Homeಮುಖಪುಟಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡುಗಳಲ್ಲಿ ಅತೀ ಹೆಚ್ಚು ಕ್ಯಾನ್ಸರ್ ಪ್ರಕರಣಗಳು...

ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡುಗಳಲ್ಲಿ ಅತೀ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿ: ಕೇಂದ್ರ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಬಿಹಾರ ಮತ್ತು ತಮಿಳುನಾಡು ದೇಶದಲ್ಲಿ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿರುವ ಐದು ರಾಜ್ಯಗಳಾಗಿವೆ ಎಂದು ಕೇಂದ್ರ ಸರ್ಕರ ಶುಕ್ರವಾರ ತಿಳಿಸಿದೆ.

ಸಾಂಕ್ರಾಮಿಕವಲ್ಲದ ರೋಗಗಳ (ಎನ್‌ಸಿಡಿ) ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರನ್ನು 100% ತಪಾಸಣೆ ಮಾಡಲು ಫೆಬ್ರವರಿ 20 ರಿಂದ ಮಾರ್ಚ್ 31 ರವರೆಗೆ ಸಚಿವಾಲಯವು ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಉತ್ತರ ಪ್ರದೇಶ

“ಈ ಅಭಿಯಾನವನ್ನು ದೇಶಾದ್ಯಂತ ಆಯುಷ್ಮಾನ್ ಆರೋಗ್ಯ ಮಂದಿರಗಳು ಮತ್ತು ಇತರ ಆರೋಗ್ಯ ಸೌಲಭ್ಯಗಳಲ್ಲಿ ನಡೆಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)-ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮ (ಎನ್‌ಸಿಆರ್‌ಪಿ)ವನ್ನು ಉಲ್ಲೇಖಿಸಿದ ಅವರು, ಕ್ಯಾನ್ಸರ್ ಪ್ರಕರಣಗಳು ಹೆಚ್ಚು ಇರುವ ಐದು ರಾಜ್ಯಗಳು ಉತ್ತರ ಪ್ರದೇಶ (2,10,958 ಪ್ರಕರಣಗಳು), ಮಹಾರಾಷ್ಟ್ರ (1,21,717), ಪಶ್ಚಿಮ ಬಂಗಾಳ (1,13,581), ಬಿಹಾರ (1,09,274) ಮತ್ತು ತಮಿಳುನಾಡು (93,536) ಎಂದು ಹೇಳಿದ್ದಾರೆ.

ICMR-NCRP ದತ್ತಾಂಶದ ಪ್ರಕಾರ, 2025 ರಲ್ಲಿ ದೇಶದಲ್ಲಿ ಅಂದಾಜು ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ 15,69,793 ಎಂದು ಅವರು ಹೇಳಿದ್ದಾರೆ. ಜಾಗತಿಕ ಕ್ಯಾನ್ಸರ್ ವೀಕ್ಷಣಾಲಯ, ಅಂತರರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (IARC)ಯನ್ನು ಉಲ್ಲೇಖಿಸಿದ ಅವರು, 2040 ರ ವೇಳೆಗೆ ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳು 22,18,694 ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

“ರೋಗ ಪತ್ತೆಗಾಗಿ ಸುಧಾರಿತ ರೋಗನಿರ್ಣಯ ತಂತ್ರಗಳ ಲಭ್ಯತೆ ಮತ್ತು ಅದು ಜನರ ಕೈಗೆಟುಕದಿರುವುದು, ಹೆಚ್ಚಿದ ಜೀವಿತಾವಧಿ, ವೃದ್ಧರ ಜನಸಂಖ್ಯೆಯ ಹೆಚ್ಚುತ್ತಿರುವುದು, ಹೆಚ್ಚಿನ ಆರೋಗ್ಯ ಪ್ರಜ್ಞೆ ಮತ್ತು ಸುಧಾರಿತ ಆರೋಗ್ಯ ಹುಡುಕಾಟ ನಡವಳಿಕೆ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಲು ಕಾರಣ” ಎಂದು ICMR ಅನ್ನು ಉಲ್ಲೇಖಿಸಿ ಸಚಿವರು ಹೇಳಿದ್ದಾರೆ.

