ವೇಳೆಗೆ ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳು 22,18,694 ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

“ರೋಗ ಪತ್ತೆಗಾಗಿ ಸುಧಾರಿತ ರೋಗನಿರ್ಣಯ ತಂತ್ರಗಳ ಲಭ್ಯತೆ ಮತ್ತು ಅದು ಜನರ ಕೈಗೆಟುಕದಿರುವುದು, ಹೆಚ್ಚಿದ ಜೀವಿತಾವಧಿ, ವೃದ್ಧರ ಜನಸಂಖ್ಯೆಯ ಹೆಚ್ಚುತ್ತಿರುವುದು, ಹೆಚ್ಚಿನ ಆರೋಗ್ಯ ಪ್ರಜ್ಞೆ ಮತ್ತು ಸುಧಾರಿತ ಆರೋಗ್ಯ ಹುಡುಕಾಟ ನಡವಳಿಕೆ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಲು ಕಾರಣ” ಎಂದು ICMR ಅನ್ನು ಉಲ್ಲೇಖಿಸಿ ಸಚಿವರು ಹೇಳಿದ್ದಾರೆ.

ಅಲ್ಲದೆ, ಕ್ಯಾನ್ಸರ್ ಸೇರಿದಂತೆ ಸಾಂಕ್ರಾಮಿಕವಲ್ಲದ ರೋಗಗಳಿಗೆ ಸಂಬಂಧಿಸಿದ ಅಪಾಯಕಾರಿ ಅಂಶಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ. ಉದಾಹರಣೆಗೆ ತಂಬಾಕು ಮತ್ತು ಮದ್ಯ ಸೇವನೆ, ಸಾಕಷ್ಟು ದೈಹಿಕ ಚಟುವಟಿಕೆಗಳು ಇಲ್ಲದಿರುವುದು, ಅನಾರೋಗ್ಯಕರ ಆಹಾರ ಪದ್ಧತಿ, ಹೆಚ್ಚಿನ ಉಪ್ಪು, ಸಕ್ಕರೆ ಮತ್ತು ಸ್ಯಾಚುರೇಟೆಡ್ ಕೊಬ್ಬಿನ ಸೇವನೆ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಜಾಗತಿಕ ಕ್ಯಾನ್ಸರ್ ವೀಕ್ಷಣಾಲಯ, ಅಂತರರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (IARC) ಮಾಹಿತಿ ಪ್ರಕಾರ, ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳ ಅಂದಾಜು ಪ್ರಮಾಣ 14,13,316 ಇದ್ದು, ವಿಶ್ವದಲ್ಲೆ ಅತೀ ಹೆಚ್ಚು ಕ್ಯಾನ್ಸರ್‌ ಇರುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಭಾರತದ ಪ್ರತಿ 1 ಲಕ್ಷ ಜನರಲ್ಲಿ 98.5 ಜನರಿಗೆ ಕ್ಯಾನ್ಸರ್ ಇವೆ. ಮೊದಲ ಸ್ಥಾನದಲ್ಲಿ ಚೀನಾ ಇದ್ದು, ಇಲ್ಲಿನ 48,24,703 ಜನರಿಗೆ ಕ್ಯಾನ್ಸರ್‌ ಇದೆ. ಇಲ್ಲಿನ ಪ್ರತಿ 1 ಲಕ್ಷ ಜನರಲ್ಲಿ 201.6 ಜನರಿಗೆ ಕ್ಯಾನ್ಸರ್ ಇವೆ. ಅಮೇರಿಕಾ 2ನೇ ಸ್ಥಾನದಲ್ಲಿದ್ದು, ಇಲ್ಲಿ 23,80,189 ಜನರಿಗೆ ಕ್ಯಾನ್ಸರ್ ಇದೆ. ಇಲ್ಲಿನ ಪ್ರತಿ 1 ಲಕ್ಷ ಜನರಲ್ಲಿ 367 ಜನರಿಗೆ ಕ್ಯಾನ್ಸರ್ ಇವೆ.

ICMR-NCRP ದತ್ತಾಂಶವನ್ನು ಉಲ್ಲೇಖಿಸಿದ ಸಚಿವರು, ಶ್ವಾಸಕೋಶ ಮತ್ತು ಸ್ತನದ ಕ್ಯಾನ್ಸರ್‌ ದೇಶದ ಪುರುಷರು ಮತ್ತು ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕ್ಯಾನ್ಸರ್ ಆಗಿದೆ ಎಂದು ಹೇಳಿದ್ದಾರೆ. 2025-26 ರ ಬಜೆಟ್ ಘೋಷಣೆಯ ಪ್ರಕಾರ, ಭಾರತದಾದ್ಯಂತ ಜಿಲ್ಲಾ ಆಸ್ಪತ್ರೆಗಳಲ್ಲಿ 200 ಡೇ ಕೇರ್ ಕ್ಯಾನ್ಸರ್ ಕೇಂದ್ರಗಳನ್ನು (DCCCs) ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  “ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

“ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...