ಅಲ್ಲದೆ, ಕ್ಯಾನ್ಸರ್ ಸೇರಿದಂತೆ ಸಾಂಕ್ರಾಮಿಕವಲ್ಲದ ರೋಗಗಳಿಗೆ ಸಂಬಂಧಿಸಿದ ಅಪಾಯಕಾರಿ ಅಂಶಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ. ಉದಾಹರಣೆಗೆ ತಂಬಾಕು ಮತ್ತು ಮದ್ಯ ಸೇವನೆ, ಸಾಕಷ್ಟು ದೈಹಿಕ ಚಟುವಟಿಕೆಗಳು ಇಲ್ಲದಿರುವುದು, ಅನಾರೋಗ್ಯಕರ ಆಹಾರ ಪದ್ಧತಿ, ಹೆಚ್ಚಿನ ಉಪ್ಪು, ಸಕ್ಕರೆ ಮತ್ತು ಸ್ಯಾಚುರೇಟೆಡ್ ಕೊಬ್ಬಿನ ಸೇವನೆ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಜಾಗತಿಕ ಕ್ಯಾನ್ಸರ್ ವೀಕ್ಷಣಾಲಯ, ಅಂತರರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (IARC) ಮಾಹಿತಿ ಪ್ರಕಾರ, ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳ ಅಂದಾಜು ಪ್ರಮಾಣ 14,13,316 ಇದ್ದು, ವಿಶ್ವದಲ್ಲೆ ಅತೀ ಹೆಚ್ಚು ಕ್ಯಾನ್ಸರ್‌ ಇರುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಭಾರತದ ಪ್ರತಿ 1 ಲಕ್ಷ ಜನರಲ್ಲಿ 98.5 ಜನರಿಗೆ ಕ್ಯಾನ್ಸರ್ ಇವೆ. ಮೊದಲ ಸ್ಥಾನದಲ್ಲಿ ಚೀನಾ ಇದ್ದು, ಇಲ್ಲಿನ 48,24,703 ಜನರಿಗೆ ಕ್ಯಾನ್ಸರ್‌ ಇದೆ. ಇಲ್ಲಿನ ಪ್ರತಿ 1 ಲಕ್ಷ ಜನರಲ್ಲಿ 201.6 ಜನರಿಗೆ ಕ್ಯಾನ್ಸರ್ ಇವೆ. ಅಮೇರಿಕಾ 2ನೇ ಸ್ಥಾನದಲ್ಲಿದ್ದು, ಇಲ್ಲಿ 23,80,189 ಜನರಿಗೆ ಕ್ಯಾನ್ಸರ್ ಇದೆ. ಇಲ್ಲಿನ ಪ್ರತಿ 1 ಲಕ್ಷ ಜನರಲ್ಲಿ 367 ಜನರಿಗೆ ಕ್ಯಾನ್ಸರ್ ಇವೆ.

ICMR-NCRP ದತ್ತಾಂಶವನ್ನು ಉಲ್ಲೇಖಿಸಿದ ಸಚಿವರು, ಶ್ವಾಸಕೋಶ ಮತ್ತು ಸ್ತನದ ಕ್ಯಾನ್ಸರ್‌ ದೇಶದ ಪುರುಷರು ಮತ್ತು ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕ್ಯಾನ್ಸರ್ ಆಗಿದೆ ಎಂದು ಹೇಳಿದ್ದಾರೆ. 2025-26 ರ ಬಜೆಟ್ ಘೋಷಣೆಯ ಪ್ರಕಾರ, ಭಾರತದಾದ್ಯಂತ ಜಿಲ್ಲಾ ಆಸ್ಪತ್ರೆಗಳಲ್ಲಿ 200 ಡೇ ಕೇರ್ ಕ್ಯಾನ್ಸರ್ ಕೇಂದ್ರಗಳನ್ನು (DCCCs) ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  “ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

“ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....